ಕನಕಗಿರಿ-ಕಾರಟಗಿ ಎಪಿಎಂಸಿ ರಚನೆ?


Team Udayavani, Oct 26, 2018, 4:23 PM IST

26-october-18.gif

ಗಂಗಾವತಿ: ಕನಕಗಿರಿ ಮತ್ತು ಕಾರಟಗಿ ಪಟ್ಟಣಗಳನ್ನು ನೂತನ ತಾಲೂಕುಗಳೆಂದು ಘೋಷಣೆ ಮಾಡಿ ಈಗಾಗಲೇ ಕೆಲ ಇಲಾಖೆಗಳ ಕಚೇರಿಗಳನ್ನು ಸ್ಥಳಾಂತರ ಮಾಡಲಾಗಿದೆ. ನೂತನ ತಾಲೂಕುಗಳಿಗೆ ನೂತನ ಎಪಿಎಂಸಿಗಳನ್ನು ರಚನೆ ಮಾಡಲು ರಾಜ್ಯ ಕೃಷಿ ಮಾರುಕಟ್ಟೆ ಇಲಾಖೆ ಸಿದ್ಧತೆ ನಡೆಸಿದೆ. ಗಂಗಾವತಿ ಎಪಿಎಂಸಿಯನ್ನು ಮೂರು ಭಾಗ ಮಾಡಿ ಗಂಗಾವತಿ, ಕನಕಗಿರಿ ಮತ್ತು ಕಾರಟಗಿ ಎಪಿಎಂಸಿ ಎಂದು ಘೋಷಣೆ ಮಾಡಲು ಯೋಜಿಸಲಾಗಿದೆ.

ಎಪಿಎಂಸಿಯಲ್ಲಿ ಹಳೆಯ ಪದ್ಧತಿಯಂತೆ 11 ರೈತ ಪ್ರತಿನಿಧಿಗಳು ಒಂದು ಟಿಎಪಿಸಿಎಂಎಸ್‌ ಒಂದು ಸಹಕಾರಿ ಸಂಸ್ಕರಣಾ ಘಟಕ, ಸರಕಾರದಿಂದ ಮೂರು ನಿರ್ದೇಶಕರು ನಾಮನಿರ್ದೇಶನಗೊಂಡು ಒಟ್ಟು 17 ಜನ ನಿರ್ದೇಶಕರು ರೈತರು ಮತ್ತು ವರ್ತಕರ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಲ್ಲಿಯ ಎಪಿಎಂಸಿ ಆದಾಯ ಕಾರಟಗಿಯಲ್ಲಿ ವಿಶೇಷ ಎಪಿಎಂಸಿ ಸ್ಥಾಪನೆಗೂ ಮೊದಲು ರಾಜ್ಯಕ್ಕೆ ಎರಡನೇಯ ಸ್ಥಾನದಲ್ಲಿತ್ತು. ನವಲಿ ರೈಸ್‌ ಪಾರ್ಕ್‌ ಸ್ಥಾಪನೆ ಹಿನ್ನೆಲೆಯಲ್ಲಿ ರಾಜ್ಯ ಕೃಷಿ ಮಾರುಕಟ್ಟೆ ಇಲಾಖೆ ಕಾರಟಗಿಯಲ್ಲಿ ವಿಶೇಷ ಭತ್ತ ಎಪಿಎಂಸಿ ಸ್ಥಾಪನೆಯಾದಾಗಿನಿಂದಲೂ ಗಂಗಾವತಿ ಎಪಿಎಂಸಿ ಆದಾಯ ಮತ್ತು ಅಭಿವೃದ್ಧಿ ಕಾರ್ಯದಲ್ಲಿ ಬಹಳಷ್ಟು ಹಿನ್ನೆಡೆಯಾಗಿದೆ. ಇದೀಗ ಎಪಿಎಂಸಿ ವಿಭಜನೆ ಮಾಡುವ ಮೂಲಕ ಗಂಗಾವತಿ ಎಪಿಎಂಸಿ ಶಕ್ತಿಯನ್ನು ಇನ್ನಷ್ಟು ಕುಸಿಯುವಂತೆ ಮಾಡಲಾಗುತ್ತಿದೆ.

ಯಾಕೆ ಬೇಕಿತ್ತು ಚುನಾವಣೆ: ನೂತನ ತಾಲೂಕು ರಚನೆ ಹಿನ್ನೆಲೆಯಲ್ಲಿ ಎಪಿಎಂಸಿ ನಿಯಮದಂತೆ ನೂತನ ಕೃಷಿ ಮಾರುಕಟ್ಟೆ ರಚನೆಯಾಗಬೇಕಾಗಿರುವುದು ನಿಯಮದಂತೆ ಸರಿಯಿದ್ದರೆ ಇತ್ತೀಚೆಗೆ ಕಾರಟಗಿ ಮತ್ತು ಗಂಗಾವತಿ ಎಪಿಎಂಸಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆಸುವ ಅಗತ್ಯವೆನಿತ್ತು. ಹಣ ಮತ್ತು ಸಮಯದ ಪೋಲು ಮಾಡಲು ಈ ಚುನಾವಣೆ ನಡೆಯಿತೇ ಎಂಬ ಪ್ರಶ್ನೆ ರೈತರಲ್ಲಿ ಕಾಡುತ್ತಿದೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವವರು ರೈತರಿಗಾಗಿ ಹಲವು ಯೋಜನೆ ಸರಕಾರದಿಂದ ತರಲು ಸಿದ್ಧತೆ ನಡೆಸಿದ ಸಂದರ್ಭದಲ್ಲೇ ಈ ವಿಭಜನೆ ಮಾತು ಕೇಳಿ ಬರುತ್ತಿದೆ. ಕಾರಟಗಿ ಮತ್ತು ಗಂಗಾವತಿ ಎಪಿಎಂಸಿಗಳಲ್ಲಿ ಬಿಜೆಪಿ ಬೆಂಬಲಿತ ಅಧ್ಯಕ್ಷ, ಉಪಾಧ್ಯಕ್ಷರು ಇರುವುದರಿಂದ ಆಡಳಿತ ಮಂಡಳಿಯನ್ನು ವಿಸರ್ಜನೆ ಮಾಡಿ ನೂತನ ಎಪಿಎಂಸಿ ರಚಿಸಿ ಸರಕಾರದಿಂದ ಅಧ್ಯಕ್ಷ, ಉಪಾಧ್ಯಕ್ಷ ಸೇರಿ ಎಲ್ಲಾ ನಿರ್ದೇಶಕರನ್ನು ನಾಮನಿರ್ದೇಶನ ಮಾಡಿಸುವ ಮೂಲಕ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಕೆಲವರು ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ನೂತನ ಕೃಷಿ ಉತ್ಪನ್ನ ಮಾರುಕಟ್ಟೆ ರಚಿಸಲು ಯಾರ ಆಕ್ಷೇಪವೂ ಇಲ್ಲ. ಆದರೆ ಇದೀಗ ಗಂಗಾವತಿ, ಕಾರಟಗಿ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆದಿದೆ. ಅವರ ಅವಧಿ ಇನ್ನೂ 40 ತಿಂಗಳಿದ್ದು, ನಂತರ ವಿಭಜನೆಯಾಗಬೇಕು. ಕಾಂಗ್ರೆಸ್‌ನವರು ತಮಗೆ ಅಧಿಕಾರ ಸಿಕ್ಕಿಲ್ಲ, ಕಾನೂನಿನಲ್ಲಿ ಅವಕಾಶವಿದೆ ಎಂದು ಕುಂಟು ನೆಪ ಹೇಳಿ ಈಗಿರುವ ಆಡಳಿತ ಮಂಡಳಿಯನ್ನು ವಿಸರ್ಜನೆ ಮಾಡಿ ನೂತನ ಎಪಿಎಂಸಿಗಳಿಗೆ ಆಡಳಿತ ಮಂಡಳಿಯನ್ನು ನಾಮನಿರ್ದೇಶನ ಮಾಡಲು ಯತ್ನಿಸಿದರೆ ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುತ್ತದೆ.
 ಪರಣ್ಣ ಮುನವಳ್ಳಿ,
ಶಾಸಕರು 

„ಕೆ. ನಿಂಗಜ್ಜ 

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.