ಕಾರಟಗಿ:ಭಾರೀ ಅಗ್ನಿ ಅವಘಡ;16 ಅಂಗಡಿಗಳು ಭಸ್ಮ
Team Udayavani, Jan 21, 2018, 9:20 AM IST
ಕಾರಟಗಿ : ಇಲ್ಲಿ ಭಾನುವಾರ ಬೆಳಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು 16ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭಿವಿಸಿಲ್ಲ.
ಶಾರ್ಟ್ ಸರ್ಕ್ಯೂಟ್ನಿಂದಾಗಿ ಹೊಟೇಲೊಂದರಲ್ಲಿ ಹೊತ್ತಿಕೊಂಡ ಬೆಂಕಿ ಪಕ್ಕದಲ್ಲಿದ್ದ ಅಂಗಡಿಗಳಿಗೆ ವ್ಯಾಪಿಸಿದೆ.ಗ್ಯಾಸ್ ಸಿಲಿಂಡರ್ವೊಂದಕ್ಕೆ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ.
ಸೈಕಲ್ ರಿಪೇರಿ ಅಂಗಡಿ,ಕಟ್ಟಿಂಗ್ ಶಾಪ್,ಫಾಸ್ಟ್ ಫುಡ್ ಅಂಗಡಿ ಸೇರಿದಂತೆ 16 ಗೂಡಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಗ್ಯಾರೇಜ್ ನಲ್ಲಿ ರಿಪೇರಿಗೆಂದು ಇರಿಸಲಾಗಿದ್ದ 12 ಕ್ಕೂ ಹೆಚ್ಚು ಬೈಕ್ಗಳು ಸುಟ್ಟು ಭಸ್ಮವಾಗಿದೆ.
ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸಿ ಹರಸಾಹಸ ಪಟ್ಟು ಬೆಂಕಿಯನ್ನು ತಹಬದಿಗೆ ತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್