ಹಂಚಿ ಉಣ್ಣುವುದು ಶರಣ ಸಂಸ್ಕೃತಿ


Team Udayavani, Mar 23, 2019, 10:45 AM IST

23-march-16.jpg

ಕುಷ್ಟಗಿ: ಕರೆದುಕೊಂಡು, ಹಂಚಿಕೊಂಡು ಉಣ್ಣುವುದರಿಂದ ಆರೋಗ್ಯ ಪ್ರಾಪ್ತಿಯಾಗಲಿದ್ದು, ಕದ ಹಾಕಿಕೊಂಡು ಉಣ್ಣುವುದರಿಂದ ಆರೋಗ್ಯ ದೂರವಾಗಲಿದೆ. ತಳವಗೇರಾದಲ್ಲಿ ಆಚರಿಸಿಕೊಂಡು ಬಂದಿರುವ ಈ ಬೆಳದಿಂಗಳ ಬುತ್ತಿ ಜಾತ್ರೆಯ ಸಂಪ್ರದಾಯ ಈಗಾಗಲೇ ಕರೆದುಕೊಂಡು ಉಣ್ಣುವ ಸಂಸ್ಕೃತಿ ಶರಣ ಸಂಸ್ಕೃತಿ ಎಂಬುದು ನಿರೂಪಿಸಿದೆ ಎಂದು ಬಾಳೆಹೊಸೂರು ದಿಂಗಾಲೇಶ್ವರಮಠದ ಶ್ರೀ ದಿಂಗಾಲೇಶ್ವರ ಶ್ರೀಗಳು ಹೇಳಿದರು.

ಇಲ್ಲಿನ ಆದರ್ಶ ಮಹಾವಿದ್ಯಾಲಯ ಮೈದಾನದಲ್ಲಿ ನಡೆದ ಭಾವೈಕ್ಯತೆ ಬೆಸೆಯುವ ಬೆಳದಿಂಗಳ ಬುತ್ತಿ ಜಾತ್ರೆಯಲ್ಲಿ ಅವರು ಆಶೀರ್ವಚನ ನೀಡಿದರು. ದೇಹದ ತೃಪ್ತಿಗಾಗಿ ವಿವಿಧ ತರಹದ ಅಡುಗೆಗಳಿರಬಹುದು, ಆದರೆ ಮನಸ್ಸಿನ ತೃಪ್ತಿಗಾಗಿ ಈ ರೀತಿಯಾಗಿ ಊಟ ಮಾಡುವವರು. ಮನೆಯಲ್ಲಿ ವಿವಿಧ ತರಹದ ಅಡುಗೆ ಮಾಡಿ ತಾವು ಮಾಡಿದ್ದನ್ನು ಕದ ಹಾಕಿಕೊಂಡು ಕೀಳು ಮಟ್ಟದ ಭಾವನೆಯಲ್ಲಿ ಊಟ ಮಾಡುವುದು ದೇಹದ ತೃಪ್ತಿಯಾಗಿದೆ. ಇದರಿಂದ ದೇಹ ಬಲಿಷ್ಠವಾಗುತ್ತಿದೆ, ಮನಸ್ಸು ದುರ್ಬಲವಾಗುತ್ತಿದೆ. ಅದೇ ರೀತಿ ಕದ ಹಾಕಿಕೊಳ್ಳದೇ ಕರೆದುಕೊಂಡು, ಹಂಚಿಕೊಂಡು, ಮಾತನಾಡಿಕೊಂಡು ಉಣ್ಣುವುದು ಮನಸ್ಸಿನ ತೃಪ್ತಿಗಾಗಿ ಎಂದರು.

ಅನ್ನ, ನೀರು, ಗಾಳಿ ಜಗತ್ತಿನಲ್ಲಿರುವ ಮೂರೇ ಮೂರು ಒಳ್ಳೆಯ ರತ್ನಗಳು. ಯಾವುದೇ ಕಾರಣಕ್ಕೂ ತಿನ್ನುವ ಅನ್ನ, ಕುಡಿಯುವ ನೀರು, ಉಸಿರಾಡುವ ಗಾಳಿಯನ್ನು ಕೆಡಿಸಬಾರದು. ಯಾವುದೇ ಕಾರಣಕ್ಕೂ ತಟ್ಟೆಯಲ್ಲಿರುವ ಒಂದು ಅಗುಳು ಕೆಡಿಸದಂತೆ ಸಂಕಲ್ಪಿಸಬೇಕಿದೆ. ಅನ್ನದ ಅಗಳು ಭೂಮಿಯಲ್ಲಿ ಬೆಳೆಯಲು ಆರು ತಿಂಗಳು ಕಷ್ಟಪಡಬೇಕು. ಅದೇ ಬೆಳೆದ ಅನ್ನವಾದ ಅಗಳು ಕೆಡಿಸಲು 6 ಸೆಕೆಂಡ್‌ ಸಾಕು. ಹೀಗಾಗಿ ಯಾವುದೇ ಕಾರಣಕ್ಕೂ ತಿನ್ನುವ ಅನ್ನವನ್ನು ಕೆಡಿಸುವುದಿಲ್ಲ ಎನ್ನುವ ಸಂಕಲ್ಪ ಇಂದು ಮಾಡಬೇಕಿದೆ. ತಿನ್ನುವ ಅನ್ನ ಸಾಕಷ್ಟಿದ್ದರೂ ಚೆಲ್ಲುವುದೇ ಬಹಳವಾಗುತ್ತಿದೆ.
ದೇಶಕ್ಕೆ ಬರಗಾಲ ಅನ್ನ ಕೊರತೆಯಿಂದ ಅಲ್ಲ ಚೆಲ್ಲುವುದರಿಂದ ಎಂದು ದಿಂಗಾಲೇಶ್ವರ ಶ್ರೀಗಳ ಕಳವಳ ವ್ಯಕ್ತಪಡಿಸಿದರು.

ಮೂವತ್ತನೇ ವರ್ಷಕ್ಕೆ 3 ಹೊತ್ತು, 60ನೇ ವರ್ಷಕ್ಕೆ 2 ಹೊತ್ತು, 60ರ ನಂತರ ಒಂದು ಹೊತ್ತು, 90ರ ನಂತರ ಹಣ್ಣಿನ ರಸ ಸೇವಿಸಬೇಕೆಂದು ಆರೋಗ್ಯ ಸೂತ್ರ ಹೇಳುತ್ತದೆ ಎಂದರು.

ಇದೇ ವೇಳೆ ಶರಣಬಸವೇಶ್ವರ ಜಾತ್ರೋತ್ಸವ ಸಮಿತಿಯಿಂದ ದಿಂಗಾಲೇಶ್ವರ ಶ್ರೀಗಳನ್ನು ಸನ್ಮಾನಿಸಿದರು. ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಜಿಪಂ ಸದಸ್ಯ ಕೆ. ಮಹೇಶ ಇತರರು ಭಾಗವಹಿಸಿದ್ದರು.

ಬೆಳದಿಂಗಳ ಬೆಳಕಲ್ಲಿ ಭೋಜನ
ಈ ಬುತ್ತಿ ಜಾತ್ರೆಯಲ್ಲಿ ತಳವಗೇರಾ, ತೋಪಲಕಟ್ಟಿಯ ಭಕ್ತರು ಬುತ್ತಿಗಂಟಿನೊಂದಿಗೆ ಮೆರವಣಿಗೆಯಲ್ಲಿ ಶರಣಬಸವೇಶ್ವರ ಸನ್ನಿಧಿ ಗೆ ಆಗಮಿಸಿದರು. ಅಲ್ಲಿಂದ ಬುತ್ತಿ ಜಾತ್ರೆ ನಡೆಯುವ ಬಯಲು ಸ್ಥಳದಲ್ಲಿ ಬೆಳದಿಂಗಳ ಬೆಳಕಿನಲ್ಲಿ ಎಲ್ಲರೂ ಸೇರಿ ಶರಣಬಸವೇಶ್ವರ ಮೂರ್ತಿಗೆ ಪೂಜೆ ಸಲ್ಲಿಸಿದರು. ಬಳಿಕ ಜಂಗಮ ಗಣಾರಾಧನೆ ನಂತರ ತಾವು ತಂದಿರುವ ಬುತ್ತಿಯನ್ನು ಸವಿದರು. ಊಟ ಮಾಡುವಾಗಿನ ಮನಸ್ಸಿನ ಪರಿಣಾಮದಂತೆ ರಕ್ತ ಉತ್ಪತ್ತಿಯಾಗುತ್ತಿದೆ. ಪ್ರತಿಯೊಬ್ಬರೂ ಊಟವನ್ನು ಸಮಾಧಾನದಿಂದ ಮಾಡುವುದನ್ನು ರೂಢಿಸಿಕೊಳ್ಳಬೇಕು.
ಶ್ರೀ ದಿಂಗಾಲೇಶ್ವರ ಸ್ವಾಮೀಜಿ,
ದಿಂಗಾಲೇಶ್ವರಮಠ ಬಾಲೆಹೊಸೂರು

ಊಟ ಮಾಡುವಾಗಿನ ಮನಸ್ಸಿನ ಪರಿಣಾಮದಂತೆ ರಕ್ತ ಉತ್ಪತ್ತಿಯಾಗುತ್ತಿದೆ. ಪ್ರತಿಯೊಬ್ಬರೂ ಊಟವನ್ನು ಸಮಾಧಾನದಿಂದ ಮಾಡುವುದನ್ನು ರೂಢಿಸಿಕೊಳ್ಳಬೇಕು.
 ಶ್ರೀ ದಿಂಗಾಲೇಶ್ವರ ಸ್ವಾಮೀಜಿ,
 ದಿಂಗಾಲೇಶ್ವರಮಠ ಬಾಲೆಹೊಸೂರು

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.