ಹೊನ್ನ ಹುಡಿ ಫೋಟೋಗೆ ಪ್ರಥಮ ಬಹುಮಾನ
Team Udayavani, Feb 10, 2019, 11:54 AM IST
ಕೊಪ್ಪಳ: ಖ್ಯಾತ ಕಲಾ ವಿಮರ್ಶಕ ಎ. ಈಶ್ವರಯ್ಯ ಸ್ಮರಣಾರ್ಥ ‘ನೆಲದ ನೆಲೆ-ಗ್ರಾಮೀಣ ಸೊಬಗಿನ ನೈಜ ಚಿತ್ರಣ’ ವಿಷಯದಡಿ ನಡೆದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಕೊಪ್ಪಳದ ಛಾಯಾಗ್ರಾಹಕ ಭರತ್ ಕಂದಕೂರಗೆ ಪ್ರಥಮ ಬಹುಮಾನ ಲಭಿಸಿದೆ.
ಉಡುಪಿಯ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಪತ್ರಿಕೋದ್ಯಮ ವಿಭಾಗ, ಬಿಳಿಕಲ್ಲು ಪ್ರಕಾಶನ ಹಾಗೂ ಫೋಕಸ್ ಸ್ಟುಡಿಯೋದ ಸಹಯೋಗದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 115ಕ್ಕೂ ಹೆಚ್ಚು ಛಾಯಾಗ್ರಾಹಕರ ಸುಮಾರು 400ಕ್ಕೂ ಹೆಚ್ಚು ಛಾಯಾಚಿತ್ರಗಳಿದ್ದವು. ಕೊಪ್ಪಳದ ಭರತ್ ಕಂದಕೂರ ಅವರ ‘ಹೊನ್ನ ಹುಡಿ’ ಶೀರ್ಷಿಕೆಯ ಛಾಯಾಚಿತ್ರ ಅಂತಿಮ ಸುತ್ತಿನಲ್ಲಿ ಬಹುಮಾನ ಪಡೆದುಕೊಂಡಿದೆ. ಶುಕ್ರವಾರ ನಡೆದ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ 5 ಸಾವಿರ ರೂ. ನಗದು, ಪಾರಿತೋಷಕ ನೀಡಿ ಗೌರವಿಸಲಾಯಿತು.
ಖ್ಯಾತ ಅಂತಾರಾಷ್ಟ್ರೀಯ ಛಾಯಾಗ್ರಾಹಕ ಗುರುದಾಸ್ ಕಾಮತ್ ಹಾಗೂ ಫೋಕಸ್ ರಘು ಸ್ಪರ್ಧೆಯ ತೀರ್ಪುಗಾರರಾಗಿದ್ದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬಿ.ಎಸ್. ಲಿಂಗದೇವರು, ಸಿನಿಮಾ ವಿಮರ್ಶಕ, ಪತ್ರಕರ್ತ ಗಿರೀಶ್ರಾವ್ (ಜೋಗಿ), ಕಾಲೇಜಿನ ಆಡಳಿತಾಧಿಕಾರಿ ಡಾ| ಎಚ್. ಶಾಂತಾರಾಮ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಮಂಜುನಾಥ ಕಾಮತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ