ಹೆಚ್ಚುತ್ತಿಲ್ಲ ತುಂಗಭದ್ರಾ ಒಳಹರಿವು


Team Udayavani, Jul 19, 2017, 3:37 PM IST

19-koppala-1.gif

ಕೊಪ್ಪಳ: ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ನೀರಿನ ಒಳ ಹರಿವಿನ ಪ್ರಮಾಣ ಸುಧಾರಣೆ ಕಾಣುತ್ತಲೇ
ಇಲ್ಲ. ಈವರೆಗೂ ಜಲಾಶಯದಲ್ಲಿ ಕೇವಲ 15 ಟಿಎಂಸಿಯಷ್ಟು ನೀರು ಮಾತ್ರ ಸಂಗ್ರಹವಾಗಿದೆ. ಕಳೆದ ವರ್ಷ ಈ ಇದೇ ವೇಳೆಗೆ 38 ಟಿಎಂಸಿ ನೀರು ಸಂಗ್ರಹವಾಗಿತ್ತು. ಆದರೆ ಈ ವರ್ಷದ ಮಳೆ ಕೊರತೆಯ ಪರಿಸ್ಥಿತಿಗೆ ಅಚ್ಚುಕಟ್ಟು ಪ್ರದೇಶದ ರೈತರು ಆತಂಕ ವ್ಯಕ್ತ ಪಡಿಸುವಂತಾಗಿದೆ.

ತುಂಗಭದ್ರಾ ಜಲಾಶಯದ ನೀರನ್ನೇ ನಂಬಿ 12 ಲಕ್ಷಕ್ಕೂ ಅಧಿಕ ರೈತರು ಭತ್ತ ಸೇರಿದಂತೆ ಇತರೆ ಬೆಳೆ ಬೆಳೆದು ಜೀವನ
ನಡೆಸುತ್ತಿದ್ದಾರೆ. ಆದರೆ ವರ್ಷದಿಂದ ವರ್ಷಕ್ಕೆ ಜಲಾಶಯಕ್ಕೆ ನೀರು ಹರಿದು ಬರುವಿಕೆಯ ಪ್ರಮಾಣ ಕ್ಷೀಣಿಸಲಾರಂಭಿಸುತ್ತಿದೆ.
ಜಲಾಶಯ ಭರ್ತಿಯಾಗಬೇಕೆಂದರೆ ಶಿವಮೊಗ್ಗ ಸೇರಿದಂತೆ ಮಲೆನಾಡು ಪ್ರದೇಶ ಭಾಗದಲ್ಲಿ ಸಮೃದ್ಧಿ ಮಳೆಯಾದರೆ ಮಾತ್ರ
ನೀರು ಹರಿದು ಬರದಲಿದೆ. ಆದರೆ ಆ ಭಾಗದಲ್ಲಿಯೇ ಈ ವರ್ಷ ಮಳೆ ಕೊರತೆ ಕಾಡಲಾರಂಭಿಸಿದೆ. ಇದು ತುಂಗಭದ್ರ
ಜಲಾಶಯ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಆತಂಕ ಮೂಡಿಸುತ್ತಿದೆ. 

ಕೇವಲ 15 ಟಿಎಂಸಿ ಸಂಗ್ರಹ: ಪ್ರಸ್ತುತ ತುಂಗಭದ್ರ ಜಲಾಶಯದಲ್ಲಿ ಮಂಗಳವಾರದ ಅಂತ್ಯಕ್ಕೆ ಕೇವಲ 15 ಟಿಎಂಸಿ ನೀರು ಮಾತ್ರ
ಸಂಗ್ರಹವಾಗಿದೆ. ಕಳೆದ ವರ್ಷದ ಇದೇ ದಿನಕ್ಕೆ ಜಲಾಶಯಕ್ಕೆ 38 ಟಿಎಂಸಿ ನೀರು ಹರಿದು ಬಂದಿತ್ತು. ಈ ವರ್ಷ ಇದರ ಅರ್ಧದಷ್ಟು ನೀರು ಹರಿದು ಬಂದಿಲ್ಲ. ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳವೇ ಆಗುತ್ತಿಲ್ಲ. ಕೇವಲ 3-4 ಸಾವಿರ ಕ್ಯೂಸೆಕ್‌ನ ಅಂತರದಲ್ಲಿಯೇ ಒಳ ಹರಿವಿನ ಪ್ರಮಾಣವಿದೆ. ಕಳೆದ ವರ್ಷ 8 ರಿಂದ 10 ಸಾವಿರ ಕ್ಯೂಸೆಕ್‌ ಅಂತರದಲ್ಲಿ ಜಲಾಶಯದ ಒಳ ಹರಿವು ಇರುತ್ತಿತ್ತು. ಶಿವಮೊಗ್ಗ ಸೇರಿದಂತೆ ಇತರೆ ಭಾಗದಲ್ಲಿ ಮಳೆಯಾಗುವ  ಲಕ್ಷಣವಿದೆ ಎನ್ನುವ ವರದಿ ಹವಾಮಾನ ಇಲಾಖೆ ನೀಡಿದ್ದರೂ ಹೇಳಿಕೊಳ್ಳುವಂತಹ ಮಳೆಯಾಗುತ್ತಿಲ್ಲ ಎನ್ನುವ ಮಾತುಗಳು ಜಲಾಶಯದ ಅಧಿ ಕಾರಿಗಳ ವರ್ಗದಿಂದಲೇ ತಿಳಿದು ಬಂದಿದೆ.

2003ರಲ್ಲೂ ಈ ವರ್ಷದ ಪರಿಸ್ಥಿತಿಯಂತೆ ನೀರಿನ ಕೊರತೆ ಎದುರಾಗಿತ್ತು. ಆಗಲೂ ರೈತರಲ್ಲಿ ಬೆಳೆಗೆ ನೀರು ಲಭಿಸುವುದೋ?
ಇಲ್ಲವೋ ಎನ್ನುವ ಆತಂಕ ಮನೆ ಮಾಡಿತ್ತು. ಈ ವರ್ಷವೂ ಅದೇ ಪರಿಸ್ಥಿತಿ ಬಂದೊದಗಲಿದೆಯೇ? ಎನ್ನುವ ಆತಂಕ ರೈತರಲ್ಲಿ ಮೂಡಲಾರಂಭಿಸಿದೆ. ಪ್ರತಿ ವರ್ಷದಂತೆ ಜಲಾಶಯದ ನೀರನ್ನು ಜುಲೈ ಕೊನೆಯ ವಾರದಲ್ಲಿ ಕಾಲುವೆಗೆ ನೀರು ವಿವಿಧ ಹಂತದಲ್ಲಿ ಬಿಡಲಾಗುತ್ತಿತ್ತು. ಆದರೆ ಈ ವರ್ಷ ಜಲಾಶಯದಲ್ಲೇ ನೀರಿನ ಕೊರತೆ ಎದುರಾಗಿದ್ದು, ತುಂಗಭದ್ರಾ ಜಲಾಶಯದ ಮಂಡಳಿಗೂ ನೀರಿನ ನಿರ್ವಹಣೆ ಮಾಡುವುದು ದೊಡ್ಡ ಸವಾಲಿನ  ಕೆಲಸವಾಗಿದೆ. ಅಚ್ಚುಕಟ್ಟು ಪ್ರದೇಶದ ರೈತರೂ ಒಳ ಹರಿವಿನ ಹೆಚ್ಚಳದ ಕುರಿತು
ಆಶಾ ಭಾವನೆಯಿಟ್ಟಿದ್ದಾರೆ. 

ಶಿವಮೊಗ್ಗ ಭಾಗದಲ್ಲಿ ಮಳೆಯ ಕೊರತೆ ಇರುವ ಕಾರಣ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಕಳೆದ ವರ್ಷಕ್ಕಿಂತಲೂ ಕಡಿಮೆಯಿದೆ.
ಒಳ ಹರಿವಿನ ಪ್ರಮಾಣ ಹೆಚ್ಚಾಗುವ ಕುರಿತು ನಾವು ನಿರೀಕ್ಷೆಯಿಟ್ಟಿದ್ದೇವೆ. ಪ್ರತಿ ವರ್ಷ ಜುಲೈ ಕೊನೆಯ ವಾರ ಹಾಗೂ ಆಗಸ್ಟ್‌ನಲ್ಲಿ ಕಾಲುವೆಗೆ ನೀರು ಬಿಡಲಾಗುತ್ತಿತ್ತು. ಈ ವರ್ಷ ಐಸಿಸಿ ಸಭೆ ನಡೆದ ಬಳಿಕ ದಿನಾಂಕ ನಿಗದಿಯಾಗಲಿದೆ.
ಡಿ.ರಂಗಾರಡ್ಡಿ, ಕಾರ್ಯದರ್ಶಿ,  ತುಂಗಭದ್ರಾ ಮಂಡಳಿ,

ದತ್ತು ಕಮ್ಮಾರ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.