ಕಳಪೆ ಮೇವು ಪೂರೈಕೆಗೆ ಆಕ್ರೋಶ


Team Udayavani, Mar 19, 2019, 10:01 AM IST

koppa.jpg

ಕುಷ್ಟಗಿ: ತಾಲೂಕಿನ ಕಲಕೇರಿಯಲ್ಲಿರುವ ಏಕೈಕ ಗೋಶಾಲೆಗೆ ಕಳಪೆ ಗುಣಮಟ್ಟದ ಮೇವು ಪೂರೈಸುತ್ತಿರುವುದಕ್ಕೆ ರೈತರಿಂದ ಆಕ್ರೋಶ ವ್ಯಕ್ತವಾಗಿದೆ.

ಕಳೆದ ಜ.4ರಂದು ಕಲಕೇರಿಯ ಸಾಮಾಜಿಕ ಅರಣ್ಯ ಇಲಾಖೆಯ ಸಸ್ಯ ಕ್ಷೇತ್ರದಲ್ಲಿ ಗೋಶಾಲೆ ಆರಂಭಿಸಲಾಗಿದ್ದು, ಆರಂಭದಲ್ಲಿ ಪೂರೈಸಿದ ಭತ್ತದ ಹುಲ್ಲು, ಜೋಳದ ದಂಟು ಮೇವು ಬೆಳ್ಳಗೆ ಇತ್ತು.ಹೀಗಾಗಿ ಜಾನುವಾರುಗಳು ಈ ಮೇವನ್ನು ತಿನ್ನುತ್ತಿದ್ದವು. ಆದರೆ ಮೇವು ಪೂರೈಕೆ ಏಜೆನ್ಸಿಯವರು ಕಳುಹಿಸಿದ ಭತ್ತದ ಹುಲ್ಲಿನ ಬಣ್ಣ ಕಪ್ಪು ಬಣ್ಣಕ್ಕೆ ತಿರುಗಿದ್ದರಿಂದ ಜಾನುವಾರುಗಳು ಮೂಸಿ ಸಹ ನೋಡುತ್ತಿಲ್ಲ. ಸೋಮವಾರ ಸದರಿ ಗೋಶಾಲೆಯಲ್ಲಿ ಮೇವು ಮುಗಿದಿದ್ದು, ಕೂಡಲೇ ಮೇವು ತರಿಸುವ ವ್ಯವಸ್ಥೆ ಮಾಡದ ಬಗ್ಗೆ ಜಾನುವಾರು ಮಾಲೀಕರು ಆಕ್ರೋಶ ವ್ಯಕ್ತಪಡಿಸಿದರು.

ಕಪ್ಪು ಬಣ್ಣಕ್ಕೆ ತಿರುಗಿದ್ದ ಭತ್ತದ ಹುಲ್ಲು ತಿಂದ ನಮ್ಮ ಎತ್ತಿಗೆ ರಕ್ತ ಕೀವಾಗಿದೆ. ಹೀಗಾಗಿ ಕೂಡಲೇ ಅಗತ್ಯ ಚಿಕಿತ್ಸೆ ಕೊಡಿಸಲಾಯಿತು. ಮೇವು ಪೂರೈಕೆದಾರರು, ಮೇವಿನ ತೂಕ ಹೆಚ್ಚಳ ಮಾಡಲು ನೀರು ಚಿಮುಕಿಸುತ್ತಿದ್ದು, ಸದ್ಯ ಕಟಾವಾದ ಮೇವಿನೊಂದಿಗೆ ಹಳೆಯ ಮೇವನ್ನು ಸೇರಿಸಲಾಗುತ್ತಿದ್ದು, ಜಾನುವಾರುಗಳು ಮೇವನ್ನು ತಿನ್ನದೇ ನಿಂತಿವೆ. ಮೇವು ಪೂರೈಕೆದಾರರು ಸದ್ಯ ಕಟಾವು ಮಾಡಿದ ತಾಜಾ ಮೇವನ್ನೇ ಪೂರೈಸುವ ವ್ಯವಸ್ಥೆ ಮಾಡಬೇಕೆಂದು ನಡುವಲಕೊಪ್ಪ ಗ್ರಾಮದ ತುಳಜಾ ನಾಯಕ, ಕಾಳಮ್ಮ, ದುರಗಪ್ಪ ಚೌವ್ಹಾಣ ಒತ್ತಾಯಿಸಿದ್ದಾರೆ. 

 ಜಾನುವಾರುಗಳು ಬಿಸಿಲಿಗೆ ನಿಲ್ಲುವುದರಿಂದ ಕಾಯಿಲೆ ಬರುವ ಅಪಾಯವಿದೆ. ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು, ಜಾನುವಾರುಗಳಿಗೆ ತೀವ್ರ ತೊಂದರೆಯಾಗಿದೆ. ಇಲ್ಲಿನ ಜಾನುವಾರುಗಳಿಗೆ ಇನ್ನೊಂದು ಶೆಡ್‌ ಬೇಕೆಂದು ಪ್ರಸ್ತಾಪಿಸಿದ್ದರೂ ಅಗತ್ಯ ಕ್ರಮ ಕೈಗೊಂಡಿಲ್ಲ. ಇನ್ನೊಂದು ಶೆಡ್‌ ನಿರ್ಮಿಸಲು ನಿರ್ಮಿತಿ ಕೇಂದ್ರದವರಿಗೆ ಸೂಚಿಸಲಾಗಿದ್ದು, ಆದರೆ ನಿರ್ಮಿತಿಯವರು ಗೋಶಾಲೆಯತ್ತ ಮುಖ ಮಾಡಿಲ್ಲ. ಈ ಗೋಶಾಲೆಯಲ್ಲಿ ಕಾರ್ಯ ನಿರ್ವಹಿಸುವ ನಾಲ್ಕು ಜನರಿಗೆ ಎರಡು ತಿಂಗಳಾಗುತ್ತ ಬಂದರೂ ವೇತನ ಇಲ್ಲ. ಹೀಗಾದರೆ ಕಾರ್ಯ ನಿರ್ವಹಿಸಲು ಹೇಗೆ ಸಾಧ್ಯ ಎನ್ನುವುದು ಕೆಲಸಗಾರರ ಅಳಲು.

ಕಳೆದ ವಾರ ಗೋಶಾಲೆಗೆ ಪೂರೈಸಿದ ಭತ್ತದ ಹುಲ್ಲು ಕಳಪೆಯಾಗಿದ್ದು ಹಳಸಿದ ಅನ್ನದಂತಾಗಿತ್ತು. ಜಾನುವಾರುಗಳು ಬೇಕು ಬೇಡ ಎನ್ನುವಂತೆ ತಿನ್ನುತ್ತಿದ್ದು, ಗೋಶಾಲೆಗೆ ಸೇರಿಸಿದಾಗಿನಿಂದ ಜಾನುವಾರುಗಳು ಸೊರಗುತ್ತಿವೆ.  ಕಾಳವ್ವ ಚವ್ಹಾಣ ರೈತ ಮಹಿಳೆ ಗೋಶಾಲೆಯಲ್ಲಿ ಪ್ರತಿ ದನಕ್ಕೆ 8 ಕೆ.ಕಿ. ಕರುವಿಗೆ 4 ಕೆ.ಜಿಯಂತೆ ಪೂರೈಸಲಾಗುತ್ತಿದೆ. ತಾಲೂಕಿನಲ್ಲಿ ಹೋಬಳಿಗೊಂದು ಗೋಶಾಲೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಗೋಶಾಲೆಗಳಿಗೆ ಕಾಕಂಬಿಯ ಬಿಲ್ಲೆ ಪೂರೈಸುವ ವ್ಯವಸ್ಥೆ ಇದ್ದು, ಜಾನುವಾರು ಕಾಕಂಬಿ ಬಿಲ್ಲೆ ನೆಕ್ಕುತ್ತಾ ಮೇವು ತಿನ್ನುತ್ತವೆ.
 ಚನ್ನಬಸಪ್ಪ ಹಳ್ಳದ್‌, ಸಹಾಯಕ ನಿರ್ದೇಶಕ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕುಷ್ಟಗಿ.

ಟಾಪ್ ನ್ಯೂಸ್

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.