32 ದೇವದಾಸಿ ಮಕ್ಕಳ ಸಾಮೂಹಿಕ ವಿವಾಹ


Team Udayavani, Jun 10, 2018, 1:12 PM IST

hub-1.jpg

ಕೊಪ್ಪಳ: ನಗರ, ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಬೇರೂರಿದ ಅನಿಷ್ಟ ದೇವದಾಸಿ ಪದ್ಧತಿ ದೂರ ಮಾಡಲು, ಅವರ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ 32 ದೇವದಾಸಿ ಮಕ್ಕಳಿಗೆ ಸರಳ ವಿವಾಹ ಮಾಡುವ ಮೂಲಕ ರಾಜ್ಯದ ಗಮನ ಸೆಳೆದಿದೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಶನಿವಾರ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ, ಮಾದಿಗ-ಛಲವಾದಿ ಮಹಾ ಸಭಾದ ಸಹಯೋಗದಲ್ಲಿ 32 ನವ ಜೋಡಿಗಳಿಗೆ ಮದುವೆ ಮಾಡುವ ಮೂಲಕ ಇತರೆ ದೇವದಾಸಿ ಮಹಿಳೆಯರಲ್ಲೂ ಹಾಗೂ ಅನಿಷ್ಟ ಪದ್ಧತಿಯಿಂದ ದೂರ ಉಳಿಯಲು ಜಾಗೃತಿಯ ಸಂದೇಶ ನೀಡಿದೆ. 

ಹೈದ್ರಾಬಾದ್‌ ಕರ್ನಾಟಕ ಭಾಗದಲ್ಲಿ ಈ ಹಿಂದೆ ದೇವದಾಸಿ ಪದ್ಧತಿ ಹೆಚ್ಚಾಗಿತ್ತು. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ದಲಿತ ಮಹಿಳೆಯರನ್ನೇ ಹೆಚ್ಚಾಗಿ ಮುತ್ತು ಕಟ್ಟುವುದು, ಬಸವಿ ಬಿಡುವುದು, ದೇವರ ಮಕ್ಕಳು ಎಂದೆಲ್ಲ ಕರೆದು ಅವರನ್ನು ಪುರುಷರ ದೇಹ ಸುಖಕ್ಕಾಗಿ ಮೀಸಲಿಡುವಂತಹ ಕಾಲವಿತ್ತು. ದಲಿತ ಬಾಲಕಿ ವಯಸ್ಕಳಾದ ತಕ್ಷಣ ಗುಡಿ, ಗುಂಡಾದರಲ್ಲಿ ಮುತ್ತು ಕಟ್ಟುವ ಕೆಲಸ ಮಾಡಲಾಗುತ್ತಿತ್ತು. ಅದೇ ಪದ್ಧತಿ ಬೆಳೆದು ಅವರ ಮಕ್ಕಳ ಭವಿಷ್ಯವೇ ಹಾಳಾಗುತ್ತಿತ್ತು. ಈ ಅನಿಷ್ಟ ಪದ್ಧತಿ ದೂರ ಮಾಡಿ ದೇವದಾಸಿ ಮಕ್ಕಳಿಗೂ ಜೀವನ ಕಟ್ಟಿ ಕೊಡುವ ಉದ್ದೇಶದಿಂದ ವೇದಿಕೆಯು ಅವರ ಜೀವನಕ್ಕೆ ಬೆಳಕಾಗುವಂತೆ ಮಾಡಿದೆ. 

ರಾಜ್ಯದಲ್ಲಿ ಮೊದಲ ಪ್ರಯತ್ನ: ಸರ್ಕಾರದ ಸಹಾಯಧನದ ಸಹಯೋಗದಲ್ಲಿ ವಿಮುಕ್ತ ದೇವದಾಸಿ ಮಹಿಳಾ ವೇದಿಕೆಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ದೇವದಾಸಿ ಕುಷ್ಟಗಿಯಲ್ಲಿ ಶನಿವಾರ 32 ನವ ಜೋಡಿಗೆ ಮದುವೆ ಮಾಡಿಸಿದೆ. ಚಿತ್ರದುರ್ಗ ಆದಿಜಾಂಬವ ಮಠದ ಶ್ರೀ ಷಡಕ್ಷರಿಮುನಿ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಅಕ್ಷತಾರೋಪಣ ಕಾರ್ಯಕ್ರಮ ಜರುಗಿತು. ಸ್ವಾಮೀಜಿಗಳೇ ನವ ಜೋಡಿಗಳಿಗೆ ಜೀವನದ ಬಂಡಿ ಸಾಗಲು ಪ್ರತಿಜ್ಞಾ ವಿಧಿ ಬೋಧಿಸಿದರು. ಸಾಮೂಹಿಕ ವಿವಾಹ ಸಾಂಪ್ರದಾಯಕವಾಗಿಯೇ ನಡೆದರೂ ಅಕ್ಷತೆಯು ವೇದಿಕೆಯಯಲ್ಲಿಯೇ ಜರುಗಿತು. ಸ್ವಾಮೀಜಿಗಳ ಸಾನಿಧ್ಯದಲ್ಲೇ ವರರು ವಧುಗಳಿಗೆ ತಾಳಿ ಕಟ್ಟುವ ಮೂಲಕ ನವ ಜೀವನಕ್ಕೆ ಕಾಲಿರಿಸಿದರು. ಈ ಸಾಮೂಹಿಕ ವಿವಾಹದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್‌.ಆಂಜನೇಯ, ಶಾಸಕ ಅಮರೇಗೌಡ ಬಯ್ನಾಪುರ ಸೇರಿದಂತೆ ವಿವಿಧ ಮುಖಂಡರು ಪಾಲ್ಗೊಂಡಿದ್ದರು.

ದೇವದಾಸಿ ಪದ್ಧತಿ ದೂರ ಮಾಡಲು ಈ ಹಿಂದಿನ ಕಾಂಗ್ರೆಸ್‌ ಸರ್ಕಾರ ಹಲವು ಸೌಲಭ್ಯ ಕಲ್ಪಿಸಿದೆ. ದೇವದಾಸಿ ಮಕ್ಕಳ ಮದುವೆಯಾದರೆ 5 ಲಕ್ಷ ಪ್ರೋತ್ಸಾಹ ಧನ ನೀಡಲು ಯೋಜನೆ ಜಾರಿ ಮಾಡಿದೆ. ಜಮೀನು, ಸಾಲ ನೀಡುವಿಕೆ, ಆರ್ಥಿಕ ನೆರವೂ ನೀಡಲಾಗುತ್ತಿದೆ.
 ಎಚ್‌.ಆಂಜನೇಯ, ಮಾಜಿ ಸಚಿವ

ಕುಷ್ಟಗಿಯಲ್ಲಿ ಈ ಹಿಂದೆ ಓರ್ವ ದೇವದಾಸಿ ಮಹಿಳೆ ತನ್ನ ಎರಡು ಹೆಣ್ಣು ಮಕ್ಕಳಿಗೆ ಮದುವೆ ಮಾಡಲಾಗದೇ
ಹುಚ್ಚಿಯಾದಳು. ಈಗ ಅಂತಹ ಮಕ್ಕಳಿಗೆ ಮದುವೆ ಮಾಡಿಸಿ ಅನಿಷ್ಟ ಪದ್ಧತಿ ದೂರ ಮಾಡುವ ಪ್ರಯತ್ನ ಮಾಡಿದ್ದೇವೆ.
 ಚಂದಾಲಿಂಗ ಕಲಾಲಬಂಡಿ, ಕಾರ್ಯಕ್ರಮ ಆಯೋಜಕ

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.