ವಿದ್ಯಾರ್ಥಿ ಜೀವನ ಅಮೂಲ್ಯ: ಗವಿಶ್ರೀ


Team Udayavani, Feb 16, 2019, 10:45 AM IST

16-february-16.jpg

ಯಲಬುರ್ಗಾ: ವಿದ್ಯಾರ್ಥಿಗಳು ಸಾಧನೆಯ ಗುರಿಯೊಂದಿಗೆ ಸಂಕಲ್ಪ ಮಾಡಬೇಕು. ಮನಸ್ಸಿದ್ದರೆ ನಾವು ಅಂದುಕೊಂಡಿದ್ದನ್ನು ಸಾಧಿಸಬಹುದು. ವಿದ್ಯಾರ್ಥಿ ಜೀವನ ಎಂಬುದು ಬದುಕಲ್ಲಿ ಬರುವ ಅತ್ಯಂತ ಅಮೂಲ್ಯ ಮತ್ತು ಸುಂದರವಾದ ಸಮಯ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಕೊಪ್ಪಳ ಗವಿಮಠದ ಗವಿಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ಅವರು ಶುಕ್ರವಾರ ನಡೆದ ತಾಲೂಕಿನ ಹೊಸಳ್ಳಿ ಗ್ರಾಮದ ಕಿತ್ತೂರು ಚನ್ನಮ್ಮ ವಸತಿ ಶಾಲೆಯ ದಶಮಾನೋತ್ಸವ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ವಿದ್ಯಾರ್ಥಿ ಮತ್ತು ಯುವ ಸಮೂಹ ಛಲ ಮತ್ತು ಗುರಿ  ಹೊಂದಿದ್ದಲ್ಲಿ ಮಾತ್ರ ದೇಶಕಟ್ಟಲು ಸಾಧ್ಯ. ವಿದ್ಯಾರ್ಥಿಗಳು, ಯುವ ಜನಾಂಗ ಸಮಾಜ ಮತ್ತು ದೇಶ ಕಟ್ಟುವಂತಹ ಶಕ್ತಿ ಹೊಂದಿದೆ. ಆದರೆ ವಿದ್ಯಾರ್ಥಿ ಮತ್ತು ಯುವಕರು ಸಾಧಿ ಸುವ ಛಲ ಹಾಗೂ ಗುರಿಯನ್ನು ಹೊಂದಿದ್ದರೆ ಮಾತ್ರ ಅಂದುಕೊಂಡಿರುವುದನ್ನು ಸಾಧಿಸಲು ಸಾಧ್ಯ. ಇಂದಿನ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನವನ್ನು ಕೇವಲ ಮೋಜು ಮಸ್ತಿಗಾಗಿ ಮೀಸಲಿಡುತ್ತಾರೆ. ಇದರಿಂದ ಸಮಾಜ ಮತ್ತು ದೇಶಕ್ಕೆ ಯಾವುದೇ ಕೊಡುಗೆಯಾಗುವುದಿಲ್ಲ. ಸಮಯವನ್ನು ಮೋಜು, ಮಸ್ತಿಗೆ ವ್ಯಯಿಸದೆ ಸಮಾಜದ ಒಳಿತಿಗಾಗಿ ಮೀಸಲಿಡಬೇಕು ಎಂದು ಹೇಳಿದರು.

ಶಾಸಕ ಹಾಲಪ್ಪ ಆಚಾರ್‌ ಮಾತನಾಡಿ, ಹೈದ್ರಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ತಾಲೂಕಿನ ವಿವಿಧ ಶಾಲೆಗಳಿಗೆ 154ಕ್ಕಿಂತ ಹೆಚ್ಚು ಕೊಠಡಿಗಳನ್ನು ಮಂಜೂರುಗೊಳಿಸಲಾಗಿದೆ. ವಿಶೇಷವಾಗಿ ತಾಲೂಕಿನ ಶೈಕ್ಷಣಿಕ ಅಭಿವೃದ್ಧಿಗೆ ನನ್ನ ಆಡಳಿತದಲ್ಲಿ ಹೆಚ್ಚು ಒತ್ತು ನೀಡುತ್ತಿದ್ದೇನೆ. ಭದ್ರ ಬುನಾದಿಯಿದ್ದರೆ, ಕಟ್ಟುವ ಕಟ್ಟಡ ಆಕಾಶದ ಎತ್ತರಕ್ಕೇರಲೂ ಸಾಧ್ಯ. ಅದೇ ರೀತಿ ಶಿಕ್ಷಣ ಕ್ಷೇತ್ರದಲ್ಲೂ ಒಂದು ಮಗುವಿಗೆ ಅತ್ಯುತ್ತಮ ಗುಣಮಟ್ಟದ ಪ್ರಾಥಮಿಕ, ಪ್ರೌಢ ಹಾಗೂ ಪಿಯುಸಿ, ಪದವಿ, ಉನ್ನತ ಶಿಕ್ಷಣ ದೊರೆತರೆ ಆ ವಿದ್ಯಾರ್ಥಿ ತಾನಾಗಿಯೇ ಯಶಸ್ಸಿನತ್ತ ಸಾಗುತ್ತಾನೆ. ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ದೃಷ್ಟಿಯಿಂದ ಸದರಿ ಶಾಲೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ. ಪ್ರಾಥಮಿಕ ಶಿಕ್ಷಣದಿಂದಲೇ ಪ್ರತಿದಿನವೂ ಯೋಗ ತರಗತಿ, ಕರಾಟೆ ಹಲವು ಕ್ರೀಡೆಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆಯಾಗಿ ಹೊಸಳ್ಳಿ ಶಾಲೆ ಉತ್ತಮ ಪರಿಸರವನ್ನು ಹೊಂದಿದ್ದು, ಜಿಲ್ಲೆಯಲ್ಲಿ ಮಾದರಿ ಶಾಲೆಯಾಗಿ ಮುನ್ನಡೆದಿದೆ. ಇಲ್ಲಿಯ ಸಿಬ್ಬಂದಿ ಕಾರ್ಯ ಶ್ಲಾಘನೀಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಸಮಾಜಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಬಿ. ಕಲ್ಲೇಶ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಏನು ಬೇಕಾದರೂ ಸಾಧಿಸುವಂತಹ ವಯಸ್ಸಿರುತ್ತದೆ. ಇಂತಹ ಅಮೂಲ್ಯ ವಯಸ್ಸು ಮತ್ತು ಸಮಯವನ್ನು ಸಾಧನೆಗಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಮೊದಲು ತಮ್ಮ ಜವಾಬ್ದಾರಿಯ ಕಡೆಗೆ ಚಿಂತನೆ ಹರಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನಕ್ಕೆ ಮಹತ್ವದ ಗೌರವ ಸ್ಥಾನವನ್ನು ಕೊಟ್ಟು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳುವಷ್ಟು ಸಾಮರ್ಥ್ಯವನ್ನು ಹೊಂದಿದರೆ ಮುಂದೆ ಸಮಾಜವವನ್ನು ಮುನ್ನಡೆಸಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ಶಾಂತಿ, ನೆಮ್ಮದಿಯಿಂದ ಜನರು ಜೀವನ ನಡೆಸಬೇಕಾದರೆ ವಿದ್ಯಾರ್ಥಿಗಳು ಮತ್ತು ಯುವಕರು ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು
ಎಂದರು.

ತಾಪಂ ಮಾಜಿ ಅಧ್ಯಕ್ಷ ವೀರನಗೌಡ ಪೊಲೀಸ್‌ ಪಾಟೀಲ, ಅಂದಾನಗೌಡ ಉಳ್ಳಾಗಡ್ಡಿ, ಬಸವಲಿಂಗಪ್ಪ ಭೂತೆ, ತಾಪಂ ಸದಸ್ಯ ಶರಣಪ್ಪ ಈಳಿಗೇರ, ಈರಪ್ಪ ಕುಡಗುಂಟಿ, ದೊಡ್ಡನಗೌಡ ಓಜನಹಳ್ಳಿ, ಶರಣಪ್ಪ ಕೊಪ್ಪದ, ಶರಣಪ್ಪ ಬಣ್ಣದಬಾವಿ, ಸಿಪಿಐ ರಮೇಶ ರೊಟ್ಟಿ, ಪ್ರಾಚಾರ್ಯ ವಿರೂಪಾಕ್ಷಪ್ಪ ಹನುಮಶೆಟ್ಟಿ, ಮಹೇಶ ಪಟ್ಟೇದ ಹಾಗೂ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳಿದ್ದರು. ಇದೇ ಸಂದರ್ಭದಲ್ಲಿ ಅತ್ಯಾಧುನಿಕ ಕಿಯೋನಿಕ್ಸ್‌ ಕಂಪ್ಯೂಟರ್‌ ಕೊಠಡಿಗೆ ಚಾಲನೆ ನೀಡಲಾಯಿತು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.