ಉಡಾನ್‌ ರೆಕ್ಕೆ ಕತ್ತರಿಸಿದ ಮೈತ್ರಿ ಸರ್ಕಾರ 


Team Udayavani, Dec 5, 2018, 3:25 PM IST

5-december-16.gif

ಕೊಪ್ಪಳ: ಜಿಲ್ಲೆಗೆ ಘೋಷಣೆಯಾದ ‘ಉಡಾನ್‌ ಯೋಜನೆ’ ಮೈತ್ರಿ ಸರ್ಕಾರದ ಒಪ್ಪಂದದ ಮಧ್ಯದಲ್ಲೇ ನರಳಾಡುತ್ತಿದೆ. ಅದರಲ್ಲೂ ಖಾಸಗಿ ಸಹಭಾಗಿತ್ವದಲ್ಲಿ ಕೇಂದ್ರ ಸರ್ಕಾರವು ಇದನ್ನು ಘೋಷಿಸಿದ್ದು, ಸ್ಥಳೀಯ ಎಂಎಸ್‌ಪಿಎಲ್‌ ಕಂಪನಿಯೂ ಒಪ್ಪಂದಕ್ಕೆ ಇನ್ನೂ ಮನಸ್ಸು ಮಾಡುತ್ತಿಲ್ಲ ಎಂಬ ಮಾತು ಕೇಳಿ ಬಂದಿದೆ.

ದೇಶದ ಮೂಲೆ ಮೂಲೆಗೂ ವಿಮಾನಯಾನ ಸೇವೆ ಆರಂಭಿಸಬೇಕೆನ್ನುವ ಸದುದ್ದೇಶದಿಂದ ವರ್ಷದ ಹಿಂದೆ ಕೇಂದ್ರ ಮೋದಿ ಸರ್ಕಾರವು ಉಡಾನ್‌ ಯೋಜನೆಯನ್ನು ಘೋಷಿಸಿದೆ. ಆದರೆ, ಕರ್ನಾಟಕದ ಇತರೆ ಜಿಲ್ಲೆಗಳಲ್ಲಿ ಈ ಕುರಿತುಂತೆ ವಿವಿಧ ಹಂತದ ಪ್ರಕ್ರಿಯೆ ನಡೆದಿದ್ದರೂ ಜಿಲ್ಲೆಯಲ್ಲಿ ಯಾವುದೇ ಬೆಳವಣಿಗೆ ನಡೆದಿಲ್ಲ. ಪಕ್ಕದ ಬಳ್ಳಾರಿ ಜಿಲ್ಲೆಯಲ್ಲಿ ಜಿಂದಾಲ್‌ ಸಂಸ್ಥೆ ಕೇಂದ್ರದ ಯೋಜನೆಗೆ ಒಪ್ಪಿಕೊಂಡಿದ್ದು, ಈ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ. ಇಲ್ಲಿ ಮಾತ್ರ ಹಲವು ತೊಡಕು ಎದುರಾಗಿವೆ.

ಮೈತ್ರಿ ಸರ್ಕಾರದಿಂದ ಒಪ್ಪಂದ: ಕೇಂದ್ರ ಸರ್ಕಾರವೇನೋ ಯೋಜನೆ ಘೋಷಿಸಿದೆ. ಆದರೆ ಇದಕ್ಕೆ ಆರಂಭದಲ್ಲಿ ಸ್ವಲ್ಪ ಅನುದಾನದ ನೆರವು ಕೊಡಲಿದೆ. ಉಳಿದಂತೆ ರಾಜ್ಯ ಸರ್ಕಾರವೇ ಅಭಿವೃದ್ಧಿ ಮಾಡಬೇಕಿದೆ. ಆದರೆ ಅಭಿವೃದ್ಧಿ ಮಾಡಿದ ಅನುದಾನವನ್ನು ಕೇಂದ್ರ ನಂತರದಲ್ಲಿ ಭರಿಸಲಿದೆ. ಇದಕ್ಕೆ ರಾಜ್ಯ ಒಪ್ಪಿಗೆ ಸೂಚಿಸಿ ಒಪ್ಪಂದ ಮಾಡಿಕೊಳ್ಳಬೇಕು. ಅಲ್ಲದೇ, ಕೇಂದ್ರವು ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆಗೆ ಮುಂದಾಗಿದ್ದು, ಇಲ್ಲಿನ ಎಂಎಸ್‌ಪಿಎಲ್‌ ಸಂಸ್ಥೆ ಪೂರ್ಣ ಪ್ರಮಾಣದಲ್ಲಿ ಒಪ್ಪಿಗೆ ಸೂಚಿಸುತ್ತಿಲ್ಲ.

ಏರೋಡ್ರೋಮ್‌ನಲ್ಲಿ ಅಲ್ಪ ಸೌಕರ್ಯ: ಪ್ರಸ್ತುತ ತಾಲೂಕಿನ ಬಸಾಪುರ ಲಘು ವಿಮಾನ ನಿಲ್ದಾಣ ಒಂದು ಸಣ್ಣ ಪ್ರಮಾಣದ ವಿಮಾನ ಬಂದಿಳಿಸುವ ಸಾಮರ್ಥ್ಯ ಹೊಂದಿದೆ. ಬೃಹದಾಕಾರದ ಸೌಲಭ್ಯ ಇಲ್ಲಿಲ್ಲ. ಗಣ್ಯ ವ್ಯಕ್ತಿಗಳು ಸಣ್ಣ ವಿಮಾನದಲ್ಲಿ ಬಂದಿಳಿಯಲು ಅವಕಾಶವಿದೆ. ಸಾರ್ವಜನಿಕರ ಪ್ರಯಾಣಕ್ಕೆ ಇಲ್ಲಿ ಇನ್ನು ಅಗತ್ಯ ಸೌಲಭ್ಯ ಇಲ್ಲ. ಇದನ್ನು ರಾಜ್ಯ ಸರ್ಕಾರ ಎಂಎಸ್‌ಪಿಎಲ್‌ ಜೊತೆಗೆ ಒಪ್ಪಂದ ಮಾಡಿಕೊಂಡು ಮೇಲ್ದರ್ಜೆಗೇರಿಸಲು ಬೇಕಿರುವ ಸಕಲ ಸೌಕರ್ಯ ಕಲ್ಪಿಸಬೇಕಾಗುತ್ತದೆ. ಇಲ್ಲಿ ಅನುದಾನ ವಿನಿಯೋಗಿಸಲು ರಾಜ್ಯವೂ ಮನಸ್ಸು ಮಾಡುತ್ತಿಲ್ಲ.

ಉಡಾನ್‌ ಯೋಜನೆಗೆ ಏನೆಲ್ಲ ಬೇಕು?: ಒಂದು ವೇಳೆ ಎಂಎಸ್‌ಪಿಎಲ್‌ನಲ್ಲಿ ಉಡಾನ್‌ ಯೋಜನೆ ಆರಂಭಿಸಿದ್ದೇ ಆದರೆ ಪಾರ್ಕಿಂಗ್‌ ವ್ಯವಸ್ಥೆ, ಅಗತ್ಯ ಸಿಬ್ಬಂದಿ ಬೇಕು. ಲಘು ವಿಮಾನದಿಂದ ಮಧ್ಯಮ ಗಾತ್ರದ ವಿಮಾನಗಳು ಇಲ್ಲಿ ಹಾರಾಟ ನಡೆಸಲಿವೆ. ಅದಕ್ಕೆ ಹೆಚ್ಚುವರಿ ರನ್‌ವೇಗೆ ಭೂಮಿ ಸ್ವಾಧಿಧೀನ ಮಾಡಿಕೊಳ್ಳಬೇಕು. ವಿಮಾನಗಳ ಹಾರಾಟದ ಸಂಖ್ಯೆ ಹೆಚ್ಚಾದಂತೆ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು. ಜೊತೆಗೆ ಭದ್ರತೆಗೆ ಬೇಕಿರುವ ಸಾಮಗ್ರಿಗಳನ್ನೂ ಪೂರೈಸಬೇಕಿದೆ. ಪ್ರಯಾಣಿಕರು ಬಂದು ತೆರಳುವವರೆಗೂ ಅವರಿಗೆ ಸೇವೆ ಕೊಡುವ ಅಗತ್ಯವಿದೆ. ಪೊಲೀಸ್‌ ಭದ್ರತಾ ವ್ಯವಸ್ಥೆ, ಶ್ವಾನದಳ, ವೈದ್ಯರ ಸೇವೆ, ಜಾಗೃತ ದಳ, ಅಗ್ನಿಶಾಮಕ ತಂಡ, ತುರ್ತು ಸೇವಾ ಘಟಕ, ಔಷಧ  ಸೌಲಭ್ಯ, ಪ್ರಯಾಣಿಕರಿಗೆ ವಿಶ್ರಾಂತಿ ಕೊಠಡಿ, ಸ್ನಾನಗೃಹ, ಶೌಚಗೃಹ, ಸೆಕ್ಯೂರಿಟಿ ಚೆಕ್‌ ಏರಿಯಾ, ಬ್ಯಾಗ್‌ಗಳ ತಪಾಸಣಾ ವಿಭಾಗ, ವಾಹನಗಳ ಒಳ ಹಾಗೂ ಹೊರ ಹೋಗುವ ಚೆಕ್‌ಪೋಸ್ಟ್‌ ನಿರ್ಮಾಣ ಮಾಡಲು ಅಗತ್ಯ ಸೌಕರ್ಯ ಬೇಕಿದೆ. ಈ ಎಲ್ಲ ನೂರೆಂಟು ನಿಯಮಗಳಿಗೆ ಒಪ್ಪಂದ ಮಾಡಿಕೊಂಡರೆ ಮಾತ್ರ ಉಡಾನ್‌ ಹಾರಾಟ ನಡೆಸಲಿದೆ.

ಒಟ್ಟಿನಲ್ಲಿ ಹಿಂದುಳಿದ ಭಾಗಕ್ಕೆ ಉಡಾನ್‌ ಯೋಜನೆ ಘೋಷಣೆಯಾಗಿದ್ದು, ಈ ಭಾಗದ ಜನರಿಗೆ ಖುಷಿ ತಂದಿತ್ತು. ಇಲ್ಲಿಯಿಂದಲೇ ನೇರವಾಗಿ ರಾಜ್ಯ, ದೇಶದಲ್ಲಿ ಸಂಚಾರಕ್ಕೆ ಅನುವಾಗಲಿದೆ ಎಂದು ಜನರು ಭಾವಿಸಿದ್ದರು. ಆದರೆ ಇನ್ನೂ ಹೊಯ್ದಾಟದಿಂದಾಗಿ ಜನರು ಉಡಾನ್‌ ಬಗ್ಗೆ ಕನಸು ಕಾಣುವಂತಾಗುತ್ತಿದೆ.

ಕೊಪ್ಪಳ ಜಿಲ್ಲೆಗೂ ಉಡಾನ್‌ ಯೋಜನೆಯನ್ನು ಘೋಷಿಸಿದೆ. ರಾಜ್ಯ ಸರ್ಕಾರ ಇಲ್ಲಿನ ಎಂಎಸ್‌ಪಿಎಲ್‌ ಕಂಪನಿ ಜೊತೆ ಒಪ್ಪಂದ ಮಾಡಿಕೊಳ್ಳಬೇಕಿದೆ. ರಾಜ್ಯ ಹಾಗೂ ಕೇಂದ್ರದ ಸಹಭಾಗಿತ್ವದಲ್ಲಿ ಉಡಾನ್‌ ಅಭಿವೃದ್ಧಿ ಮಾಡಬೇಕಿದೆ. ಸ್ಥಳೀಯ ಎಂಎಸ್‌ಪಿಎಲ್‌ ಕಂಪನಿ ಇನ್ನೂ ಒಪ್ಪಿಗೆ ಸೂಚಿಸಿಲ್ಲ. ರಾಜ್ಯ ಸರ್ಕಾರಕ್ಕೂ ಈ ಕುರಿತು ಮನವಿ ಮಾಡಿದ್ದೇವೆ. 
 ಸಂಗಣ್ಣ ಕರಡಿ, ಸಂಸದ

ದತ್ತು ಕಮ್ಮಾರ 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.