ಕೊಪ್ಪಳ ನಗರಸಭೆಯಲ್ಲಿ ಕುಣಿದ ಕುರುಡು ಕಾಂಚಾಣ?


Team Udayavani, Aug 31, 2018, 3:38 PM IST

31-agust-17.jpg

ಕೊಪ್ಪಳ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಭರ್ಜರಿ ರಂಗೇರಿದ್ದು, ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಅಭ್ಯರ್ಥಿಗಳ ಮಧ್ಯೆ ಕುರುಡು ಕಾಂಚಾಣ ಕುಣಿದಾಡುತ್ತಿದೆ ಎನ್ನುವ ಆಪಾದನೆ ಕೇಳಿ ಬಂದಿದೆ. ನಗರದ 26ನೇ ವಾರ್ಡ್‌ನ ಪಕ್ಷೇತರ ಅಭ್ಯರ್ಥಿ ಜನರನ್ನು ಗುಂಪು ಗುಂಪಾಗಿ ನಿಲ್ಲಿಸಿಕೊಂಡು ಗುಸುಗುಸು ಚರ್ಚೆ ನಡೆಸಿದ್ದು, ಕ್ಯಾಮರಾ, ಪೊಲೀಸರು ಕಣ್ಣಿಗೆ ಬೀಳುತ್ತಿದ್ದಂತೆ ದಿಕ್ಕಾಪಾಲಾಗಿ ಓಡಾಡಿದ ಪ್ರಸಂಗ ಗುರುವಾರ ನಡೆದಿದೆ.

ಸ್ಥಳೀಯ ಚುನಾವಣೆಗಳು ಮುಂದೆ ಲೋಕಸಭಾ ಚುನಾವಣೆಗೆ ತಳಪಾಯವಾಗಲಿವೆ ಎಂದು ಅರಿತ ಶಾಸಕ ಹಾಗೂ ಸಂಸದರು ಪ್ರತಿಷ್ಠೆಯನ್ನಾಗಿ ತಗೆದುಕೊಂಡಿದ್ದಾರೆ. ಅದರಲ್ಲೂ ಕೊಪ್ಪಳ ನಗರಸಭೆ ಕೈ ವಶ ಮಾಡಿಕೊಳ್ಳಬೇಕೆಂದು ಪಣ ತೊಟ್ಟಿದ್ದ ಶಾಸಕ ರಾಘವೇಂದ್ರ ಹಿಟ್ನಾಳ ವಾರ್ಡ್‌, ವಾರ್ಡ್‌ನಲ್ಲೂ ಸುತ್ತಾಟ ನಡೆಸಿ ಮತ ಕೇಳಿದ್ದರು. ಕೈ ಅಭಿವೃದ್ಧಿ ನೋಡಿ ಬೆಂಬಲಿಸಿ ಎಂದಿದ್ದರು. ಶಾಸಕರಾಗಿದ್ದೂ ನಗರಸಭೆಯಲ್ಲಿ ಅಧಿಕಾರ ಕಳೆದುಕೊಂಡರೆ ಆಡಳಿತ ಪಕ್ಷಕ್ಕೆ ಮುಜುಗುರ ಉಂಟಾಗಲಿದೆ ಎನ್ನುವುದನ್ನು ಅರಿತು ತಾವೇ ಚುನಾವಣೆಗೆ ನಿಂತವರಂತೆ ಭರ್ಜರಿ ಯೋಜನೆ ಹಾಕಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ.

ಇನ್ನೂ ಮುಂದೆ ಲೋಕಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಸಂಸದ ಸಂಗಣ್ಣ ಕರಡಿ ಅವರಂತೂ ಪ್ರತಿ ವಾರ್ಡ್‌ನಲ್ಲೂ ಸುತ್ತಾಟ ನಡೆಸಿ ಪಕ್ಕಾ ಅಭ್ಯರ್ಥಿಗಳನ್ನು ಹುಡುಕಿ ಕಣಕ್ಕಿಳಿಸಿದ್ದು ಬಿಜೆಪಿ ಬಾವುಟ ಹಾರಿಸಲೇಬೇಕೆಂದು ಶಪಥ ಮಾಡಿದ್ದಾರೆ. ಉಳಿದಂತೆ ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾದಲ್ಲೂ ಕೈ-ಕಮಲವೇ ನೇರ ಹಣಾಹಣಿಯಲ್ಲಿವೆ. ಈ ಎಲ್ಲ ಅಭ್ಯರ್ಥಿಗಳ ಸುತ್ತಲೂ ಮಧ್ಯವರ್ತಿಗಳ ಮೂಲಕ ಕುರುಡ ಕಾಂಚಾಣ ಕುಣಿಯುತ್ತಿದೆ ಎನ್ನುವ ಆಪಾದನೆ ಜೋರಾಗಿ ಕೇಳಿ ಬಂದಿದೆ. 

ಅದರಲ್ಲೂ ಕೊಪ್ಪಳದಲ್ಲಿ ಪಕ್ಷೇತರ ಅಭ್ಯರ್ಥಿ ಲಲಿತಾ ಮಾಲಗಿತ್ತಿ ಅವರು 26ನೇ ವಾರ್ಡ್‌ನಲ್ಲಿ ಮತದಾರರನ್ನು ಸೆಳೆಯಲು ಗುರುವಾರ ನಾನಾ ಪ್ರಯತ್ನ ನಡೆಸಿದ್ದಾರೆ ಎನ್ನುವ ಮಾಹಿತಿ ದೊರೆತ ಬೆನ್ನಲ್ಲೇ ಪೊಲೀಸರು ದಿಢೀರ್‌ ಭೇಟಿ ನೀಡಿದರು. ಜೊತೆಗೆ ಮಾಧ್ಯಮಗಳ ಕಣ್ಣು ಅತ್ತ ಬೀಳುತ್ತಿದ್ದಂತೆ ವಾಹನದಲ್ಲಿ ಅಭ್ಯರ್ಥಿಗಳ ಬೆಂಬಲಿಗರು ಪಲಾಯನ ಮಾಡಿದರು. ಇನ್ನೂ ಮಹಿಳೆಯರ ಹೆಸರು ಪಟ್ಟಿ ಮಾಡುತ್ತಿದ್ದು ಕ್ಯಾಮರಾದಲ್ಲಿ ಸೆರೆಯಾಯಿತು. ಅಲ್ಲದೇ, ಕ್ಯಾಮರಾ ಕಂಡ ತಕ್ಷಣ ಟಾಟಾ ಏಸ್‌ ವಾಹನ ಏರಿ ಕಾಲ್ಕಿತ್ತರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಭ್ಯರ್ಥಿಗಳು ಮಕ್ಕಳನ್ನು ಬಳಕೆ ಮಾಡಿಕೊಂಡು ಪ್ರಚಾರ ನಡೆಸಿದ್ದರೂ ಚುನಾವಣಾ ವೀಕ್ಷಕರು, ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸಿದರು. ಕೆಲ ವಾರ್ಡ್‌ನಲ್ಲಿ ಮಾತ್ರ ನಿಗಾ ವಹಿಸಿದ್ದ ಅಧಿಕಾರಿಗಳ ತಂಡ ಬೆರಳೆಣಿಕೆಯಷ್ಟು ಪ್ರಕರಣ ದಾಖಲಿಸಿ ಜಾರಿಕೊಂಡಿದ್ದು ಕಂಡು ಬಂದಿತು.

ಟಾಪ್ ನ್ಯೂಸ್

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.