ವೈದ್ಯ ಕಾಲೇಜಿನಲ್ಲಿ ಶೇ.50 ಹುದ್ದೆ ಖಾಲಿ


Team Udayavani, Aug 30, 2018, 4:30 PM IST

30-agust-22.jpg

ಕೊಪ್ಪಳ: ಹಿಂದುಳಿದ ಜಿಲ್ಲೆಯಲ್ಲಿ ಮೆಡಿಕಲ್‌ ಕಾಲೇಜು ಬಂತಲ್ಲ ಎಂದು ಈ ಭಾಗದ ಜನರು ಖುಷಿಯಲ್ಲಿದ್ದರೆ, ಆರಂಭಿಸಿದ ನಾಲ್ಕೇ ವರ್ಷದಲ್ಲಿ ಮುಚ್ಚುವ ಸ್ಥಿತಿಗೆ ಬಂದಿದೆ. ಶೇ.50ಕ್ಕಿಂತಲೂ ಹೆಚ್ಚು ಹುದ್ದೆಗಳು ಖಾಲಿಯಿವೆ. ಎಂಟು ಬಾರಿ ಸಂದರ್ಶನಕ್ಕೆ ಕರೆದರೂ ಬರುವುದು ಬೆರಳೆಣಿಕೆ ಎಷ್ಟು ಜನ ಎಂದು ಆಡಳಿತ ಮಂಡಳಿ ಬೇಸರ ವ್ಯಕ್ತಪಡಿಸುತ್ತಿದೆ. ಹೀಗಾಗಿ ಕಿಮ್ಸ್‌ನ ಸ್ಥಿತಿ ಹರೋ…. ಹರ… ಎನ್ನುವಂತಾಗಿದೆ.

ಈ ಭಾಗದ ಜನಪ್ರತಿನಿಧಿಗಳ ನಿರಂತರ ಹೋರಾಟದಿಂದ ಹೈಕ ಭಾಗದ ಕೊಪ್ಪಳ ಜಿಲ್ಲೆಗೆ ಮೆಡಿಕಲ್‌ ಕಾಲೇಜನ್ನು ಕಳೆದ ನಾಲ್ಕು ವರ್ಷದ ಹಿಂದೆ ರಾಜ್ಯ ಸರ್ಕಾರ ಘೋಷಣೆ ಮಾಡಿತು. ನೂರೆಂಟು ಕನಸು ಕಟ್ಟಿಕೊಂಡು ಕಾಲೇಜು ಆರಂಭವಾಗಿದೆ. ಆದರೆ, ಇಲ್ಲಿನ ಎಂಬಿಬಿಎಸ್‌ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಪರಿಪೂರ್ಣ ಪ್ರಾಧ್ಯಾಪಕರಿಲ್ಲ. ಆಡಳಿತ ಕಚೇರಿಯಲ್ಲಿನ ದಾಖಲಾತಿ ನಿರ್ವಹಣೆಗೆ ಸಿಬ್ಬಂದಿ ಕೊರತೆ ಪ್ರತಿ ವರ್ಷ ಕಾಡುತ್ತಿದೆ. ಇದನ್ನು ಗಮನಿಸಿ ಕಳೆದ ನಾಲ್ಕು ವರ್ಷದಿಂದಲೂ ಮೆಡಿಕಲ್‌ ಕೌನ್ಸಿಲ್‌ ಆಫ್‌ ಇಂಡಿಯಾ ಕಾಲೇಜಿಗೆ ವಿದ್ಯಾರ್ಥಿಗಳ ಪ್ರವೇಶಾತಿಗೆ ನಿರಾಕರಣೆ ಮಾಡುತ್ತಲೇ ಬಂದಿದೆ. ಈ ವರ್ಷ ಕಿಮ್ಸ್‌ ನಿರ್ದೇಶಕರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರಿಂದ 150 ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಿಕ್ಕಿದೆ.

ಏನಿದೆ ಹುದ್ದೆಗಳ ಸ್ಥಿತಿ-ಗತಿ?: 4ನೇ ವರ್ಷಕ್ಕೆ ಬೋಧಕರ ಪೈಕಿ ಪ್ರೊಫೆಸರ್‌, ಅಸೋಸಿಯೇಟ್‌ ಪ್ರೊಫೆಸರ್‌, ಅಸಿಸ್ಟೆಂಟ್‌ ಪ್ರೊಫೆಸರ್‌, ಸಿನಿಯರ್‌ ರೆಸಿಡೆಂಟ್‌, ಟೂಟರ್‌, ಜೂನಿಯರ್‌ ರೆಸಿಡೆಂಟ್‌ ಸೇರಿದಂತೆ ಒಟ್ಟಾರೆ 212 ಹುದ್ದೆಗಳಿವೆ. ಈ ಪೈಕಿ ಕೇವಲ 88 ಹುದ್ದೆಗಳು ಭರ್ತಿಯಾಗಿವೆ. ಅಂದರೆ, 124 ಹುದ್ದೆ ಖಾಲಿಯಿವೆ. ಬೋಧಕೇತರ ಹುದ್ದೆಗಳಲ್ಲಿ 380 ಹುದ್ದೆಗಳಿದ್ದು, ಕೇವಲ 151 ಹುದ್ದೆಗಳು ಭರ್ತಿಯಾಗಿದ್ದರೆ, ಇನ್ನೂ 244 ಹುದ್ದೆಗಳು ಖಾಲಿಯಿವೆ. ಬೋಧಕ ಹಾಗೂ ಬೋಧಕೇತರರು ಸೇರಿದಂತೆ ಒಟ್ಟಾರೆ 368 ಹುದ್ದೆಗಳು ಖಾಲಿ ಇರುವುದು ಕಾಲೇಜು ಆಡಳಿತ ಮಂಡಳಿಯ ನಿದ್ದೆಗೆಡುವಂತೆ ಮಾಡಿದೆ.

8 ಬಾರಿ ಸಂದರ್ಶನ: ಮೆಡಿಕಲ್‌ ಕಾಲೇಜು ಆಡಳಿತ ಮಂಡಳಿ ಕಳೆದ 4 ವರ್ಷಗಳಲ್ಲಿ ಖಾಲಿ ಹುದ್ದೆಗಳ ಅನುಸಾರ ಅಧಿಸೂಚನೆ ಹೊರಡಿಸಿ ಬೋಧಕರ ನೇರ ಸಂದರ್ಶನಕ್ಕೆ ಅ ಧಿಸೂಚನೆ ಹೊರಡಿಸಿದೆ. ಆದರೆ ಕೇವಲ ಬೆರಳೆಣಿಕೆಯ ವೈದ್ಯರು ಸಂದರ್ಶನಕ್ಕೆ ಹಾಜರಾಗುತ್ತಾರೆ. ಸಂದರ್ಶನದಲ್ಲಿ ಆಯ್ಕೆಯಾದ್ರೂ ಕಾರ್ಯ ನಿರ್ವಹಿಸಲು ಹಿಂದೇಟು ಹಾಕುತ್ತಿದ್ದಾರೆ. ಕಿಮ್ಸ್‌ನಲ್ಲಿ ನೇಮಕ ಹೊಂದಿದ ವೈದ್ಯರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ಜೊತೆಗೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಬೇಕಾಗಿದೆ. ಅಲ್ಲದೇ, ಇಲ್ಲಿ ಆರ್‌ಟಿಐ ಕಾರ್ಯಕರ್ತರ ಕಾಟ ಹಾಗೂ ವೈದ್ಯರ ಮೇಲಿನ ಹಲ್ಲೆಯಿಂದ ಕಿಮ್ಸ್‌ಗೆ ಯಾರೂ ಬರಲು ಮನಸ್ಸು ಮಾಡುತ್ತಿಲ್ಲ ಎನ್ನುವ ಮಾತು ಆಡಳಿತ ಮಂಡಳಿಯಿಂದ ಕೇಳಿ ಬಂದಿದೆ.

ವಿದ್ಯಾರ್ಥಿಗಳ ಸ್ಥಿತಿ ಏನು?: ಕಾಲೇಜಿನಲ್ಲಿ ವೈದ್ಯರ ಹುದ್ದೆಗಳೇ ಖಾಲಿಯಿದ್ದರೆ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವವರು ಯಾರು? ಆಡಳಿತ ಮಂಡಳಿಯಲ್ಲಿ ನೌಕರರೇ ಇಲ್ಲವೆಂದರೆ ಕಿಮ್ಸ್‌ ಪತ್ರ ವ್ಯವಹಾರಗಳು ಹೇಗೆ ನಡೆಯಬೇಕು ಎನ್ನುವ ಪ್ರಶ್ನೆ ಎದುರಾಗಿದೆ. ವೈದ್ಯಕೀಯ ಕೋರ್ಸ್‌ ಇನ್ನುಳಿದ ಕೋರ್ಸ್‌ಗಳಂತಲ್ಲ. ಇಲ್ಲಿ ಪ್ರಬುದ್ಧತೆಯ ಬೋಧನೆ ಅಗತ್ಯವಾಗಿದೆ. ಸಕಾಲಕ್ಕೆ ಪ್ರಾಯೋಗಿಕ ತರಗತಿ ನಡೆಸಬೇಕಾಗುತ್ತೆ. ಆದರೆ, ಹುದ್ದೆಗಳೇ ಖಾಲಿಯಿವೆ. ಇದೆಲ್ಲವೂ ಸರ್ಕಾರಕ್ಕೆ ಗೊತ್ತಿದ್ದರೂ ಕಣ್ಮುಚ್ಚಿ ಕುಳುತಿರುವುದೇಕೆ ಎನ್ನುವ ಪ್ರಶ್ನೆ ಎದುರಾಗಿದೆ.

ಕಿಮ್ಸ್‌ನಲ್ಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ ನಡೆಸಿದರೂ ಯಾರೂ ಬರಲು ಮನಸ್ಸು ಮಾಡುತ್ತಿಲ್ಲ. ಬೆರಳೆಣಿಕೆಯ ವೈದ್ಯರು ಬರುತ್ತಾರೆ. ಕಾಲೇಜಿನಲ್ಲಿ ಬೋಧನೆ ಮಾಡಲು ಆರಂಭಿಸುತ್ತಿದ್ದಂತೆ ಹಿಂದೇಟು ಹಾಕಿ ವಾಪಾಸ್ಸಾಗುತ್ತಿದ್ದಾರೆ. ಕಿಮ್ಸ್‌ನ ಪರಿಸ್ಥಿತಿ ತುಂಬ ಗಂಭೀರವಾಗಿದೆ. ಇದು ಸರ್ಕಾರಕ್ಕೂ ಗೊತ್ತಿದೆ.
ಡಾ| ಶಂಕರ ಮಲ್ಲಾಪುರೆ,
ಕಿಮ್ಸ್‌ ನಿರ್ದೇಶಕ

ದತ್ತು ಕಮ್ಮಾರ 

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.