ಸ್ವಾತಂತ್ರ್ಯ ಯೋಧನಿಗೆ ರಾಜ್ಯೋತ್ಸವ ಗೌರವ 


Team Udayavani, Nov 29, 2018, 3:52 PM IST

29-november-16.gif

ಕೊಪ್ಪಳ: ನಾವು ದೇಶದ ಸ್ವಾತಂತ್ರ್ಯಕ್ಕಾಗಿ, ನೆಲ, ಜಲ ಭಾಷೆಯ ಉಳಿವಿಗಾಗಿ ನಿಜಾಮರ ಆಳ್ವಿಕೆಯಲ್ಲಿ ಪೊಲೀಸರ ಕೈಯಿಂದ ಬಡಿಸಿಕೊಂಡು ಜೈಲು ಸೇರಿ ನಾಡು ಕಟ್ಟಲು ಶ್ರಮಿಸಿದ್ದೇವೆ. ಆದರೆ ಇಂದಿನ ಜನರಿಗೆ ದೇಶಾಭಿಮಾನ, ಭಾಷಾಭಿಮಾನದ ಅರಿವಿಲ್ಲ. ಇಂದಿನ ಪಾಲಕರಲ್ಲಿಯೇ ಕನ್ನಡದ ಬಗ್ಗೆ ಕಾಳಜಿಯಿಲ್ಲ ಎಂದು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ತಾಲೂಕಿನ ಬಿಸರಳ್ಳಿ ಗ್ರಾಮದ ಸ್ವಾತಂತ್ರ್ಯ  ಹೋರಾಟಗಾರ ಶರಣಬಸವರಾಜ ಬಿಸರಳ್ಳಿ ಬೇಸರ ವ್ಯಕ್ತಪಡಿಸುತ್ತಾರೆ.

ರಾಜ್ಯ ಸರ್ಕಾರ ಗುರುವಾರ ಪ್ರಕಟಿಸಿದ 2018ರ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಹಿರಿಯ ಜೀವಿ ಶರಣಬಸವರಾಜ ಬಿಸರಳ್ಳಿ ಅವರು ‘ಉದಯವಾಣಿ’ಯೊಂದಿಗೆ ಮನದಾಳದ ಮಾತು ಹಂಚಿಕೊಂಡಿದ್ದಾರೆ. ಪ್ರಸ್ತುತ ಕನ್ನಡ ಭಾಷೆ ಪೂರ್ತಿ ದಾರಿ ತಪ್ಪುತ್ತಿದೆ. ಏಲ್ಲಿ ನೋಡಿದರೂ ಅಲ್ಲಿ ಇಂಗ್ಲಿಷ್‌ ವ್ಯಾಮೋಹ ಹೆಚ್ಚಾಗಿದೆ. ಪಾಲಕರಲ್ಲಿ ಇಂಗ್ಲಿಷ್‌ನಲ್ಲಿ ಅಂತಹದ್ದು ಏನು ಕಂಡು ಬಂದಿದೆಯೋ ನನಗೆ ತಿಳಿಯುತ್ತಿಲ್ಲ. ಮಕ್ಕಳನ್ನು ಕನ್ನಡ ಶಾಲೆಗಳಿಗೆ ದಾಖಲಿಸುವುದನ್ನು ಬಿಟ್ಟು ಆಂಗ್ಲ ಮಾಧ್ಯಮ ಶಾಲೆಗೆ ದಾಖಲಿಸುತ್ತಾರೆ. ಈಗಿನ ಮಕ್ಕಳಿಗೆ ಕನ್ನಡ ವರ್ಣಮಾಲೆ, ಅಕ್ಷರಗಳ ಬಗ್ಗೆ ಸರಿಯಾದ ಪರಿಜ್ಞಾನವಿಲ್ಲ, ಇದು ಬೇಸರ ತರುತ್ತಿದೆ. ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಯಾವ ರಾಜ್ಯಗಳಲ್ಲಿಯೂ ಎಂಟು ಜನರಿಗೆ ಜ್ಞಾನಪೀಠ ಪ್ರಶಸ್ತಿ ದೊರೆತಿಲ್ಲ. ಆದರೆ ಕರ್ನಾಟಕದ ಕಣ್ಮಣಿಗಳಿಗೆ ಎಂಟು ಜ್ಞಾನಪೀಠ ಪ್ರಶಸ್ತಿ ಲಭಿಸಿವೆ. ಇದು ನಮ್ಮ ಸೌಭಾಗ್ಯವೇ ಸರಿ. ಆದರೆ ಈ ನೆಲದಲ್ಲಿ ಕನ್ನಡದ ಉಳಿವಿಗೆ ಹೋರಾಟಗಳು ಅಷ್ಟಕ್ಕಷ್ಟೇ ಆಗಿದೆ ಎನ್ನುತ್ತಾರೆ.

ಕರ್ನಾಟಕದಲ್ಲಿ ಕನ್ನಡ ಉಳಿಯಲೇಬೇಕಿದೆ. ಎಲ್ಲ ದಾಖಲೆಗಳಲ್ಲೂ ಕನ್ನಡದ ಪತ್ರವ್ಯವಹಾರ ನಡೆಸಬೇಕು. ಸರ್ಕಾರಗಳು ಇಂತಹ ವಿಷಯದ ಬಗ್ಗೆ ಇಚ್ಛಾಶಕ್ತಿ ತೋರುವ ಅವಶ್ಯಕತೆಯಿದೆ. ಸರ್ಕಾರಕ್ಕೆ ಡಾ| ಸರೋಜಿನಿ ಮಹಿಷಿ ವರದಿ ಕೊಟ್ಟು ಎಷ್ಟೋ ವರ್ಷಗಳು ಕಳೆದಿವೆ. ಆದರೆ ಸರ್ಕಾರವೇ ಅದನ್ನು ಮುಚ್ಚಿಡುತ್ತಿದೆ. ಕನ್ನಡದ ಉಳಿವಿಗೆ ಕೊಟ್ಟ ವರದಿಗಳೆಲ್ಲವೂ ಅನುಷ್ಠಾನವಾಗುವ ಅವಶ್ಯಕತೆಯಿದೆ.

ಕೇಂದೀಯ ಶಾಲೆಯಲ್ಲೂ ಕನ್ನಡವಿರಲಿ: ಕೇಂದ್ರ ಸರ್ಕಾರದಿಂದ ರಾಜ್ಯದೆಲ್ಲಡೆ ಆರಂಭ ಮಾಡಿರುವ ಕೇಂದ್ರಿಯ ವಿದ್ಯಾಲಯ ಸೇರಿದಂತೆ ಎಲ್ಲ ಶಾಲೆಗಳಲ್ಲೂ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕು. ಕನಿಷ್ಟ 1ರಿಂದ 7ನೇ ತರಗತಿವರೆಗೂ ಕನ್ನಡ ಕಡ್ಡಾಯವಾಗಬೇಕಿದೆ. ಈ ಕುರಿತಂತೆ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದೇನೆ. ಇನ್ನೂ ಅಲ್ಲಿಂದ ಉತ್ತರ ಬಂದಿಲ್ಲ. ಮಕ್ಕಳಿಗೆ ನಾವೇ ಸರಿಯಾದ ದಾರಿಯಲ್ಲಿ ನಡೆಸಿದರೆ ಅವರು ಕನ್ನಡದ ಬಗ್ಗೆ ಅಭಿಮಾನ ಹೊಂದುತ್ತಾರೆ. ಇಲ್ಲದ್ದಿದ್ದರೆ ಅವರಿಗೆ ಭಾಷಾಭಿಮಾನ ಮೂಡುವುದಾದರೂ ಹೇಗೆ ಎಂದು ಪಾಲಕರ ಕನ್ನಡ ನಿರ್ಲಕ್ಷ್ಯದ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಸ್ವಾತಂತ್ರ್ಯ  ಹೋರಾಟದ ನೆನಪು 
ದೇಶಕ್ಕೆ 1947 ಆ. 15ರಂದು ಸ್ವಾತಂತ್ರ್ಯ ಸಿಕ್ಕರೂ ಹೈದ್ರಾಬಾದ್‌ ಕರ್ನಾಟಕ ಭಾಗಕ್ಕೆ ಆಗಿನ್ನೂ ಸ್ವಾತಂತ್ರ್ಯ ದೊರೆತಿರಲಿಲ್ಲ. ಇಲ್ಲಿ ನಿಜಾಮರ ಆಳ್ವಿಕೆ ಜೋರಾಗಿತ್ತು. ಆಗ ಯುವಕರಾಗಿದ್ದ ಶರಣಬಸವರಾಜ ಬಿಸರಳ್ಳಿ ಅವರು ನಿಜಾಮನ ವಿರುದ್ಧವೇ ಸಿಡಿದೆದ್ದು ಕೊಪ್ಪಳ ಹಳೇ ಡಿಸಿ ಕಚೇರಿ ಮೇಲೆ ಮಧ್ಯರಾತ್ರಿ ರಾಷ್ಟ್ರ ಧ್ವಜಾರೋಹಣ ಮಾಡಿ ದಿಟ್ಟತನ ತೋರಿದ್ದರು. ಇದರಿಂದ ಆಗಿನ ಆಡಳಿತ ವರ್ಗ ಇವರನ್ನು ಬಂಧಿಸಿ ಜೈಲಿಗೆ ಕಳಿಸಿತ್ತು. ಆದರೂ ಸ್ವಾತಂತ್ರ್ಯಕ್ಕಾಗಿ ತನ್ನ ನಿಷ್ಠೆ ಬಿಡದ ಇವರು ನನ್ನನ್ನು ಗಲ್ಲಿಗೇರಿಸಿದರೂ ಪರವಾಗಿಲ್ಲ. ಸ್ವಾತಂತ್ರ್ಯಕ್ಕಾಗಿ ನಾವು ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದು ಪಣ ತೊಟ್ಟಿದ್ದರು. 

ಮೂರು ಬಾರಿ ಜೈಲು ಸೇರಿದ್ದ ಇವರು ನಿಜಾಮ್‌ ಪೊಲೀಸರ ಕೈಯಿಂದ ಬಡಿಸಿಕೊಂಡಿದ್ದರು. ಸ್ವಾತಂತ್ರ್ಯಕ್ಕಾಗಿ ವಿವಿಧೆಡೆ ಸಭೆ ನಡೆಸಿದ್ದಲ್ಲದೇ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ತಂದು ಬಿಸರಳ್ಳಿ ಗ್ರಾಮದಲ್ಲಿಟ್ಟು ಗಾಂಧೀಜಿ ಕಟ್ಟೆ ಕಟ್ಟಿಸಿದ್ದರು. ಕೊನೆಗೂ ಹೈಕ ವಿಮೋಚನೆಗೆ ಹಲವು ಹೋರಾಟಗಾರರ ಜೊತೆ ಕೈ ಜೋಡಿಸಿ ಯಶಸ್ವಿಯಾಗಿದ್ದಾರೆ. ಈಗಲೂ ಸಮಾಜ ಸೇವೆಯಲ್ಲಿ ತೊಡಗಿರುವ ಇವರು ಇಳಿ ವಯಸ್ಸಿನಲ್ಲೂ ದೇಶ, ಭಾಷಾಭಿಮಾನಕ್ಕಾಗಿ ಹೋರಾಟ ನಡೆಸಿದ್ದಾರೆ. ಆದರೆ ಪ್ರಸ್ತುತ ಭ್ರಷ್ಟಾಚಾರ ವ್ಯವಸ್ಥೆಯ ವೈಖರಿಗೆ ಪ್ರತಿಯೊಬ್ಬರ ವಿರುದ್ಧವೂ ಸಿಡಿಯುತ್ತಿದ್ದಾರೆ.

ದೇಶಕ್ಕಾಗಿ ಹೋರಾಡಿದ ಜೀವ
ಕೊಪ್ಪಳ: ರಾಜ್ಯ ಸರ್ಕಾರ ಪ್ರಸಕ್ತ ವರ್ಷದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು, ಸ್ವಾತಂತ್ರ್ಯ ಹೋರಾಟಗಾರರ ಕ್ಷೇತ್ರದಲ್ಲಿ ಕೊಪ್ಪಳ ತಾಲೂಕಿನ ಬಿಸರಳ್ಳಿ ಗ್ರಾಮದ ಹಿರಿಯ ಜೀವ, ಸ್ವಾತಂತ್ರ್ಯ ಹೋರಾಟಗಾರ ಶರಣಬಸವರಾಜ ಬಿಸರಳ್ಳಿ ಅವರಿಗೆ ಪ್ರಶಸ್ತಿ ಲಭಿಸಿದೆ.

ಶರಣಬಸವರಾಜ ಬಿಸರಳ್ಳಿ ಅವರು ಬಿಸರಳ್ಳಿಯಲ್ಲಿ 25-4-1929ರಂದು ಜನಿಸಿದರು. 1ರಿಂದ 4ನೇ ತರಗತಿವರೆಗೂ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದ ಶಾಲೆಯಲ್ಲಿ ಪೂರೈಸಿ 5ರಿಂದ ಮೆಟ್ರಿಕ್‌ವರೆಗೂ ಕೊಪ್ಪಳದಲ್ಲಿ ಅಭ್ಯಾಸ ಮಾಡಿದ್ದಾರೆ. ನಂತರ ಧಾರವಾಡದ ಕರ್ನಾಟಕ ವಿವಿಯಲ್ಲಿ ಎಂಎ, ಹಂಪಿ ವಿವಿಯಲ್ಲೂ ಎಂಪಿ ಪದವಿ ಪಡೆದಿದ್ದಾರೆ. ನಂತರ ಗಂಗಾವತಿಯಲ್ಲಿ ಬಿಇಡಿ ಅಭ್ಯಾಸ ಪೂರೈಸಿದ ಇವರು, ನಂತರ ಎಲ್‌ಎಲ್‌ಬಿ ಪದವಿ ಪಡೆದಿದ್ದಾರೆ. 1953, ಅ. 10ರಂದು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿ ಸರ್ಕಾರಿ ನೌಕರಿ ಸೇರಿದ ಅವರು ಸುದೀರ್ಘ‌ 39 ವರ್ಷಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಕವಲೂರು, ಮಂಗಳೂರು, ಕೊಪ್ಪಳ, ಕಾರಟಗಿ ಸೇರಿದಂತೆ ಇತರೆಡೆ ಸೇವೆ ಸಲ್ಲಿಸಿದ ಅವರು 1992ರಲ್ಲಿ ನಿವೃತ್ತಿಯಾಗಿದ್ದಾರೆ. ನಿವೃತ್ತಿ ಬಳಿಕವೂ ಕಾಲಿ ಕುಳಿತುಕೊಳ್ಳದ ಹಿರಿಯ ಜೀವಿ ಪಿಎಚ್‌ಡಿ ಮಾಡಬೇಕೆನ್ನುವ ಮಹದಾಸೆಯಿಂದ ಇತ್ತೀಚೆಗೆ ಧಾರವಾಡ ಹಾಗೂ ಹಂಪಿ ವಿವಿಯಲ್ಲಿ ಪ್ರವೇಶ ಪರೀಕ್ಷೆ ಬರೆದಿದ್ದರು. 91ನೇ ಇಳಿ ವಯಸ್ಸಿನಲ್ಲಿಯೂ ಹಂಪಿ ವಿವಿಯಲ್ಲಿ ಪ್ರಸ್ತುತ ಪಿಎಚ್‌ಡಿಗೆ ಪ್ರವೇಶಾತಿ ದೊರೆತಿದೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.