ಕಾರ್ಮಿಕರ 8 ತಿಂಗಳ ಹೋರಾಟ ಅಂತ್ಯ


Team Udayavani, Oct 24, 2018, 4:06 PM IST

24-october-17.gif

ಗಂಗಾವತಿ: ಕೆಲಸ ಕಾಯಂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಕಳೆದ 8 ತಿಂಗಳಿಂದ ನಗರಸಭೆ ಎದುರು ನಿರಂತರ ಪ್ರತಿಭಟನೆ ನಡೆಸುತ್ತಿದ್ದ 162 ಹೊರಗುತ್ತಿಗೆ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲು ಜಿಲ್ಲಾಧಿಕಾರಿ ಕ್ರಮ ಕೈಗೊಂಡಿದ್ದರಿಂದ ಧರಣಿ ಅಂತ್ಯಗೊಂಡಿದೆ.

ಕಳೆದ 8 ತಿಂಗಳಿಂದ ಹೊರಗುತ್ತಿಗೆ ಪೌರಕಾರ್ಮಿಕರು ನಗರಸಭೆ ಎದುರು ಅನಿರ್ದಿಷ್ಟ ಧರಣಿ ನಡೆಸುತ್ತಿದ್ದರು. ಹಲವು ಬಾರಿ ಜನಪ್ರತಿನಿಧಿಗಳು ಮತ್ತು ಜಿಲ್ಲಾಧಿಕಾರಿ ಸಹಾಯಕ ಆಯುಕ್ತರು, ನಗರಸಭೆ ಕೋಶಾಧಿಕಾರಿ ಸೇರಿ ಹಲವು ಅಧಿಕಾರಿಗಳು ಕಾರ್ಮಿಕರ ಹೋರಾಟ ಅಂತ್ಯಗೊಳಿಸಲು ಯತ್ನ ನಡೆಸಿದರೂ ಸಫಲವಾಗಿರಲಿಲ್ಲ. ಜಿಲ್ಲೆಗೆ ಆಗಮಿಸಿದ ನೂತನ ಜಿಲ್ಲಾಧಿಕಾರಿ ಸುನೀಲಕುಮಾರ ಕಾರ್ಮಿಕ ಕಡತ ಹಾಗೂ ಹಲವು ದಾಖಲೆ ಪರಿಶೀಲನೆ ನಡೆಸಿ ಎಲ್ಲ 162 ಹೊರಗುತ್ತಿಗೆ ಪೌರಕಾರ್ಮಿಕರನ್ನು ಕಾಯಂ ಮಾಡಿ ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಕಾರ್ಮಿಕರ ಹುದ್ದೆಗಳಿಗೆ ನಿಯೋಜನೆ ಮಾಡುವ ಆದೇಶ ಹೊರಡಿಸಿದ್ದು, ಇದಕ್ಕೆ ಸೂಕ್ತ ದಾಖಲೆ ಸಲ್ಲಿಸಲು ಅನುಕೂಲ ಮಾಡಿಕೊಡಲು ತೀರ್ಮಾನ ಕೈಗೊಂಡಿರುವುದು ಕಾರ್ಮಿಕ ಹಿತ ಕಾಪಾಡಿದಂತಾಗಿದೆ.

ಸಮಸ್ಯೆ ಪರಿಹಾರಕ್ಕೆ ಯತ್ನ: ಸತತ ಮೂರು ವರ್ಷಗಳಿಂದ ಕಾರ್ಮಿಕರು ಪ್ರಗತಿಪರ ಪೌರಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಹೋರಾಟ ನಡೆಸಿ ಬೇಡಿಕೆ ಈಡೇರಿಸುಂತೆ ಒತ್ತಾಯ ಹೇರಿದ್ದರು. ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವೆ ಹಲವು ಬಾರಿ ಮಾತುಕತೆ ನಡೆದರೂ ಸಮಸ್ಯೆಗೆ ಪರಿಹಾರ ದೊರಕಿರಲಿಲ್ಲ. ಇತ್ತೀಚೆಗೆ ಪ್ರಭಾರಿ ಪೌರಾಯುಕ್ತರಾಗಿ ಆಗಿಮಿಸಿದ್ದ ಪ್ರೊಬೇಷನರಿ ಜಿಲ್ಲಾಧಿಕಾರಿ ಅಕ್ಷಯ್‌ ಶ್ರೀಧರ್‌ ಕಾರ್ಮಿಕರ ಸಮಸ್ಯೆ ಬಗೆಹರಿಸಲು ತೀವ್ರ ಯತ್ನ ನಡೆಸಿ ಜಿಲ್ಲಾಧಿಕಾರಿಗಳ ಜತೆ ಸತತ ಸಂಪರ್ಕ ನಡೆಸಿ ದಾಖಲಾತಿಗಳೊಂದಿಗೆ ಕಾರ್ಮಿಕ ಸಂಘಟನೆ ಜತೆ ಮಾತನಾಡಿ ಕೊನೆಗೂ 162 ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳಲು ಜಿಲ್ಲಾಡಳಿತ ನಿರ್ಧಾರ ಮಾಡಿ ಆದೇಶ ಹೊರಡಿಸಿದೆ.

ನಗರಸಭೆ 162 ಹೊರಗುತ್ತಿಗೆ ಪೌರ ಕಾರ್ಮಿಕರನ್ನು ಪುನಃ ನೇಮಕ ಮಾಡಿಕೊಳ್ಳುವ ನಿರ್ಧಾರದಿಂದ ಸಂತೋಷವಾಗಿದೆ. 2016ರಲ್ಲಿ ಆಡಳಿತ ಮಂಡಳಿ 162 ಜನ ಗುತ್ತಿಗೆ ಪೌರಕಾರ್ಮಿಕರನ್ನು ಕೆಲಸದಿಂದ ಬಿಡಿಸಿ, ಬೀದಿಪಾಲು ಮಾಡಿ ಹೊಸಬರನ್ನು ಕೆಲಸಕ್ಕೆ ತೆಗೆದುಕೊಳ್ಳಲು ಹುನ್ನಾರ ನಡೆಸಿತ್ತು. ಆಗ ಮಾಜಿ ಸಚಿವ ಶಿವರಾಜ ತಂಗಡಗಿ ಕಾರ್ಮಿಕರ ಸಮಸ್ಯೆಗಳನ್ನು ಅಂದಿನ ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದು ರಾಜ್ಯದ 32 ಸಾವಿರ ಹೊರಗುತ್ತಿಗೆ ಪೌರಕಾರ್ಮಿಕರಿಗೆ ನೇರವಾಗಿ ಸರಕಾರದಿಂದ ವೇತನ ಪಾವತಿಯಾಗುವಂತೆ ಐತಿಹಾಸಿಕ ಆದೇಶ ಮಾಡಿಸಿದ್ದರು. ಈ ಸಂದರ್ಭದಲ್ಲಿ ಕೆಲ ರಾಜಕೀಯ ಧುರೀಣರು ಗಂಗಾವತಿಯಲ್ಲಿ 162 ಕಾರ್ಮಿಕರ ವಿಷಯದಲ್ಲಿ ಮಲತಾಯಿ ಧೋರಣೆ ನಡೆಸಿ ಅನ್ಯಾಯ ಮಾಡಿದ್ದರು. ಈಗ ಸಮಸ್ಯೆ ಬಗೆಹರಿದಿದೆ.
 ಪರಶುರಾಮ, ಅಧ್ಯಕ್ಷರು
 ಪ್ರಗತಿಪರ ಕಾರ್ಮಿಕರ ಸಂಘ.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.