ನಿಡಶೇಷಿ ಫಾರ್ಮ್ ಪರಿಶೀಲನೆ


Team Udayavani, Sep 21, 2018, 4:10 PM IST

21-sepctember-22.jpg

ಕುಷ್ಟಗಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ನ. 1ರಂದು ತಾಲೂಕಿನ ನಿಡಶೇಷಿ ಗ್ರಾಮದ ಸಸ್ಯ ಕ್ಷೇತ್ರದಲ್ಲಿ ಇಸ್ರೇಲ್‌ ತಂತ್ರಜ್ಞಾನ ಆಧಾರಿತ ತೋಟಗಾರಿಕೆ ಫಾರಂ ಲೋಕಾರ್ಪಣೆಗೊಳಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ತೋಟಗಾರಿಕೆ ಉಪ ನಿರ್ದೇಶಕ ಕೃಷ್ಣಾ ಉಕ್ಕುಂದ ಅವರು ಮಾತನಾಡಿ, ಇಸ್ರೇಲ್‌ ತಂತ್ರಜ್ಞಾನ ಮಾದರಿಯನ್ನು ಆಧರಿಸಿ ಈ ಭಾಗದಲ್ಲಿ ಬೆಳೆಯುವ ಸೀತಾಫಲ, ರಾಮಫಲ, ಕರೋಂಡ, ಹುಣಸೆ, ಗೋಡಂಬಿ, ಹಲಸು ತಾಕುಗಳನ್ನು ಪಾಲಿಹೌಸ್‌ನಲ್ಲಿ ಬೆಳೆಸುವ ಉದ್ದೇಶ ಹೊಂದಲಾಗಿದೆ. ಇಲ್ಲಿ ಬೆಳೆದ ನರ್ಸರಿಯನ್ನು ರೈತರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುವ ಉದ್ದೇಶ ಹೊಂದಲಾಗಿದೆ. ಕಡಿಮೆ ನೀರಿನಲ್ಲಿ ತೋಟಗಾರಿಕೆ, ತರಕಾರಿ ಬೆಳೆಸುವ ಕುರಿತು ಪ್ರಾತ್ಯಕ್ಷಿತೆ, ತರಬೇತಿ, ತೋಟಗಾರಿಕೆ ಉತ್ಪನ್ನಗಳ ಮಾರಾಟ ವ್ಯವಸ್ಥೆ ಮಾಡಲಾಗುವುದು. ರಾಜ್ಯದಲ್ಲಿಯೇ ಮಾದರಿ ತೋಟಗಾರಿಕೆ ಫಾರ್ಮ್ ಆಗಲಿದ್ದು, ಫಾರ್ಮ್ ಅಭಿವೃದ್ಧಿಯಾದರೆ ಸ್ಥಳೀಯರಿಗೆ ಉದ್ಯೋಗ ಸಿಗಲಿದೆ ಎಂದು ಜಿಲ್ಲಾಧಿಕಾರಿಗೆ ವಿವರಿಸಿದರು.

ಜಿಲ್ಲಾಧಿಕಾರಿ ಸುನೀಲಕುಮಾರ ಮಾತನಾಡಿ, ಸರಕಾರಿ ಕೆಲಸಗಳಿಗೆ ವಿನಾಕಾರಣ ಅಡ್ಡಿಪಡಿಸುವುದು ಕಾನೂನು ಬಾಹಿರವಾಗುತ್ತದೆ. ಕಾಮಗಾರಿಗಳಲ್ಲಿ ಲೋಪ, ಹಣ ದುರ್ಬಳಕೆಯಾಗುತ್ತಿದ್ದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಬೇಕು. ಇದನ್ನು ಬಿಟ್ಟು ಕೆಲಸ ನಡೆಯುವ ಸ್ಥಳಕ್ಕೆ ಬಂದು ಅಡ್ಡಿಪಡಿಸುವುದು ಸರಿಯಲ್ಲ ಎಂದು ಸ್ಥಳದಲ್ಲಿದ್ದ ಎಸ್‌ಐ ವಿಶ್ವನಾಥ ಹಿರೇಗೌಡ್ರ ಅವರಿಗೆ ಸೂಚನೆ ನೀಡಿದರು. ಕಾಮಗಾರಿಗೆ ಅಡ್ಡಿಪಡಿಸುತ್ತಿರುವ ಬಗ್ಗೆ ತೋಟಗಾರಿಕೆ ಅಧಿಕಾರಿಗಳು ದೂರು ನೀಡಿದ ತಕ್ಷಣ ಸ್ಪಂದಿಸಿ ಕಿರುಕುಳ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕೆಲಸ ಮುಗಿಯುವವರೆಗೆ ಪೊಲೀಸ್‌ ಸಿಬ್ಬಂದಿ ಇಲ್ಲಿಗೆ ಆಗಾಗ ಬಂದು ಹೋಗುವಂತೆ ವ್ಯವಸ್ಥೆ ಮಾಡಬೇಕು ಎಂದರು.

ಸ್ಥಳದಲ್ಲಿದ್ದ ಸ್ಥಳೀಯರು ‘ತಮಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ. ಸ್ಥಳೀಯರು ಯಾರೂ ತೋಟಗಾರಿಕೆ ಫಾರಂ ನಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ಅಡ್ಡಿಪಡಿಸಿಲ್ಲ. ಆವರಣಗೋಡೆ ಕಾಮಗಾರಿ ತೀರಾ ಕಳಪೆಯಾಗುತ್ತಿದೆ. ಬುನಾದಿಗೆ ಕಲ್ಲುಪುಡಿಯನ್ನು ಹಾಕಿ ಸಿಮೆಂಟ್‌ ಮಿಶ್ರಣ ಮಾಡದೇ ಬೇಸ್‌ಮೆಂಟ್‌ ಹಾಕಲಾಗುತ್ತಿದೆ. ದೊಡ್ಡ ಮೊತ್ತದ ಕಾಮಗಾರಿ ಕಳಪೆಯಾಗಬಾರದು ಎನ್ನುವುದು ಸ್ಥಳೀಯರ ಕಳಕಳಿಯಾಗಿದೆ’ ಎಂದು ವಿವರಿಸಿದರು.

ಸ್ಥಳದಲ್ಲಿದ್ದ ತೋಟಗಾರಿಕೆ ಉಪನಿರ್ದೇಶಕ ಕೃಷ್ಣಾ ಉಕ್ಕುಂದ ಮಾತನಾಡಿ, ಕೆಲವರು ಸಸಿಗಳನ್ನು ಕಿತ್ತು ಹಾಕಿರುವ, ಪೈಪ್‌ಲೈನ್‌ ಹಾಳು ಮಾಡಿರುವ ಫೋಟೋ ಸಹಿತ ದಾಖಲೆಗಳಿವೆ. ಆವರಣ ಗೋಡೆ ಕಳಪೆಯಾಗುತ್ತಿರುವುದು ಗಮನಕ್ಕೆ ಬಂದಿದ್ದು, ತೋಟಗಾರಿಕೆ ಇಲಾಖೆಯ ಇಂಜನಿಯರಿಂಗ್‌ ವಿಭಾಗಕ್ಕೆ ಪತ್ರ ಬರೆದು ಪರಿಶೀಲನೆ ನಡೆಸಿ ವರದಿ ಸಲ್ಲಿಸುವವರೆಗೆ ಬಿಲ್‌ ಪಾವತಿಸದಂತೆ ಸಮಾಜಾಯಿಷಿ ನೀಡಿದರು.

ತಹಶೀಲ್ದಾರ್‌ ಕೆ.ಎಂ. ಗುರುಬಸವರಾಜ, ತೋಟಗಾರಿಕೆ ಸಹಾಯಕ ನಿರ್ದೇಶಕ ದುರ್ಗಾಪ್ರಸಾದ್‌, ಆರ್‌ಐ ಶರಣಯ್ಯಸ್ವಾಮಿ, ವಿ.ಎ. ರಮೇಶ ತಾಳಕೇರಿ, ತಾಪಂ ಸದಸ್ಯ ಚನ್ನಪ್ಪ ಮೇಟಿ, ಗ್ರಾಪಂ ಸದಸ್ಯರಾದ ಶರಣಪ್ಪ ಹಾವರಗಿ, ಪರಶುರಾಮ ಹಾವರಗಿ, ಪ್ರಮುಖರಾದ ಗೋವಿಂದಪ್ಪ ಹಾವರಗಿ, ಮಂಜುನಾಥ ಕರಿಭೀಮಪ್ಪನವರ್‌, ಹನುಮಪ್ಪ ಅಗಸಿಮುಂದಿನ, ಪರಶುರಾಮ ಅಗಸಿಮುಂದಿನ ಇತರರಿದ್ದರು.

ಗ್ರಾಮಸ್ಥರ ತರಾಟೆ
ಜಿಲ್ಲಾಧಿಕಾರಿ ಸ್ಥಳದಿಂದ ನಿರ್ಗಮಿಸುತ್ತಿದ್ದಂತೆ ಸ್ಥಳೀಯರು ತೋಟಗಾರಿಕೆ ಉಪನಿರ್ದೇಶಕ ಕೃಷ್ಣಾ ಉಕ್ಕುಂದ್‌ ಅವರನ್ನು ತರಾಟೆ ತೆಗೆದುಕೊಂಡರು. ಆವರಣಗೋಡೆ ಕಾಮಗಾರಿ ಕಳಪೆಯಾಗುತ್ತಿರುವ ಬಗ್ಗೆ ದೂರಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿ ಫಾರ್ಮ್ನಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ಸ್ಥಳೀಯರು ಅಡ್ಡಿಪಡಿಸುತ್ತಾರೆ ಎಂದು ಹೇಳಿರುವುದು ಸರಿಯಲ್ಲ ಎಂದು ವಾದಿಸಿದರು. ಎಸ್‌ಐ ವಿಶ್ವನಾಥ ಹಿರೇಗೌಡ್ರ ಮಧ್ಯೆ ಪ್ರವೇಶಿಸಿ, ಪರಿಸ್ಥಿತಿ ತಿಳಿಗೊಳಿಸಿದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.