ಮಾರ್ಚ್ ಅಂತ್ಯಕ್ಕೆ ಗಂಗಾವತಿಗೆ ರೈಲು
Team Udayavani, Dec 7, 2018, 3:36 PM IST
ಗಂಗಾವತಿ: ಬಹುದಿನಗಳ ಕನಸಾಗಿರುವ ಗಂಗಾವತಿವರೆಗಿನ ರೈಲ್ವೆ ಮಾರ್ಗದಲ್ಲಿ 2019ರ ಮಾರ್ಚ್ ಅಂತ್ಯದ ವೇಳೆ ರೈಲು ಓಡಿಸಲು ರೈಲ್ವೆ ಇಲಾಖೆ ಸಕಲ ಸಿದ್ಧತೆ ನಡೆಸಿದೆ. ಗುರುವಾರ ನೈರುತ್ಯ ರೈಲ್ವೆ ವಲಯದ ಮಹಾಪ್ರಬಂಧಕ ಎ.ಕೆ. ಸಿಂಗ್ ಹಾಗೂ ಅಧಿಕಾರಿಗಳ ತಂಡ ಗಂಗಾವತಿ ರೈಲ್ವೆ ನಿಲ್ದಾಣ ಹಾಗೂ ವಸತಿ ಗೃಹಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಗಂಗಾವತಿಯಿಂದ ಚಿಕ್ಕಬೆಣಕಲ್ಲವರೆಗೆ ರೈಲ್ವೆ ಮಾರ್ಗದ ಮೇಲೆ ಪರೀಕ್ಷಾರ್ಥ ಗಾಡಿಯ ಮೇಲೆ ಅಧಿಕಾರಿಗಳು ತೆರಳಿ ಗುಣಮಟ್ಟ ಪರಿಶೀಲನೆ ನಡೆಸಿದರು. ಭೇಟಿಯ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಸಸಿಗಳನ್ನು ನೆಡಲಾಯಿತು. ಗುತ್ತಿಗೆದಾರರಿಂದ ಮಹಾಪ್ರಬಂಧಕ ಎ.ಕೆ. ಸಿಂಗ್ ಹಾಗೂ ಮುಖ್ಯ ಅಭಿಯಂತರ ರಾಮಗೋಪಾಲ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ರೈಲ್ವೆ ಸಲಹಾ ಮಂಡಳಿ ಮಾಜಿ ಸದಸ್ಯ ಹಾಗೂ ನಾಗರೀಕ ಹಿತರಕ್ಷಣಾ ವೇದಿಕೆ ಸಂಚಾಲಕ ವಿ.ಪಿ. ಗುಪ್ತಾ ಮಾತನಾಡಿ, ಈಗಾಗಲೇ ಗಂಗಾವತಿ ರೈಲ್ವೆ ನಿಲ್ದಾಣದವರೆಗೆ ರೈಲು ಸಂಚಾರ ಮಾಡಬೇಕಿತ್ತು. ರೈಲ್ವೆ ಹಳಿಯ ಕೊರತೆಯಿಂದ ಮಾರ್ಗದ ಕಾಮಗಾರಿ ವಿಳಂಬವಾಗಿದೆ. ದೇಶದಲ್ಲಿ ರೈಲ್ವೆ ಅಪಘಾತ ಹಾಗೂ ಮಾರ್ಗ ಪರಿವರ್ತನೆ ಹಿನ್ನೆಲೆಯಲ್ಲಿ ಹಳಿ ಕೊರತೆಯಾಗಿದೆ. ಈಗಾಗಲೇ ಗಂಗಾವತಿ ತನಕ ಹಳೆಯ ಹಳಿಗಳ ಜೋಡಣೆಯಾಗಿದ್ದು, ಫೆಬ್ರುವರಿ ವೇಳೆ ನೂತನ ಹಳಿ ಜೋಡಣೆ ಮಾಡಿ ಮಾರ್ಚ್ ಅಂತ್ಯದ ವೇಳೆಗೆ ಗಂಗಾವತಿಯಿಂದ ರೈಲು ಸಂಚಾರ ನಡೆಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಗಂಗಾವತಿಯಿಂದ ಗೋವಾ ಹಾಗೂ ಹೈದ್ರಾಬಾದ್ ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ರೈಲು ಓಡಿಸುವಂತೆ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಂಸದರಿಗೆ ಈಗಾಗಲೇ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್