ಹೊಸ ಕಟ್ಟಡದಲ್ಲಿ ಶೌಚಾಲಯವೇ ಇಲ್ಲ


Team Udayavani, Jan 24, 2019, 11:11 AM IST

24-january-23.jpg

ದೋಟಿಹಾಳ: ಸಮೀಪ ಶಿರಗುಂಪಿ ಗ್ರಾಮದಲ್ಲಿ ಸುಮಾರ ಒಂದು ಕೋಟಿ ರೂ. ಖರ್ಚು ಮಾಡಿ ಸುಂದರವಾದ ಶಾಲೆಯ ಕಟ್ಟಡವನ್ನು ಕಟ್ಟಿದಾರೆ. ಆದರೆ ಸರಿಯಾದ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡದೆ ಶಾಲಾ ಕಟ್ಟಡವನ್ನು ಉದ್ಘಾಟನೆ ಮಾಡಿದರ ಪರಿಣಾಮ ವಿದ್ಯಾರ್ಥಿಗಳು ನಿತ್ಯ ತೊಂದರೆ ಅನುಭವಿಸುತ್ತಿದಾರೆ.

ಗ್ರಾಮೀಣ ಮಕ್ಕಳು ಶಿಕ್ಷಣಕ್ಕಾಗಿ ಕೇಂದ್ರ ಸರಕಾರದ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ(ಆರ್‌ಎಂಎಸ್‌ಎ)ಯೋಜನೆ ಅಡಿಯಲ್ಲಿ ಜಂಪನಾ ಕಾನ್ಸಟ್ರಕ್ಷನ್‌ ಪ್ರೈವೆಟ್ ಲಿಮಿಟೆಡ್‌ ಬೆಂಗಳೂರು ಮತ್ತು ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ 10 ಕೊಠಡಿಗಳನ್ನು ನಿರ್ಮಿಸಲಾಗಿದೆ. ಈ ನೂತನ ಶಾಲಾ ಕಟ್ಟಡವನ್ನು ಇತ್ತೀಚೆಗೆ ಉದ್ಘಾಟನೆ ಮಾಡಲಾಗಿದೆ. ಅದರೆ ಇಲ್ಲಿಯ ಶಾಲಾ ಮಕ್ಕಳು ಮೂಲ ಸೌಕರ್ಯಗಳ ಕೊರತೆಯಿಂದ ಹಲವು ಸಮಸ್ಯೆ ಅನುಭವಿಸುತ್ತಿದ್ದಾರೆ.

ಈ ಶಾಲಾ ಕಟ್ಟಡಕ್ಕೆ ಕೋಟಿಗಟ್ಟಲೇ ಹಣ ಖರ್ಚು ಮಾಡಿದ್ದಾರೆ. ಆದರೆ ಶಾಲಾ ಮಕ್ಕಳಿಗೆ ಶೌಚಾಲಯವನ್ನು ನಿರ್ಮಿಸಿಲ್ಲ. ಇದರಿಂದ ಶಾಲಾ ಬಾಲಕಿಯರ ಪರಿಸ್ಥಿತಿ ಹೇಳತೀರದು. ಬಾಲಕರು ಶೌಚಕ್ಕಾಗಿ ದೂರದ ಬಯಲು ಪ್ರದೇಶವನ್ನೇ ಅವಲಂಬಿಸಿದ್ದಾರೆ.

ಅಡುಗೆ ಕೊಠಡಿ ಕೊರತೆ: ಈ ಸರ್ಕಾರಿ ಪ್ರೌಢಶಾಲೆಯಲ್ಲಿ 202 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಿಗೆ ನಿತ್ಯ ಬಿಸಿಯೂಟ ತಯಾರಿಸಲು ಸೂಕ್ತ ಅಡುಗೆ ಕೊಠಡಿ ಇಲ್ಲದಿರುವುದರಿಂದ ಶಾಲೆಯ ಕೊಠಡಿಯಲ್ಲಿ ನಿತ್ಯ ಅಡುಗೆ ಮಾಡಲಾಗುತ್ತಿದೆ. ನೂತನ ಕಟ್ಟಡ ನಿರ್ಮಾಣದ ವೇಳೆ ಬಿಸಿಯೂಟದ ಅಡುಗೆ ಕೊಠಡಿಯನ್ನೂ ಕಟ್ಟಿಲ್ಲ. ಹೀಗಾಗಿ ಶಾಲಾ ಮಕ್ಕಳಿಗೆ ಪ್ರತಿನಿತ್ಯ ಬಿಸಿಯೂಟ ಮಾಡಲು ತೊಂದರೆಯಾಗುತ್ತಿರುವುದರಿಂದ ಶಾಲೆಯ ಒಂದು ಕೊಠಡಿಯಲ್ಲಿ ಅಡುಗೆ ಮಾಡಲಾಗುತ್ತಿದೆ.

ಶೌಚಾಲಯ ಕೊರತೆ: ಸರಕಾರ ಈ ಶಾಲೆಯ ಕಟ್ಟಡಕ್ಕೆ ಕೋಟಿಗಟ್ಟಲೇ ಹಣ ಖರ್ಚು ಮಾಡಿದೆ. ಆದರೆ ಒಂದೇ ಒಂದು ಶೌಚಾಲಯ ನಿರ್ಮಿಸಿಲ್ಲ. ಬಾಲಕಿಯರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡ ಶಿಕ್ಷಕರು ತಮ್ಮಗೆ ನಿರ್ಮಿಸಿದ ಶೌಚಾಲಯದ ಒಂದು ಭಾಗವನ್ನು ವಿದ್ಯಾರ್ಥಿನಿಯರ ಬಳಕೆಗೆ ನೀಡಿದ್ದಾರೆ.

ಶಾಲಾ ಅಡುಗೆ ಕೊಠಡಿ ಹಾಗೂ ಶೌಚಾಲಯ ನಿರ್ಮಾಣದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಸದ್ಯ ಶಿಕ್ಷಕರಿಗಾಗಿ ನಿರ್ಮಿಸಿದ ಶೌಚಾಲಯವನ್ನು ವಿದ್ಯಾರ್ಥಿನಿಯರ ಬಳಕೆಗೆ ನೀಡಲಾಗಿದೆ. ಶಾಲಾ ಕಾಂಪೌಂಡ್‌ ಅರ್ಧ ಭಾಗ ಮಾತ್ರ ಮುಗಿದಿದೆ. ಮುಖ್ಯದ್ವಾರಕ್ಕೆ ಒಂದು ಗೆಟ್ ವ್ಯವಸ್ಥೆಯ ಕೊರತೆ ಸೇರಿದ್ದಂತೆ ಸಣ್ಣಪುಟ ಸಮಸ್ಯೆಗಳಿವೆ ಎಂದು ಶಾಲಾ ಮುಖ್ಯೋಪಾಧ್ಯಾಯ ಮಹಾಂತಯ್ಯ ಸೊಪ್ಪಿಮಠ ತಿಳಿಸಿದರು.

ಶಿರಗುಂಪಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಬೇರೊಂದು ಬಿಸಿಯೂಟದ ಕೊಠಡಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಜೂರಾತಿಯಾದ ಕೂಡಲೇ ಕೊಠಡಿ ನಿರ್ಮಾಣಕ್ಕೆ ಮಾಡಿಕೊಡುತ್ತೇವೆ ಎಂದು ತಾಲೂಕು ಅಕ್ಷರ ದಾಸೋಹ ಅಧಿಕಾರಿ ಕೆ. ಶರಣಪ್ಪ ಅವರು ಹೇಳಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.