ಪ್ರತಿಭಟನೆಗೆ ಬೇಸತ್ತು ಪೊಲೀಸರಿಗೆ ದೂರು
Team Udayavani, Oct 18, 2018, 5:27 PM IST
ಕುಷ್ಟಗಿ: ಉದ್ಯೋಗ ಖಾತ್ರಿ ಯೋಜನೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರಾಂತ ರೈತ ಸಂಘ, ಕೂಲಿಕಾರರ ಸಂಘದ ಹೆಸರಿನಲ್ಲಿ ತಾಪಂ ಎದುರು ಪದೇ ಪದೇ ಧರಣಿ ನಡೆಸಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ಆರೋಪಿಸಿ ತಾಪಂ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರು.
ತಾಪಂ ಇಒ ಡಾ| ಡಿ. ಮೋಹನ್, ನರೇಗಾ ಸಹಾಯಕ ನಿರ್ದೇಶಕ ಅರುಣಕುಮಾರ ದಳವಾಯಿ, ಪಿಡಿಒ ಸಂಘದ ಜಿಲ್ಲಾ ಅಧ್ಯಕ್ಷ ವೆಂಕಟೇಶ ವಂದಾಲ, ಅಧ್ಯಕ್ಷ ಬಡಿಗೇರ ಅವರ ನೇತೃತ್ವದಲ್ಲಿ ಪಿಡಿಒಗಳು ಪಿಎಸ್ಐ ವಿಶ್ವನಾಥ ಹಿರೇಗೌಡ್ರು ಅವರಿಗೆ ದೂರು ಸಲ್ಲಿಸಿದರು. ತಾಲೂಕಿನಲ್ಲಿ ನರೇಗಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕೆಲ ಸಂಘಟನೆಗಳ ಸದಸ್ಯರು ಅಡ್ಡಿಯಾಗುತ್ತಿದ್ದಾರೆ. ಈ ಸಂಘದ ಮುಖಂಡರು ವಿವಿಧ ಗ್ರಾಮಗಳಿಗೆ ತೆರಳಿ ಸರ್ಕಾರದ ಸೌಲಭ್ಯಗಳನ್ನು ಕೊಡಿಸುವ ಆಮಿಷವೊಡ್ಡಿ ಜನರನ್ನು ಕರೆತಂದು ಪ್ರತಿಭಟನೆಗೆ ಬಳಸಿಕೊಳ್ಳುತಿದ್ದಾರೆ.
ಸಂಘಟನೆ ಮುಖಂಡ ಆರ್.ಕೆ. ದೇಸಾಯಿ ಅವರು ಅಮಾಯಕರನ್ನು ಕರೆದುಕೊಂಡು ಬಂದು ಅಧಿಕಾರಿಗಳ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ. ಅಮಾಯಕ ಮಹಿಳೆಯರು, ವೃದ್ಧರು, ರೋಗಿಗಳಿಗೆ ಏನೂ ಗೊತ್ತಿರದಿದ್ದರೂ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಲ್ಲದೇ ಸರ್ಕಾರಿ ಕೆಲಸಕ್ಕೂ ಅಡ್ಡಿಯಾಗುತ್ತಿದ್ದಾರೆ. ಹಲಗಿ ಬಾರಿಸುವುದು, ಘೋಷಣೆ ಕೂಗುವುದು, ಸಂಜೆ ವೇಳೆ ಪಾನಮತ್ತರಾಗಿ ಅಧಿಕಾರಿಗಳನ್ನು ಹೀಯಾಳಿಸುವುದು, ಅವಾಚ್ಯವಾಗಿ ನಿಂದಿಸಲಾಗುತ್ತಿದೆ. ತಿಂಗಳಲ್ಲಿ ಎರಡ್ಮೂರು ಬಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅ. 4ರಿಂದ ನರೇಗಾ ಯೋಜನೆಯ ಕಾಯಕ ಬಂಧುಗಳು (ಮೇಟಿ) ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹದ ವೇಳೆಯಲ್ಲೂ ವಿನಾಕಾರಣ ತೊಂದರೆ ನೀಡಲಾಗಿದೆ. ಇದಕ್ಕೆಲ್ಲ ರೈತ ಮುಖಂಡ ಆರ್.ಕೆ. ದೇಸಾಯಿ ಕಾರಣೀಕರ್ತರು. ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ದೂರಿನಲ್ಲಿ ವಿವರಿಸಿ 67 ಜನ ಅಧಿಕಾರಿಗಳು ಸಹಿ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ