ಶೋಷಿತರಿಗೆ ಭೂಮಿ ಹಂಚಿಕೆ ಮಾಡಿದ್ದ ಟಿಪ್ಪು ಸುಲ್ತಾನ್‌


Team Udayavani, Nov 11, 2018, 4:59 PM IST

11-november-20.gif

ಗಂಗಾವತಿ: ಭೂಸುಧಾರಣೆ ಮೂಲಕ ಶೋಷಿತರಿಗೆ ಭೂಮಿ ಹಂಚಿಕೆ ಮಾಡಿದ ಹರಿಕಾರ ಟಿಪ್ಪು ಸುಲ್ತಾನ್‌ ಎಂದು ಶರಣಸಾಹಿತಿ ಸಿ.ಎಚ್‌. ನಾರಿನಾಳ ಹೇಳಿದರು. ಅವರು ಬಾಲಕಿಯರ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡ ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದಲ್ಲಿದ್ದ ಪಾಳೆಗಾರರು, ಜಮೀನ್ದಾರರು, ಪುರೋಹಿತಶಾಹಿ ಕೈಯಲ್ಲಿದ್ದ ಸಾವಿರಾರು ಎಕರೆ ಭೂಮಿಯನ್ನು ಪಡೆದು ಬಡವರಿಗೆ, ಕೆಳವರ್ಗದವರಿಗೆ ಹಂಚಿಕೆ ಮಾಡಬೇಕೆಂಬ ಚಿಕ್ಕದೇವರಾಯ ಒಡೆಯರ್‌, ಹೈದರ್‌ ಅಲಿ ಕನಸನ್ನು ಟಿಪ್ಪು ಸುಲ್ತಾನ್‌ ನನಸು ಮಾಡಿದ್ದಾರೆ. ರಾಜ ಎಂದರೆ ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಮಾಡುವುದು ಸಹಜ ಅದನ್ನು ಕೋಮುವಾದಿಗಳು ಇನ್ನಿಲ್ಲದ ಕಥೆ ಕಟ್ಟಿ ಟಿಪ್ಪು ಕೋಮುವಾದಿ, ಮತಾಂತರ ಮಾಡಿದ ಎಂದು ಗುಲ್ಲೆಬ್ಬಿಸುತ್ತಿದ್ದಾರೆ. ಕೆರೆ ಕಟ್ಟೆ ರಸ್ತೆ ಬೃಹತ್‌ ಪಟ್ಟಣಗಳ ನಿರ್ಮಾಣ ಮಾಡಿದ್ದು ಟಿಪ್ಪು. ಕೆಳವರ್ಗದ ಮಹಿಳೆಯರ ಮಾನ ಹರಾಜು ಹಾಕುತ್ತಿದ್ದ ಕೇರಳ ಮತ್ತು ಮಡಿಕೇರಿಯ ಸಂಪ್ರದಾಯಿಕ ಪದ್ಧತಿ ಹಾಗೂ ಮದ್ಯಪಾನ ನಿಷೇಧ ಮಾಡುವ ಮೂಲಕ ಪ್ರಗತಿಯ ಹರಿಕಾರರಾಗಿದ್ದಾರೆ. ಬಿಜೆಪಿಯವರು ಟಿಪ್ಪುವಿಗೆ ಕೋಮುವಾದಿ ಪಟ್ಟ ಕಟ್ಟುವ ಮೂಲಕ ಸಂಪ್ರದಾಯವಾದಿಗಳ ಪರವಾಗಿದ್ದಾರೆ. ಇವರಿಗೆ ಶೋಷಿತರು, ಬಡವರ ಉದ್ಧಾರ ಬೇಕಿಲ್ಲ. ಟಿಪ್ಪು ಆಂಧ್ರಪ್ರದೇಶದಲ್ಲಿ ಯುದ್ಧ ನಿರತರಾಗಿದ್ದ ಸಂದರ್ಭದಲ್ಲಿ ಮರಾಠರು ಶೃಂಗೇರಿ ಶಾರದೆ ಮಠದ ಮೇಲೆ ದಾಳಿ ನಡೆಸಿ ಚಿನ್ನಾಭರಣ ಸೇರಿ ಅಪಾರ ಸಂಪತ್ತು ಲೂಟಿ ಮಾಡಿದಾಗ ಮಠದ ಪೂಜ್ಯರು ಟಿಪ್ಪುವಿಗೆ ಪತ್ರ ಬರೆದು ವಿಷಯ ಗಮನಕ್ಕೆ ತಂದಾಗ ಆಗಿರುವ ನಷ್ಟ ಭರ್ತಿ ಮಾಡಿ ಪ್ರತಿ ವರ್ಷ ಶೃಂಗೇರಿ ಮತ್ತು ಮೇಲುಕೋಟೆ ಚಲುವನಾರಾಯಣ ಸ್ವಾಮಿ ದೇವಾಲಯಕ್ಕೆ ದೇಣಿಗೆ ನೀಡುವ ಸಂಪ್ರದಾಯ ಹಾಕಿದ್ದರು ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಮಹಮ್ಮದ್‌ ಉಸ್ಮಾನ್‌, ಅಬೀದಾಬೇಗಂ, ಕಸಾಪ ಮಾಜಿ ಅಧ್ಯಕ್ಷ ಅಜಮೀರ್‌ ನಂದಾಪೂರ, ಕಾಶಿಂ ಅಲಿ ಮುದ್ದಾಬಳ್ಳಿ, ಚಕ್ರವರ್ತಿ ನಾಯಕ, ಕೆ. ಪಾಮಪ್ಪ, ತಹಶೀಲ್ದಾರ್‌ ವಿರೇಶ ಬಿರಾದಾರ, ಡಿವೈಎಸ್‌ಪಿ ಸಂತೋಷ ಬನಹಟ್ಟಿ,  ಜುನಾಥ ಸ್ವಾಮಿ, ಜಂಬಣ್ಣ ಐಲಿ, ಮಹೇಶ ದಲಾಲ್‌ ಸೇರಿ ಅನೇಕರಿದ್ದರು.

ಶಾಸಕರು ಸೇರಿ ಜನಪ್ರತಿನಿಧಿಗಳು ಗೈರು
ತಾಲೂಕು ಆಡಳಿತ ಆಯೋಜಿಸಿದ್ದ ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಪರಣ್ಣ ಮುನವಳ್ಳಿ, ಸಂಸದ ಕರಡಿ ಸಂಗಣ್ಣ, ಜಿಪಂ ಉಪಾಧ್ಯಕ್ಷೆ ಲಕ್ಷ್ಯಮ್ಮ ನೀರಲೂಟಿ, ತಾಪಂ ಅಧ್ಯಕ್ಷ ವಿರೂಪಾಕ್ಷಿಗೌಡ, ನಗರಸಭೆ ಸದಸ್ಯರು ಗೈರಾಗಿದ್ದರು. ನಿಗದಿ ವೇಳೆಗಿಂತ ಕಾರ್ಯಕ್ರಮ ಎರಡು ಗಂಟೆ ತಡವಾಗಿ ಆರಂಭವಾಯಿತು. ಅಹಿತಕರ ಘಟನೆ ಜರುಗದಂತೆ ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.