ಸೌಲಭ್ಯವಿಲ್ಲದೇ ನರಳುತ್ತಿವೆ ಅಂಗನವಾಡಿ


Team Udayavani, Feb 4, 2019, 10:49 AM IST

4-february-20.jpg

ತಾವರಗೇರಾ: ಸುಸಜ್ಜಿತ ಕಟ್ಟಡ, ಕುಡಿವ ನೀರು, ಭದ್ರತೆ ಕೊರತೆ, ಶುದ್ಧ ವಾತಾವರಣ, ಮಾತೃಪೂರ್ಣ ಯೋಜನೆ, ಗಾಳಿ, ಬೆಳಕು, ನೆರಳು ಹೀಗೆ ವಿವಿಧ ಸಮಸ್ಯೆಗಳಿಂದ ಸುತ್ತಮುತ್ತಲಿನ ಅಂಗನವಾಡಿ ಕೇಂದ್ರಗಳು ನರಳಾಡುತ್ತಿದೆ.

ಪಟ್ಟಣದ ಕೆಲವು ವಾರ್ಡ್‌ಗಳ ಅಂಗನವಾಡಿ ಕೆಂದ್ರಗಳು ಮತ್ತು ಹೋಬಳಿ ವ್ಯಾಪ್ತಿಯ ಕಿಲ್ಲಾರಹಟ್ಟಿ, ಜುಮಲಾಪುರ, ದೋಟಿಹಾಳ ಗ್ರಾಮಗಳ ಅಂಗನವಾಡಿ ಕೇಂದ್ರಗಳಲ್ಲಿ ಕಂಡು ಬರುವ ಸಾಮಾನ್ಯ ಚಿತ್ರಣವಿದು. ರಾಮಜೀ ನಾಯ್ಕ ತಾಂಡದಲ್ಲಿ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣವಾಗಿಲ್ಲ. 20ಕ್ಕೂ ಹೆಚ್ಚು ಮಕ್ಕಳಿಗೆ ಪ್ರತಿದಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಮಾಡಲಾಗುತ್ತಿದೆ. ಇದರಿಂದಾಗಿ ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರು, ಬಾಣಂತಿಯರು, ಶಿಶುಗಳ ಪೌಷ್ಟಿಕ ಆಹಾರ ಪದಾರ್ಥಗಳು ಸಿಗುತ್ತಿಲ್ಲ. ರಾಮಜೀ ನಾಯ್ಕ ತಾಂಡ ಮತ್ತು ಸಂಗಟೇರ ಹಟ್ಟಿಯ ಮಕ್ಕಳು ಅಂಗನವಾಡಿ ಕೇಂದ್ರದ ಶಿಕ್ಷಣದಿಂದ ವಂಚಿತರಾಗಿದ್ದು, ಕೆಂದ್ರವಿಲ್ಲದೇ ಶಾಲೆ ಕೇವಲ ಊಟಕ್ಕೆ ಸಿಮೀತವಾಗಿದೆ. ಆದರೇ ಇಲ್ಲಿನ ಫಲಾನುಭವಿಗಳಿಗೆ ಹಾಲು, ಮೊಟ್ಟೆ ತಲುಪುತ್ತಿಲ್ಲ ಎಂದು ಪಾಲಕರು ಆರೋಪಿಸುತ್ತಾರೆ.

ವಲಯಗಳ ವಿವರ: ಒಟ್ಟು ಮೂರು ಅಂಗನವಾಡಿ ವಲಯಗಳಲ್ಲಿ ಮುದೇನೂರು ವಲಯದ 33 ಅಂಗನವಾಡಿ ಕೇಂದ್ರಗಳ ಪೈಕಿ 4 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ತಾವರಗೇರಾ ಎ ವೃತ್ತದಲ್ಲಿ 21 ಕೇಂದ್ರಗಳು ಇವೆ. ಇವುಗಳಲ್ಲಿ 9 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿವೆ. ತಾವರಗೇರಾ ಬಿ ವೃತ್ತದಲ್ಲಿ 23 ಅಂಗನವಾಡಿ ಕೇಂದ್ರಗಳಿದ್ದು, ಇದರಲ್ಲಿ 4 ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ.

ಹೀಗೆ 17 ಅಂಗನವಾಡಿ ಕೇಂದ್ರಗಳನ್ನು ಚಿಕ್ಕ ಮತ್ತು ಶಿಥಿಲಗೊಂಡ ಖಾಸಗಿ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ. ಇದ್ಲಾಪುರ, ಜುಮಲಾಪುರ, ಮಾದಾಪುರ ಸೇರಿದಂತೆ 10ಕ್ಕೂ ಹೆಚ್ಚು ಕೇಂದ್ರಗಳು ಶಿಥಿಲಗೊಂಡ ಕಟ್ಟಡದಲ್ಲಿ ನಡೆಯುತ್ತಿವೆ. ಕೆಲ ಕೇಂದ್ರಗಳಿಗೆ ಮಕ್ಕಳು ತೆರಳಲು ರಸ್ತೆಗಳೇ ಇಲ್ಲ. ಮಕ್ಕಳನ್ನು ತೊಟ್ಟಿಲು ಸೇವೆಯಲ್ಲಿ ಕಳುಹಿಸಬೇಕಿದೆ. ಜುಮಲಾಪುರ ಗ್ರಾಮದ ಗ್ರಾಪಂ ಹತ್ತಿರದಲ್ಲಿ ನಿರ್ಮಿಸಿರುವ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ತಾಪಂ ಅನುದಾನಡಿ ಎರಡು ವರ್ಷದಲ್ಲಿ ಅಂದಾಜು 1.20 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಆದರೆ ಸರ್ಕಾರದ ಹಣ ಖರ್ಚಾಗಿದೆ ಕೊಠಡಿ ಮಾತ್ರ ಉಪಯೋಗವಿಲ್ಲದ್ದಂತಾಗಿದೆ. ಇಂತಹ ದಯನೀಯ ಪರಿಸ್ಥಿತಿಯ ಅಂಗನವಾಡಿ ಕೇಂದ್ರಗಳ ಗೋಳು ಕೇಳುವರಿಲ್ಲ.

ಸೌಲಭ್ಯ ಮರೀಚಿಕೆ: ಗಡಿಭಾಗದ 26ಕ್ಕೂ ಹೆಚ್ಚು ಕೇಂದ್ರಗಳಿಗೆ ಸುತ್ತಲು ಕಾಂಪೌಂಡ್‌, ಮೆಟ್ಟಿಲುಗಳು, ಕಿಟಕಿ, ಆಟದ ಮೈದಾನ, ಕುಡಿವ ನೀರು, ವಿದ್ಯುತ್‌ ಸಂಪರ್ಕ, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳಿಲ್ಲ. ಇಲ್ಲಿನ ಮಕ್ಕಳಿಗೆ ಗುಣಮಟ್ಟದ ಆಹಾರ, ಮೊಟ್ಟೆ ಸಹ ನೀಡುತ್ತಿಲ್ಲ. ಬಳೂಟಗಿ ಗ್ರಾಮದ ಎಸ್‌ಸಿ ಕಾಲೋನಿಯ ಕೇಂದ್ರ ತಿಪ್ಪೆ ಗುಂಡಿ ಮತ್ತು ಮಹಿಳಾ ಸಾರ್ವಜನಿಕ ಶೌಚಾಲಯ ಮಧ್ಯದಲ್ಲಿದೆ. ಹಲವು ಕೇಂದ್ರಗಳು ಮುಖ್ಯರಸ್ತೆ, ಇಕ್ಕಟ್ಟಾದ ಓಣಿಗಳಲ್ಲಿ, ಅಸುರಕ್ಷತಾ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿವೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಪ್ರತಿ ವರ್ಷ ಲಕ್ಷಾಂತರ ರೂ. ಖರ್ಚು ಮಾಡಿ ಅಂಗನವಾಡಿಗಳ ದುರಸ್ತಿ, ಸುಣ್ಣ ಬಣ್ಣ ಕಾರ್ಯಕ್ಕೆ ಅಸ್ತು ಎಂದರೆ. ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಕಳಪೆ ಕಾಮಗಾರಿಗಳು ನಡೆಯುತ್ತಿವೆ. ಗುತ್ತಿಗೆದಾರರಿಗೆ ಅಂಗನವಾಡಿ ಅಭಿವೃದ್ಧಿ ಅನುದಾನ ಚಿನ್ನದ ಮೊಟ್ಟೆಯಿದ ಕೋಳಿಯಂತಾಗಿದೆ. ಅಭಿವೃದ್ಧಿ ಉದ್ದೇಶ ಮಾತ್ರ ಶೂನ್ಯ ಸಾಧನೆಯಾಗುತ್ತಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇತ್ತ ಗಮನಹರಿಸಬೇಕು ಎಂದು ಸಾರ್ವಜನಿಕರಿಂದ ಒತ್ತಾಯ ಕೇಳಿಬಂದಿದೆ.

ಜುಮಲಾಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಸರ್ಕಾರಿ ಭೂಮಿ ಕೊರತೆ ಇದೆ. ಕಟ್ಟಡಗಳ ಕೊರತೆ ಇರುವ ಗ್ರಾಮಗಳ ಪಟ್ಟಿ ತಯಾರಿಸಲಾಗುವುದು. ಮೂಲ ಸೌಲಭ್ಯಗಳ ಕೊರತೆ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
ಶ್ರೀದೇವಿ,
ಇಲಾಖೆಯ ವಲಯ ಮೇಲ್ವೀಚಾರಕಿ, ಮುದೇನೂರು

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.