ತಂದೆ , ನಾಲ್ವರು ಮಕ್ಕಳು ಸೇರಿ ಐವರು ಕೆರೆಯಲ್ಲಿ ನೀರುಪಾಲು
Team Udayavani, Nov 6, 2017, 2:42 PM IST
ಕೊಪ್ಪಳ; ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊರಬಂದು ಈಜಲು ತೆರಳಿದ್ದ ಹೈದರಾಬಾದ್ ಮೂಲದ ಐವರು ನೀರುಪಾಲಾದ ದಾರುಣ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹೇಮಗುಡ್ಡ ಕೆರೆಯಲ್ಲಿ ಸಂಭವಿಸಿದೆ.
ಹೈದರಾಬಾದ್ ಮೂಲದ ರಾಘವೇಂದ್ರ ಎಂಬವರು ತಮ್ಮ ನಾಲ್ವರು ಮಕ್ಕಳ ಜತೆ ಗಂಗಾವತಿಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸೋಮವಾರ ಹೇಮಗುಡ್ಡದಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೋಗಿ, ಅಲ್ಲಿಂದ ಕೆಳಗಡೆ ಬಂದಾಗ ಕೆರೆಗೆ ಈಜಲು ತೆರಳಿದ್ದರು.
ತಂದೆ ಹಾಗೂ ನಾಲ್ವರು ಮಕ್ಕಳು ಈಜಾಡುತ್ತಿದ್ದಾಗಲೇ ಆಳಕ್ಕೆ ಸಿಲುಕಿದ್ದ ಮಕ್ಕಳನ್ನು ತಂದೆ ರಕ್ಷಿಸಲು ಹೋದ ಸಂದರ್ಭದಲ್ಲಿ ಸುಳಿಗೆ ಸಿಲುಕಿ ಐವರೂ ನೀರುಪಾಲಾಗಿರುವುದಾಗಿ ಪ್ರತ್ಯಕ್ಷದರ್ಶಿ ಸಂಗಮೇಶ್ ತಿಳಿಸಿದ್ದಾರೆ. . ಪವಿತ್ರ 14), ಪವನಿ (12), ಪೌರ್ಣಿಕಾ, ಆಶೀಶ್(14), ರಾಘವೇಂದ್ರ (35ವರ್ಷ) ಎಂದು ಗುರುತಿಸಲಾಗಿದೆ.
ನೀರುಪಾಲಾದ ಐವರ ಮೃತದೇಹವನ್ನು ಸ್ಥಳೀಯ ಈಜುಗಾರರ ಸಹಾಯದಿಂದ ಮೇಲಕ್ಕೆ ತರಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿರುವುದಾಗಿ ವರದಿ ತಿಳಿಸಿದೆ. ಪ್ರಕರಣ ಗಂಗಾವತಿ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್