ಭತ್ತದ ಬೆಳೆಗೆ ದುಂಡಾಣು ರೋಗ: ರೈತರಲ್ಲಿ ಆತಂಕ


Team Udayavani, Sep 10, 2018, 5:10 PM IST

secptember-22.jpg

ಗಂಗಾವತಿ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಈಗಾಗಲೇ ಭತ್ತದ ನಾಟಿ ಕಾರ್ಯವು ಪೂರ್ಣಗೊಂಡಿದ್ದು, ಭತ್ತದ ಬೆಳೆ 45 ರಿಂದ 60 ದಿನದ ಬೆಳವಣಿಗೆ ಹಂತದಲ್ಲಿದೆ. ಈ ಹಂತದಲ್ಲಿ ಭತ್ತಕ್ಕೆ ಸಾಮಾನ್ಯವಾಗಿ ದುಂಡಾಣು ಅಂಗಮಾರಿ ರೋಗ ಮತ್ತು ಕಂದು ಜಿಗಿಹುಳು ರೋಗ ವ್ಯಾಪಕವಾಗಿ ಹರಡುತ್ತಿದ್ದು, ಇದರಿಂದ ಅಚ್ಚುಕಟ್ಟು ಪ್ರದೇಶದ ರೈತರು ತೀವ್ರ ಆತಂಕದಲ್ಲಿದ್ದಾರೆ.

ದುಂಡಾಣು ಅಂಗಮಾರಿ ರೋಗವು ಸಾಮಾನ್ಯವಾಗಿ ಭತ್ತದ ಎಲೆಗಳ ಅಂಚು ಮತ್ತು ತುದಿಗಳಲ್ಲಿ ಕಂಡುಬರುತ್ತದೆ. ಮೊದಲು ರೋಗವು ಹಳದಿ ಬಣ್ಣದ ಮಚ್ಚೆಯಂತೆ ಇರುತ್ತದೆ. ಎಲೆಯ ತುದಿಯಿಂದ ಬುಡದ ಕಡೆಗೆ ಪಸರಿಸುತ್ತದೆ. ಕೊನೆಗೆ ಎಲೆಯು ಸಂಪೂರ್ಣ ವಾಗಿ ಒಣಗಿ ಬೆಳೆಯು ನಾಶ ವಾಗುತ್ತದೆ. ಮೋಡ ಕವಿದ ವಾತಾವರಣ ಇರುವುದರಿಂದ ದುಂಡಾಣು ರೋಗ ತೀವ್ರವಾಗಿ ಹರಡಿ ಅತೀ ವೇಗವಾಗಿ ಗದ್ದೆಯಿಂದ ಗದ್ದೆಗೆ ಹರಡುತ್ತದೆ.

ಕೃಷಿ ವಿಜ್ಞಾನಿಗಳ ಸಲಹೆ ಪಡೆಯದೇ ಅತೀಯಾದ ರಸಗೊಬ್ಬರ ಮತ್ತು ನೀರಿನ ಬಳಕೆಯಿಂದಾಗಿ ದುಂಡಾಣು ರೋಗ ಹರಡುತ್ತದೆ. ಭತ್ತದ ಕಾಂಡ ಅತೀಯಾದ ಸಿಹಿಯಿಂದ ಕೂಡಿರುವುದರಿದ ರೋಗಾಣುಗಳು ತಿನ್ನಲು ಅನುಕೂಲವಾಗಿರುವ ಕಾರಣ ಅಂಗಮಾರಿ ಅಥವಾ ದುಂಡಾಣು ಹರಡುತ್ತದೆ. ಭತ್ತದ ಬೆಳೆಗೆ ವೈಜ್ಞಾನಿಕವಾಗಿ ನೀರು ಮತ್ತು ಗೊಬ್ಬರ ನಿರ್ವಹಣೆ ಮಾಡಬೇಕು. ಇದರಿಂದ ಹಣ ಮತ್ತು ನೀರಿನ ಮಿತ ಬಳಕೆಯಾಗುತ್ತದೆ. ಶ್ರಮವೂ ಕಡಿಮೆಯಾಗುತ್ತದೆ.

ದುಂಡಾಣು ಕಂದು ಜಿಗಿ ರೋಗದ ಲಕ್ಷಣಗಳು: ಪ್ರೌಢ ಮತ್ತು ಮರಿ ಹುಳುಗಳು ಕಾಂಡವನ್ನು ನೀರಿನ ಮಟ್ಟಕ್ಕಿಂತ ಮೇಲ್ಭಾಗದಲ್ಲಿ ಅಧಿ ಕ ಸಂಖ್ಯೆಯಲ್ಲಿ ಆವರಿಸಿ ರಸವನ್ನು ಹೀರುವುದರಿಂದ ಪೈರಿನ ಎಲೆಗಳು ಕಂದು ಬಣ್ಣಕ್ಕೆ ತಿರುಗಿ ಅಲ್ಲಲ್ಲಿ ಸುಟ್ಟಂತೆ ಕಂಡು ಬೆಳೆಯೇ ನಾಶವಾಗುತ್ತದೆ. ಇದರ ಬಾಧೆಯು ತೆನೆ ಬರುವ ಸಮಯದಲ್ಲಿ ತೀವ್ರವಾಗಿ ಕಂಡುಬರುತ್ತವೆ .

ಅತೀಯಾದ ರಸಗೊಬ್ಬರ ಮತ್ತು ನೀರಿನ ಬಳಕೆಯಿಂದ ಭತ್ತದ ಬೆಳೆಗೆ ದುಂಡಾಣು ರೋಗ ಬರುತ್ತದೆ. ನಿರ್ವಹಣೆಗಾಗಿ ರೋಗದ 0.05 ಗ್ರಾಂ. ಸ್ಟ್ರೆಪೊràಸೈಕ್ಲಿನ್‌ ಮತ್ತು 0.05 ಗ್ರಾಂ. ಮೈಲು ತುತ್ತೆ (ಸಿಒಸಿ) ಯನ್ನು ಪ್ರತಿ ಲೀಟರ್‌ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ಪ್ರತಿ ಎಕರೆ ಸುಮಾರು 250 ಲೀ. ಸಿಂಪರಣಾ ದ್ರಾವಣ ಬಳಸಬೇಕು. ಪರೋಪಕಾರಿ ಕೀಟಗಳಾದ ಮಿರಿಡ್‌ತಿಗಣೆ, ಜೇಡಗಳ ಸಂಖ್ಯೆ ಜಾಸ್ತಿಯಿದ್ದಾಗ ಕೀಟನಾಶಕಗಳನ್ನು ಬಳಸಬಾರದು. ನೀರು ಹಾಯಿಸುವುದು. ಅವಶ್ಯಕತೆಗಣುಗುಣವಾಗಿ ಶೇ.5ರ ಬೇವಿನ ಕಷಾಯವನ್ನು ಪರ್ಯಾಯ ಸಿಂಪಡಿಸಬೇಕು. ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳನ್ನು ಸಂಪರ್ಕಿಸಬಹುದು. 9008709050, 8217440909.
ರಾಘವೇಂದ್ರ ಎಲಿಗಾರ,
ವಿಜ್ಞಾನಿಗಳು (ಕೃಷಿ ಕೀಟಶಾಸ್ತ್ರ),  ಕೃಷಿ ವಿಜ್ಞಾನ ಕೇಂದ್ರ

ಕೆ.ನಿಂಗಜ್ಜ

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.