ಮೇವು ಸಂಗ್ರಹಕ್ಕಾಗಿ ಮಳೆ ಆಶ್ರಿತ ರೈತರ ಹರಸಾಹಸ


Team Udayavani, Nov 17, 2018, 4:45 PM IST

17-november-20.gif

ಕನಕಗಿರಿ: ಒಣ ಬೇಸಾಯ ಪ್ರದೇಶವಾಗಿರುವ ತಾಲೂಕಿನಲ್ಲಿ ಮಳೆ ಬಂದರೆ ಮಾತ್ರ ಬೆಳೆ, ಇಲ್ಲವಾದರೇ ದೇವರೇ ಗತಿ ಎನ್ನುವಂತಹ ಪರಿಸ್ಥಿತಿ ಇದೆ. ಈ ಬಾರಿ ಮುಂಗಾರು, ಹಿಂಗಾರು ಮಳೆಗಳು ಸಂಪೂರ್ಣವಾಗಿ ಕೈಕೊಟ್ಟಿದರಿಂದ ಹುಲಿಹೈದರ್‌, ನವಲಿ, ಮುಸಲಾಪುರ, ಕನಕಗಿರಿ ಭಾಗದ ರೈತರು ಕಂಗಾಲಾಗಿದ್ದಾರೆ. ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳುವುದರ ಜೊತೆಗೆ ಜಾನುವಾರುಗಳಿಗೆ ಮೇವು ಸಂಗ್ರಹಿಸುವುದೇ ರೈತರಿಗೆ ಸವಾಲಿನ ಕೆಲಸವಾಗಿದೆ.

ಕನಕಗಿರಿ ತಾಲೂಕು ಒಣ ಬೇಸಾಯ ಪ್ರದೇಶವಾಗಿದ್ದು, ಈ ಭಾಗದ ರೈತರು ಜಾನುವಾರಗಳಿಗೆ ಮೇವು ಸಂಗ್ರಹಿಸಲು ನೀರಾವರಿ ಭಾಗವಾದ ಗಂಗಾವತಿ, ಕಾರಟಗಿಯತ್ತ ಅಲೆದಾಡುತ್ತಿದ್ದಾರೆ. ನೀರಾವರಿ ಭಾಗದಲ್ಲಿ ಬಿತ್ತನೆ ಮಾಡಿದ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಭತ್ತದ ಮೇವು ಸಂಗ್ರಹಿಸಲು ಮುಂದಾಗಿದ್ದಾರೆ. ನೀರಾವರಿ ಭಾಗದಲ್ಲಿ ಬೇಸಿಗೆ ಬೆಳೆಗೆ ನೀರು ಹರಿಸುವ ಬಗ್ಗೆ ಇನ್ನು ತೀರ್ಮಾನ ಮಾಡಿಲ್ಲ. ಆದ್ದರಿಂದ ನೀರಾವರಿ ಆಶ್ರಿತ ರೈತರ ತಮ್ಮ ಜಾನುವಾರಗಳಿಗೆ ಮೇವು ಬೇಕೆಂದು ಮಾರಾಟಕ್ಕೆ ಮುಂದಾಗುತ್ತಿಲ್ಲ. ಇನ್ನು ಒಣ ಬೇಸಾಯ ಪ್ರದೇಶದ ರೈತರು ಒಂದು ಟ್ರ್ಯಾಕ್ಟರ್‌ ಮೇವಿಗೆ 4ರಿಂದ 5 ಸಾವಿರ ರೂ. ನೀಡಿ ಖರೀದಿ ಮಾಡುತ್ತಿದ್ದಾರೆ.

ಗೋಶಾಲೆ ಪ್ರಾರಂಭಿಸಿಲ್ಲ: ಕನಕಗಿರಿ ತಾಲೂಕನ್ನು ಬರಪೀಡಿತ ತಾಲೂಕೆಂದು ಸರ್ಕಾರ ಘೋಷಿಸಿದೆ. ಆದರೆ ಇವರೆಗೂ ಯಾವುದೇ ಬರ ಕಾಮಗಾರಿ, ಗೋ ಶಾಲೆಯನ್ನೂ ಪ್ರಾರಂಭಿಸಿಲ್ಲ. ಕೆಲ ರೈತರು ಮೇವು ಇಲ್ಲದಿರುವ ಕಾರಣ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ. ಗೋ ಶಾಲೆಯನ್ನು ಪ್ರಾರಂಭಿಸುವಂತೆ ಈ ಭಾಗದ ರೈತರು ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಕನಕಗಿರಿ, ಹುಲಿಹೈದರ್‌, ನವಲಿ ಭಾಗದಲ್ಲಿ ಗೋ ಶಾಲೆಯನ್ನು ಪ್ರಾರಂಭಿಸಬೇಕೆಂಬುವುದು ರೈತರ ಒತ್ತಾಯಿಸುತ್ತಿದ್ದಾರೆ.

ಮೇವಿನ ಕೊರತೆ ಇರುವ ರೈತರಿಗೆ ಪಶು ಸಂಗೋಪನೆ ಇಲಾಖೆಯಿಂದ ಮೇವಿನ ಬೀಜಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಮೇವಿನ ಬೀಜಗಳು ಬಿತ್ತನೆ ಮಾಡಿ 40 ದಿನಗಳಲ್ಲಿ ಮೇವು ಕಟಾವು ಮಾಡಬಹುದು. ಈ ಯೋಜನೆಯನ್ನು ರೈತರು ಸದ್ಬಳಕೆ ಮಾಡಿಕೊಳ್ಳಬಹುದು.
. ಡಾ| ಮಲ್ಲಯ್ಯ ತಾಲೂಕು ಪಶು ವೈದ್ಯಾಧಿಕಾರಿ.

ಕನಕಗಿರಿ, ಹುಲಿಹೈದರ್‌, ನವಲಿ ಭಾಗದಲ್ಲಿ ಗೋ ಶಾಲೆ ಪ್ರಾರಂಭಿಸುವಂತೆ ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಜಾನುವಾರುಗಳನ್ನು ಉಳಿಸಿಕೊಳ್ಳಲು ಹಣ ನೀಡಿ ಮೇವು ಖರೀದಿ ಮಾಡುತ್ತಿದ್ದೇವೆ.
. ರಾಘವೇಂದ್ರ, ರೈತ

ಗೋ ಶಾಲೆಯನ್ನು ಪ್ರಾರಂಭಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇವೆ. ಗೋ ಶಾಲೆ ಪ್ರಾರಂಭವಾಗಲು 1 ತಿಂಗಳ ಆಗಬಹುದು. ಮೇವಿನ ಅವಶ್ಯಕತೆ ಇರುವ ರೈತರು ಟ್ಯಾಕ್ಟರ್‌ ತೆಗೆದುಕೊಂಡು ಬಂದರೆ ನಾನೇ ಮೇವು ಖರೀದಿ ಮಾಡಿಕೊಡುತ್ತೇನೆ.
.ಬಸವರಾಜ ದಢೇಸುಗೂರು, ಶಾಸಕ.

„ಶರಣಪ್ಪ ಗೋಡಿನಾಳ 

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.