ಹೋಬಳಿಗೊಂದು ಗೋಶಾಲೆ ತೆರೆಯುವ ಬೇಡಿಕೆ


Team Udayavani, Mar 15, 2019, 11:54 AM IST

15.jpg

ಕುಷ್ಟಗಿ: ತಾಲೂಕಿನಲ್ಲಿ ಜಾನುವಾರುಗಳ ಮೇವಿನ ಕೊರತೆ ತಪ್ಪಿಸಲು ತಾಲೂಕಿನ ಪ್ರತಿ ಹೋಬಳಿಗೊಂದು ಗೋಶಾಲೆ ಬೇಡಿಕೆ ವ್ಯಕ್ತವಾಗುತ್ತಿದೆ.

ತಾಲೂಕನ್ನು ಸರ್ಕಾರ ಬರ ಪೀಡಿತ ಪ್ರದೇಶ ಎಂದು ಘೋಷಿಸಿದೆ. ಅಂತೆಯೇ ಕಳೆದ ಫೆ.4ರಂದು ತಾಲೂಕಿನ ಕಲಕೇರಿ ಸಾಮಾಜಿಕ ಅರಣ್ಯ ಇಲಾಖೆಯ ಸಸ್ಯ ಕ್ಷೇತ್ರದಲ್ಲಿ ಗೋಶಾಲೆ ಆರಂಭಿಸಿ ಒಂದೂವರೆ ತಿಂಗಳಾಗುತ್ತಾ ಬಂದಿದೆ. ನಿತ್ಯ 170ರಿಂದ 190 ಜಾನುವಾರುಗಳಿಗೆ ಇದು ಅನುಕೂಲವಾಗಿದೆ. ಕಲಕೇರಿ ಗೋ ಶಾಲೆ ಸುತ್ತಮುತ್ತಲಿನ ಕಡೇಕೊಪ್ಪ, ತೋಪಲಕಟ್ಟಿ, ಕಲಕೇರಿ ತಾಂಡಾ ಗ್ರಾಮಗಳಿಗೆ ಸೀಮಿತವಾಗುತ್ತಿದೆ. ದಿನವೂ ಜಾನುವಾರುಗಳನ್ನು ಗೋ ಶಾಲೆಗೆ ತಂದು ಬಿಡುವುದು, ಗೋ ಶಾಲೆಯವರು ನೀಡಿದ ಮೇವನ್ನು ಜಾನುವಾರುಗಳಿಗೆ ನೀಡುವುದು ದಿನಚರಿಯಾಗಿದೆ. ಸದ್ಯ ಸದರಿ ಗೋಶಾಲೆಯಲ್ಲಿ ಕುಡಿಯುವ ನೀರು, ಮೇವಿಗೆ ತೊಂದರೆ ಇಲ್ಲ. ಈ ಗೋಶಾಲೆ ಶೆಡ್‌ನ‌ಲ್ಲಿ 70ರಿಂದ 80 ಜಾನವಾರುಗಳಿಗೆ ನೆರಳಿನ ವ್ಯವಸ್ಥೆ ಇದೆ. ಇನ್ನುಳಿದ ಜಾನುವಾರುಗಳನ್ನು ಬಿಸಿಲಿನಲ್ಲೇ ಕಟ್ಟಬೇಕು. ಈ ಕುರಿತು ಸಂಬಂಧಿಸಿದ ಅಧಿ ಕಾರಿಗಳನ್ನು ವಿಚಾರಿಸಿದರೆ ನಿರ್ಮಿತಿ ಕೇಂದ್ರದವರಿಗೆ ಗೋಶಾಲೆ ಶೆಡ್‌ ನಿರ್ಮಿಸಿರುವುದಕ್ಕೆ ಜಿಲ್ಲಾಡಳಿತದಿಂದ ಮೊದಲ ಹಂತದ ಅನುದಾನ ಬಿಡುಗಡೆಯಾಗಿಲ್ಲ. ಹೀಗಾಗಿ ಗೋಶಾಲೆ ಶೆಡ್‌ ವಿಸ್ತರಿಸಲಾಗಿಲ್ಲ ಎನ್ನುತ್ತಾರೆ ಹೆಸರು ಹೇಳಲಿಚ್ಚಿಸದ ಅಧಿಕಾರಿಗಳು. ಜಾನುವಾರುಗಳು ಬಿಸಿಲಿಗೆ ಮೈಯೊಡ್ಡಿ ನಿಲ್ಲುತ್ತಿದ್ದರು ಅಧಿಕಾರಿಗಳು, ಲೋಕಸಭೆ ಚುನಾವಣೆ ಜರೂರು ಕೆಲಸದ ಕಾರಣದಿಂದ ಗೋಶಾಲೆಯತ್ತ ಗಮನ ಹರಿಸುತ್ತಿಲ್ಲ.

ಈ ಕುರಿತು, ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಚನ್ನಬಸಪ್ಪ ಹಳ್ಳದ್‌ ಪ್ರತಿಕ್ರಿಯಿಸಿ, ತಾಲೂಕಿನಲ್ಲಿ 51,778 ದನಗಳು, 9,515 ಎಮ್ಮೆ ಸೇರಿದಂತೆ 61,293 ಜಾನುವಾರುಗಳಿವೆ. ಮಾರ್ಚ್‌ ತಿಂಗಳ ಕೊನೆಯವರೆಗೂ ಹೇಗೋ ನಡೆಯುತ್ತದೆ. ಏಪ್ರಿಲ್‌ ತಿಂಗಳಲ್ಲಿ ಪ್ರತಿ ಹೋಬಳಿಗೆ ಒಂದರಂತೆ ಗೋಶಾಲೆ ಆರಂಭಿಸುವುದು ಅಗತ್ಯವಿದೆ ಎಂದು ತಿಳಿಸಿದರು. ಈ ಬಾರಿ ಮುಂಗಾರು, ಹಿಂಗಾರು ಮಳೆ ಅಭಾವದ ಹಿನ್ನೆಲೆಯಲ್ಲಿ ಮೇವಿನ ಬರ ಎದುರಾಗಿದೆ. ರೈತರಿಗೆ ಜಾನುವಾರುಗಳಿಗೆ ಬೇಕಾಗುವಷ್ಟು ಮೇವು ಕೊಳ್ಳಲು ಸಾಧ್ಯವಾಗಿಲ್ಲ. ರೈತರು ಸಂಗ್ರಹಿಟ್ಟುಕೊಂಡ ಮೇವು, ಬಿಳಿಜೋಳ, ಸಜ್ಜೆ ದಂಟಿನ ಸೊಪ್ಪು, ಶೇಂಗಾ, ಹೆಸರು ಹೊಟ್ಟು ಸಾಲದಂತಾಗಿದ್ದು, ಮುಂದೆ ಮೇವು, ಹೊಟ್ಟು ಕೊಳ್ಳಲಾಗದ ಅಸಹಾಯಕ ಪರಿಸ್ಥಿತಿಯಲ್ಲಿ ಜಾನುವಾರು ಸಂತೆಯಲ್ಲಿ ಮಾರುವುದು ಅನಿವಾರ್ಯವಾಗಿದೆ. ಗೋಶಾಲೆ ಹತ್ತಿರದಲ್ಲಿದ್ದರೆ ಗೋಶಾಲೆಗೆ ಕಳುಹಿಸಿ ಬದುಕಿಸಿಕೊಳ್ಳಬಹುದಾಗಿದೆ ಎನ್ನುತ್ತಾರೆ ರೈತರು.

ಬರಾಲದ ಪರಿಸ್ಥಿತಿಯಲ್ಲಿ ಜಾನುವಾರುಗಳನ್ನು ಸಾಕಿಕೊಂಡು ಮೇವಿಗಾಗಿ ಪರದಾಡುವ ರೈತರನ್ನು ಸ್ಥಳೀಯ ದ್ವಾರಕಾಮಯಿ ಸೇವಾ ಟ್ರಸ್ಟ್‌ನವರು ಗುರುತಿಸಿ ಮೇವು ಪೂರೈಸುವ ಕಾರ್ಯ ಮಾಡುತ್ತಿದ್ದಾರೆ. ಮೇವಿನ ಸಮಸ್ಯೆ ಹಿನ್ನೆಲೆಯಲ್ಲಿ ಎಲ್ಲವೂ ಸಕಾರವೇ ಮಾಡಬೇಕೆಂದೇನಿಲ್ಲ. ತಾಲೂಕಿನಲ್ಲಿ ಸ್ಥಿತಿಯುಳ್ಳುವರು ಮುಂದೆ ಬಂದು ಮೇವು ಖರೀದಿಸಿ, ಜಾನುವಾರು ಸಾಕು ರೈತರಿಗೆ ಉಚಿತವಾಗಿ ನೀಡಬೇಕಿದೆ ಎಂದರು.
. ಕೃಷ್ಣಾ ಕಂದಕೂರು, 
ದ್ವಾರಕಾಮಯಿ ಸೇವಾ ಟ್ರಸ್ಟ್‌ನ ಸದಸ್ಯ

ಸರ್ಕಾರ ಇ-ಟೆಂಡರ್‌ ಮೂಲಕ ಭತ್ತದ ಮೇವು 7,260 ರೂ., ಹಾಗೂ ಜೋಳದ ಒಣ ಮೇವು 8,093 ಪ್ರತಿ ಟನ್‌ ಗೆ ತಲಾ 250 ಟನ್‌ನಂತೆ ಕಲಕೇರಿ ಸೇರಿದಂತೆ ಜಿಲ್ಲೆಯ ಐದು ಗೋಶಾಲೆಗಳಿಗೆ ಪೂರೈಸುವ ವ್ಯವಸ್ಥೆಯಾಗಿದೆ. ಈ ಗೋಶಾಲೆಯಲ್ಲಿ ಮೇವು, ಕುಡಿಯುವ ನೀರು ತೊಂದರೆ. ನಿರ್ಮಿತಿ ಕೇಂದ್ರದವರು ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ಶೆಡ್‌ ವಿಸ್ತರಿಸಬೇಕಿದೆ.
ಚನ್ನಬಸಪ್ಪ ಹಳ್ಳದ್‌, 
ಸಹಾಯಕ ನಿರ್ದೇಶಕ
ಪಶು ವೈದ್ಯಕೀಯ ಸೇವಾ ಇಲಾಖೆ

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.