ರಸ್ತೆ ಸಂಚಾರಕ್ಕೆ ರೈತರ ನಿರ್ಬಂಧ: ನಿವಾಸಿಗಳ ಆಕ್ರೋಶ


Team Udayavani, Sep 5, 2018, 4:32 PM IST

5-september-22.jpg

ಕುಷ್ಟಗಿ: ಹಿರೇಮನ್ನಾಪುರ ಗ್ರಾಮದ ಬಳಿ ಇರುವ ಏಕಲವ್ಯ ಕಾಲೋನಿಗೆ ಸರ್ಕಾರ ನಿರ್ಮಿಸುತ್ತಿರುವ ರಸ್ತೆಗೆ ಕೆಲವು ಜಮೀನು ಮಾಲೀಕರು ಕ್ಯಾತೆ ತೆಗೆದು ಕಾಮಗಾರಿ ಬಂದ್‌ ಮಾಡಿಸಿ, ರಸ್ತೆ ಸಂಚಾರ ನಿರ್ಬಂಧಿ ಸಿದ ಹಿನ್ನೆಲೆಯಲ್ಲಿ ಹಿರೇಮನ್ನಾಪುರ ಏಕಲವ್ಯ ಕಾಲೋನಿ ಗ್ರಾಮಸ್ಥರು ಇಲ್ಲಿನ ತಹಶೀಲ್ದಾರ್‌, ಪೊಲೀಸ್‌ ಠಾಣೆಯಲ್ಲಿ ಪ್ರತ್ಯೇಕ ಮನವಿ ಸಲ್ಲಿಸಿದರು.

ಹಿರೇಮನ್ನಾಪುರ ಗ್ರಾಮದಿಂದ 3 ಕಿಮೀ ದೂರದಲ್ಲಿರುವ ಏಕಲವ್ಯ ನಗರಕ್ಕೆ ಹಿರೇಮನ್ನಾಪುರ-ನೀರಲೂಟಿ ಸಂಪರ್ಕ ರಸ್ತೆಯಿಂದ ಎರಡೂವರೆ ಕಿಮೀ ರಸ್ತೆ ನಿರ್ಮಾಣಕ್ಕೆ ಸರ್ಕಾರ 80 ಲಕ್ಷ ರೂ. ಬಿಡುಗಡೆಗೊಳಿಸಿದೆ. ಈಗಾಗಲೇ ರಸ್ತೆ ಕಾಮಗಾರಿ ಕೈಗೆತ್ತಿಕ್ಕೊಳ್ಳಲಾಗಿದ್ದು ಶೇ.50 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಬಾಕಿ ಉಳಿದ ಕಾಮಗಾರಿಗೆ ರಸ್ತೆಯ ಅಂಚಿನ ಜಮೀನಿನ ಮಾಲೀಕರು ಕ್ಯಾತೆ ತೆಗೆದು ರಸ್ತೆ ಕಾಮಗಾರಿ ತಡೆ ಹಿಡಿದಿದ್ದರೆ. ರಸ್ತೆ ನಿರ್ಮಿಸುವ ಪೂರ್ವದಲ್ಲಿ ಗುತ್ತಿಗೆದಾರ ಡಿ.ಎಸ್‌. ಕಂದಕೂರು ಹಾಗೂ ಸಂಬಂಧಿಸಿದ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ ಸದರಿ ರಸ್ತೆ ಮಾರ್ಗ ಉದ್ದ, ಅಗಲದ ವ್ಯಾಪ್ತಿ ಗುರುತಿಸಿ ಒಪ್ಪಿಗೆ ಪಡೆದೇ ಕಾಮಗಾರಿ ಆರಂಭಿಸಲಾಗಿದ್ದರೂ ಏಕಲವ್ಯ ನಗರದ ಜನರು ಈ ರಸ್ತೆಯಲ್ಲಿ ಸಂಚರಿಸದಂತೆ ಮುಳ್ಳು ಕಂಟಿಗಳನ್ನು ಹಾಕಿ ವಿನಾಕಾರಣ ತೊಂದರೆ ನೀಡುತ್ತಿದ್ದಾರೆ. ಇದರಿಂದ ಏಕಲವ್ಯ ನಗರದ ಶಾಲೆ, ಕಾಲೇಜು ವಿದ್ಯಾರ್ಥಿಗಳು, ಗ್ರಾಮಸ್ಥರು, ಏಕಲವ್ಯ ನಗರದ ವಾಹನ ಬೈಕ್‌ ಸಂಚರಿಸದಂತೆ ನಿರ್ಬಂಧ ಹೇರಿದ್ದಾರೆ. 

ಹಿರೇಮನ್ನಾಪುರ, ಕುಷ್ಟಗಿ ತಾಲೂಕು ಕೇಂದ್ರಕ್ಕೆ ಹೋಗಿ ಬರಲು ಏಕೈಕ ಮಾರ್ಗ ಇದಾಗಿದ್ದು, ಈ ರಸ್ತೆಯಲ್ಲಿ ಸಂಚರಿಸಿದರೆ ಜಮೀನು ಮಾಲೀಕರಿಂದ ಅವಾಚ್ಯವಾಗಿ ಬೈಸಿಕೊಳ್ಳಬೇಕಿದೆ. ಈ ತೊಂದರೆ ಕುಷ್ಟಗಿ ಠಾಣೆಯ ಪಿಎಸೈ ವಿಶ್ವನಾಥ ಹಿರೇಗೌಡ್ರು ಅವರ ಬಳಿ ನಿವೇದಿಸಿಕೊಂಡರು ಏಕಲವ್ಯ ನಗರದ ಕಿರಿಕಿರಿ ಮುಂದುವರಿಸಿದ್ದಾರೆ. ಇವರ ಬೈಗುಳಕ್ಕೆ ಹೆದರಿ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಹಿಂಜರಿಯುತ್ತಿದ್ದಾರೆ. ಏಕಲವ್ಯ ಕಾಲೋನಿಯಲ್ಲಿ ಜನರ ಆರೋಗ್ಯದಲ್ಲಿ ಏರುಪೇರಾದರೂ ಅರೆ ಬರೆ ನಿರ್ಮಾಣದ
ರಸ್ತೆಯಲ್ಲಿ ಸಂಚರಿಸಲು ದಾರಿ ಇಲ್ಲವಾಗಿದೆ. ಈ ಕಾಲೋನಿಗೆ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಬರಲು ತೊಂದರೆಯಾಗಿದೆ ಎಂದು ಕಾಲೋನಿಯ ನಿವಾಸಿಗಳು ಅಳಲು ತೋಡಿಕೊಂಡರು.

ಏಕಲವ್ಯ ಕಾಲೋನಿಯ ನಿವಾಸಿಗಳ ಮನವಿ ಸ್ವೀಕರಿಸಿದ ಪಿಎಸೈ ವಿಶ್ವಾನಾಥ ಹಿರೇಗೌಡ್ರು ಅವರು, ಈ ರಸ್ತೆಯಿಂದ ಜಮೀನು ಮಾಲೀಕರಿಗೆ ಹೆಚ್ಚು ಅನುಕೂಲ ಸಿಗಲಿದೆ. ಈ ಅನುಕೂಲತೆ ಅರಿಯದೇ ಏಕಲವ್ಯ ನಿವಾಸಿಗಳೊಂದಿಗೆ ಕ್ಯಾತೆ ತೆಗೆದಿರುವುದು ಸರಿ ಅಲ್ಲ. ಸರ್ಕಾರ ನಿರ್ಮಿಸಿರುವ ರಸ್ತೆಗೆ ಅಡ್ಡಿ ಪಡಿಸುವುದು, ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧಿಸುವುದು ಕಾನೂನಿಗೆ ವಿರುದ್ಧವಾಗಿದ್ದು, ಖುದ್ದಾಗಿ ಭೇಟಿ ನೀಡಿ ಸಮಸ್ಯೆ ಇತ್ಯರ್ಥಗೊಳಿಸುವ ಭರವಸೆ ನೀಡಿದರು.

ಈ ವೇಳೆ ದೇವಪ್ಪ ನೆರೆಬೆಂಚಿ, ದೊಡ್ಡಪ್ಪ ಹುಂಚಗೇರಿ, ದುರುಗಪ್ಪ ಹುಂಚಗೇರಿ, ಪರಸಪ್ಪ ಹುಂಚಗೇರಿ, ನಿರುಪಾದೆಪ್ಪ ಓತಗೇರಿ, ಹಿರೇಪರಸಪ್ಪ ಹುಂಚಗೇರಿ, ಕಳಕಪ್ಪ ಗಡಾದ, ಯಮನಪ್ಪ ಜಬ್ಲಿದ್‌, ಹನಮಂತ ಹುಂಚಗೇರಿ, ನಿರುಪಾದೆಪ್ಪ ಹುಂಚಗೇರಿ ಮತ್ತಿತರಿದ್ದರು.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.