ಶೂ-ಸಮವವಸ್ತ್ರಕ್ಕೆ ಪ್ರಮಾಣಪತ್ರ ಕಡ್ದಾಯ


Team Udayavani, Nov 3, 2018, 4:57 PM IST

3-november-19.gif

ಕೊಪ್ಪಳ: ಜಿಲ್ಲೆಯಲ್ಲಿ ಶಾಲಾ ಸಮವಸ್ತ್ರ ಹಾಗೂ ಶೂ ಖರೀದಿಯಲ್ಲಿ ಭರ್ಜರಿ ಆಟವಾಡುತ್ತಿದ್ದ ಏಜೆನ್ಸಿಗಳಿಗೆ ಜಿಲ್ಲಾ ಪಂಚಾಯಿತಿ ಈ ಬಾರಿ ಶಾಕ್‌ ನೀಡಿದೆ. ಯಾವುದೇ ಏಜೆನ್ಸಿ ಶಾಲೆಗಳಿಗೆ ಬಟ್ಟೆ ಪೂರೈಕೆ ಮಾಡುವ ಮುನ್ನ ಗುಣಮಟ್ಟದ ಪ್ರಮಾಣ ಪತ್ರವನ್ನು ತೋರಿಸುವುದು ಕಡ್ಡಾಯ ಮಾಡಿದೆ. ಇದು ಏಜೆನ್ಸಿಗಳಿಗೆ ನುಂಗಲಾರದ ತುಪ್ಪದಂತಾಗಿದೆ.

ಹೌದು. ಜಿಲ್ಲೆಯಲ್ಲಿ ಶಾಲಾ ಮಕ್ಕಳಿಗೆ ಸರ್ಕಾರದಿಂದ ವಿತರಣೆ ಮಾಡುವ ಸಮವಸ್ತ್ರ ಪೂರೈಕೆಗೆ ಪ್ರಭಾವಿಗಳ ಆಟ ಭರ್ಜರಿಯಾಗಿ ನಡೆಯುತ್ತಿತ್ತು. ವಿಶೇಷವೆಂದರೆ, ರಾಜ್ಯ ಶಿಕ್ಷಣ ಇಲಾಖೆಯಿಂದ ಆಯಾ ಶಾಲೆ- ಎಸ್‌ ಡಿಎಂಸಿ ಖಾತೆಗೆ ಅನುದಾನ ನೇರವಾಗಿ ಜಮಾ ಮಾಡುವ ವ್ಯವಸ್ಥೆಯಿದ್ದರೂ ಸಮವಸ್ತ್ರ, ಶೂ ಖರೀದಿಯಲ್ಲಿ ಆಂತರಿಕ ರಾಜಕಾರಣವೇ ಜೋರಾಗಿ ನಡೆಯುತ್ತಿತ್ತು. ಮೇಲ್ನೋಟಕ್ಕೆ ಬಿಇಒ, ಡಿಡಿಪಿಐ ಹಸ್ತಕ್ಷೇಪ ಇಲ್ಲ ಎಂದರೂ ಪರೋಕ್ಷವಾಗಿ ಸೂಚನೆ ನೀಡುವ ಮಾತುಗಳು ಕೇಳಿ ಬರುತ್ತಿದ್ದವು.

ಇನ್ನೂ ಜಿಲ್ಲಾದ್ಯಂತ ಎಲ್ಲೆಂದರಲ್ಲಿ ತಲೆ ಎತ್ತಿದ್ದ ಏಜೆನ್ಸಿಗಳು ಆಯಾ ಶಾಲೆಗೆ ಭೇಟಿ ನೀಡಿ ಶಾಲಾ ಸಮವಸ್ತ್ರ ನಾವು ಪೂರೈಸುತ್ತೇವೆ ಎಂದು ದುಂಬಾಲು ಬೀಳುತ್ತಿದ್ದವು. ಇದರಿಂದ ಎಸ್‌ಡಿಎಂಸಿ ಆಟವೂ ಜೋರಾಗಿ ನಡೆಯುತ್ತಿತ್ತು. ಶಾಲಾ ಮುಖ್ಯ ಶಿಕ್ಷಕರು ಏಜೆನ್ಸಿಗಳ ಜೊತೆ ಒಪ್ಪಂದ ಮಾಡಿಕೊಂಡು ಸಮವಸ್ತ್ರ ಪಡೆಯುತ್ತಿದ್ದರು. ಆದರೆ, ಆ ಸಮವಸ್ತ್ರಗಳು ಸಹ ಗುಣಮಟ್ಟ ಇಲ್ಲದಿರುವ ಕುರಿತು ಆಪಾದನೆಗಳು ಕೇಳಿ ಬರುತ್ತಿದ್ದವು. ಇದು ವ್ಯಾಪಕ ಚರ್ಚೆಗೆ ಎಡೆಮಾಡಿಕೊಡುತ್ತಿತ್ತು. ಏಜೆನ್ಸಿಗಳಿಗೆ ಬ್ರೆಕ್‌ ಹಾಕಬೇಕೆನ್ನುವ ಕೂಗು ಎಲ್ಲೆಡೆ ಕೇಳಿ ಬಂದಿತ್ತು. ಇದರಿಂದ ಎಚ್ಚೆತ್ತಿರುವ ಜಿಪಂ ಗುಣಮಟ್ಟದ ಕುರಿತು ಮಾತನ್ನಾಡಿದೆ.

ಪ್ರಮಾಣಪತ್ರ ಅವಶ್ಯ: ಇನ್ಮುಂದೆ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ಸಮವಸ್ತ್ರ ಹಾಗೂ ಶೂ ವಿತರಣೆ ಮಾಡುವೆವು ಎನ್ನುವ ಏಜೆನ್ಸಿಗಳು ಸಮವಸ್ತ್ರಗಳ ಪೂರೈಕೆಯ ಕುರಿತು ಬೆಂಗಳೂರಿನಿಂದ ಗುಣಮಟ್ಟದ ಪ್ರಮಾಣಪತ್ರ ತರುವುದು ಅವಶ್ಯವಾಗಿದೆ. ಅದನ್ನು ಶಾಲೆಗಳಲ್ಲಿ ತೋರಿಸಿ ಸಮವಸ್ತ್ರ ಶೂಗಳನ್ನು ಪೂರೈಕೆ ಮಾಡಬಹುದಾಗಿದೆ. ಒಂದು ವೇಳೆ ಗುಣಮಟ್ಟದ ಪ್ರಮಾಣಪತ್ರವನ್ನು ಶಾಲಾ ಮುಖ್ಯ ಶಿಕ್ಷಕರು ನೋಡದೇ ಬಟ್ಟೆಗಳನ್ನು ಖರೀದಿ ಮಾಡಿದರೆ ಆಯಾ ಶಾಲೆಗಳ ಮುಖ್ಯ ಶಿಕ್ಷಕರೇ ಇದಕ್ಕೆ ಹೊಣೆಯಾಗಲಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಖಡಕ್ಕಾಗಿ ಸೂಚನೆ ನೀಡಿದೆ.

ಇನ್ನೂ ಜಿಲ್ಲೆಯಲ್ಲಿನ ಹಲವು ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸರ್ಕಾರದಿಂದ ಲಕ್ಷಾಂತರ ಮೊತ್ತದ ಅನುದಾನ ಎಸ್‌ಡಿಎಂಸಿ ಖಾತೆಗೆ ಜಮೆಯಾಗಲಿದೆ. ಈ ಅನುದಾನದ ಮೊತ್ತ ಲಕ್ಷ ರೂ. ದಾಟಿದರೆ ಶಾಲೆ ಮುಖ್ಯ ಶಿಕ್ಷಕರು ಟೆಂಡರ್‌ ಕರೆದು ಸಮವಸ್ತ್ರಗಳ ಖರೀದಿ ಮಾಡಬೇಕು. ದೊಡ್ಡ ಮೊತ್ತದ ಹಣವನ್ನು ಟೆಂಡರ್‌ ಕರೆಯದೇ ಬಟ್ಟೆಗಳ ಖರೀದಿಸುವಂತಿಲ್ಲ.

ಇದರಲ್ಲೂ ಶೂ-ಸಮವಸ್ತ್ರಗಳ ಗುಣಮಟ್ಟದ ಪರಿಶೀಲನೆ ಅವಶ್ಯವಾಗಿ ನಡೆಯಲಿದೆ. ಇಲ್ಲಿ ದೂರುಗಳು ಕೇಳಿ ಬಂದರೆ ಜಿಲ್ಲಾ, ತಾಲೂಕು ಹಂತದ ಸಮಿತಿ ತನಿಖೆ ನಡೆಸಲಿವೆ ಎನ್ನುವ ಸಂದೇಶವನ್ನು ಜಿಪಂ ಸಾರ್ವಜನಿಕ ಶಿಕ್ಷಣ ಇಲಾಖೆಗೆ ನೀಡಿದೆ. ಒಟ್ಟಾರೆ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ದರಕ್ಕೆ ಬಟ್ಟೆ ಖರೀದಿಸಿ ಮಕ್ಕಳಿಗೆ ಪೂರೈಕೆ ಮಾಡುತ್ತಿರುವುದಕ್ಕೆ ಜಿಪಂ ಈ ಬಾರಿ ಮೊದಲೇ ಖಡಕ್‌ ಸೂಚನೆ ನೀಡಿದೆ. ಗುಣಮಟ್ಟದ ಪ್ರಮಾಣ ಪತ್ರ ತೋರಿಸುವುದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಏಜೆನ್ಸಿಗಳು ಸಮವಸ್ತ್ರ-ಶೂ ಪೂರೈಕೆ ಮಾಡುವ ಮುನ್ನ ಶಾಲಾ ಮುಖ್ಯ ಶಿಕ್ಷಕರಿಗೆ ಗುಣಮಟ್ಟದ ಪ್ರಮಾಣಪತ್ರ ತೋರಿಸಬೇಕು. ನಂತರ ಶಾಲೆಗಳಿಗೆ ಪೂರೈಕೆ ಮಾಡಬೇಕು. ಪ್ರಮಾಣಪತ್ರ ಇಲ್ಲದೇ ಸಮವಸ್ತ್ರ ಖರೀದಿ ಮಾಡುವಂತಿಲ್ಲ. ಖರೀದಿ ಮಾಡಿದರೆ ಅಂತಹ ಶಾಲೆಗಳ ಮುಖ್ಯ ಶಿಕ್ಷಕರೇ ಹೊಣೆಯಾಗಲಿದ್ದಾರೆ. ಈ ಕುರಿತು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದೇವೆ.
·ವೆಂಕಟರಾಜಾ, ಜಿಪಂ ಸಿಇಒ ಕೊಪ್ಪಳ

„ದತ್ತು ಕಮ್ಮಾರ

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

ಅನೈತಿಕ ಸಂಬಂಧಕ್ಕೆ ವಿರೋಧ… ನೇಣು ಬಿಗಿದು ಆತ್ಮಹತ್ಯಗೆ ಶರಣಾದ ವಿವಾಹಿತ ಜೋಡಿ

ಅನೈತಿಕ ಸಂಬಂಧಕ್ಕೆ ವಿರೋಧ… ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವಿವಾಹಿತ ಜೋಡಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.