ಹಳ್ಳಿ ವೈದ್ಯೆಯ ಮುಡಿಗೆ ರಾಜ್ಯ ಪ್ರಶಸ್ತಿಯ ಬೆಳ್ಳಿ ಗರಿ


Team Udayavani, Mar 6, 2017, 5:13 PM IST

Bellli-Ajji-6-3.jpg

ಐದುನೂರು ಹೆರಿಗೆ ಮಾಡಿಸಿದ ಮಹಾತಾಯಿ ಯಡ್ತಾಡಿಯ ಬೆಳ್ಳಿ ಬಾೖ

ಕೋಟ: ಶಾಲೆಯ ಮೆಟ್ಟಿಲನ್ನು ತುಳಿಯದ ಈಕೆ ಐದು ನೂರು ಜೀವಗಳಿಗೆ ಭುವಿಯ ಬೆಳಕನ್ನು ತೋರಿದ ಮಹಾತಾಯಿ. ಅಕ್ಷರ ಜ್ಞಾನವಿಲ್ಲದಿದ್ದರು ಪುಟ್ಟ ಮಕ್ಕಳ ಕಾಯಿಲೆ ವಾಸಿಮಾಡುವ ಹಳ್ಳಿ ಡಾಕ್ಟರ್‌ ಹಾಗೂ ಹವ್ಯಾಸಿ ಜಾನಪದ ಕಲಾವಿದೆ. ಇವರ ಸಾಧನೆಯನ್ನು ಗುರುತಿಸಿ ಇದೀಗ ಕರ್ನಾಟಕ ರಾಜ್ಯ ಸರಕಾರದ ಜಾನಪದ ಅಕಾಡಮಿ ಈ ಬಾರಿಯ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಆಕೆ ಬೇರೆ ಯಾರೂ ಆಲ್ಲ, ಉಡುಪಿ ತಾಲೂಕಿನ ಯಡ್ತಾಡಿ ಗ್ರಾಮದ ನಿವಾಸಿ ನಾಟಿ ವೈದ್ಯೆ ಬೆಳ್ಳಿ ಬಾೖ.

ವೈದ್ಯರಿಲ್ಲದ ಕಾಲದಲ್ಲಿ ಹಳ್ಳಿಗೆ ಇವರೇ ಡಾಕ್ಟರ್‌
ಐದಾರು ದಶಕಗಳ ಹಿಂದೆ ಅಲ್ತಾರು, ಯಡ್ತಾಡಿ ಎಂಬ ಕುಗ್ರಾಮದಲ್ಲಿ  ವೈದ್ಯರನ್ನು ನೋಡ ಬೇಕಾದರೆ ಹತ್ತಾರು ಕಿ.ಮೀ. ಸಾಗಬೇಕಿತ್ತು. ಆ ಸಂದರ್ಭ ಯಾರಿಗೇ ಹೆರಿಗೆ ನೋವು ಕಾಣಿಸಿಕೊಂಡರು ಮೊದಲು ಕರೆ ಹೋಗುತ್ತಿದ್ದ‌ದ್ದು ಈ ಬೆಳ್ಳಿ ಬಾೖಗೆ. ಇವರು ಆ ಮನೆಗೆ ತೆರಳಿ ಹೆರಿಗೆ ಮಾಡಿಸಿ, ತಾಯಿ – ಮಗುವಿಗೆ ಔಷಧೋಪಚಾರಗಳನ್ನು ತಿಳಿಸಿ ಯಾವುದೇ ಫಲಾಪೇಕ್ಷೆ ಇಲ್ಲದೆ ಅವರು ನೀಡುವ ಕಾಣಿಕೆಯನ್ನು ಸ್ವೀಕರಿಸಿ, ಅದರಲ್ಲಿಯೇ ತಾನು ನಂಬಿದ ದೇವರಿಗೆ ಸುಗಮವಾಗಿ ಹೆರಿಗೆಯಾದ ಕುರಿತು ಸೇವೆ ಸಲ್ಲಿಸಿ ಬರುತ್ತಿದ್ದರು. ಹೀಗೆ 50 ವರ್ಷಕ್ಕೂ ಹೆಚ್ಚು ಕಾಲ ಈ ವೃತ್ತಿಯಲ್ಲಿ ತೊಡಗಿಕೊಂಡ ಇವರು ಸುಮಾರು ಐದುನೂರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ. ಗರ್ಭಕೋಶ ಜಾರಿದಾಗ ಚಿಕಿತ್ಸೆ, ಮಕ್ಕಳಿಗೆ ಬಾಲಗ್ರಹ ಪೀಡೆ, ಅಜೀರ್ಣ, ಹೊಟ್ಟೆಹುಳ, ಗಾಳಿ ಸೋಂಕು, ವಾತಿ-ಭೇದಿಧಿ ಹೀಗೆ ಅನೇಕ ಸಂದರ್ಭ ಸಾವಿರಾರು ಮಂದಿಗೆ ಆಯುರ್ವೇದ ಮದ್ದು ನೀಡಿ ಗುಣಪಡಿಸಿದ್ದಾರೆ. ಒಟ್ಟಾರೆ ವೈದ್ಯರಿಲ್ಲದ ಕಾಲದಲ್ಲಿ ಹಳ್ಳಿಗೆ ಇವರೇ ಡಾಕ್ಟರ್‌.

ಕೇವಲ ಮನುಷ್ಯರಿಗೆ ಮಾತ್ರವಲ್ಲ ಜಾನುವಾರುಗಳಿಗೂ ಮದ್ದು ನೀಡುವುದರಲ್ಲಿ, ಹೆರಿಗೆ ಮಾಡಿಸುವುದರಲ್ಲಿ ಇವರು ನಿಸ್ಸೀಮರು. ಕಾಲಕ್ರಮೇಣ ವೈದ್ಯರು ಹೆರಿಗೆ ಮಾಡಿಸುತ್ತಿದ್ದ ಸಂದರ್ಭದಲ್ಲೂ ಕೂಡ ಇವರನ್ನು ಸಹಾಯಕ್ಕಾಗಿ ಕರೆಯುತ್ತಿದ್ದರು. ಇದೀಗ ಎಂಬತ್ತರ ಆಸುಪಾಸಿನಲ್ಲಿರುವ ಇವರು ಹೆರಿಗೆ ಮಾಡಿಸುವುದನ್ನು ಬಿಟ್ಟಿದ್ದು, ಮನೆಗೆ ಬಂದವರಿಗೆ ಗಿಡಮೂಲಿಕೆಗಳ ಔಷಧ ನೀಡುತ್ತಾರೆ. ಕುಡುಬಿ ಜನಾಂಗದವರಾದ ಬೆಳ್ಳಿ ಬಾೖ ಅವರು ಚಿಕ್ಕವರಿರುವಾಗ ತಾಯಿ ಮಾಡುತ್ತಿದ್ದ ನಾಟಿ ವೈದ್ಯ ಪದ್ಧತಿಯನ್ನು ನೋಡಿ ಅದನ್ನು ಅನುಸರಿಸಿದರು ಹಾಗೂ ಅವರ ಕಾಲ ಅನಂತರ ಅದೇ ಹಾದಿಯಲ್ಲಿ ಮುಂದುವರಿದರು.

ಜಾನಪದ ಕಲಾವಿದೆ 
ಇವರ ಪ್ರತಿಭೆ ಕೇವಲ ನಾಟಿ ವೈದ್ಯಕ್ಕೆ ಸೀಮಿತವಲ್ಲ. ಕುಟುಂಬದ ಮದುವೆ, ಇನ್ನಿತರ ಸಮಾರಂಭಗಳಲ್ಲಿ ಕುಡುಬಿ ಭಾಷೆಯ ಹಾಡುಗಳನ್ನು ಹಾಡುವ ಮೂಲಕ ಉತ್ತಮ ಜಾನಪದ ಕಲಾವಿದೆಯಾಗಿಯೂ ಗುರುತಿಸಿಕೊಂಡಿದ್ದಾರೆ. ಸಮಾಜದಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸಿದಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ಉಮಾಶ್ರೀ ಅವರ ಕೈಯಿಂದ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಸ್ವೀಕರಿಸಿರುವುದಕ್ಕೆ ಬೆಳ್ಳಿ ಬಾೖಯವರು ತುಂಬಾ ಸಂತೋಷಗೊಂಡಿದ್ದಾರೆ ಹಾಗೂ ಉಡುಪಿ ಜಿಲ್ಲೆಯಿಂದ ಈ ಬಾರಿ ಪ್ರಶಸ್ತಿ ಪಡೆದ ಏಕೈಕ ಸಾಧಕಿ ಇವರಾಗಿದ್ದಾರೆ.


ನಾನು ಚಿಕ್ಕವಳಿರುವಾಗ ನಮ್ಮೂರಿನಲ್ಲಿ ಆಸ್ಪತ್ರೆ ಇರಲಿಲ್ಲ. ಆಗ ನನ್ನ ಅಮ್ಮ ನಾಟಿ ಔಷಧ ನೀಡುತ್ತಿದ್ದಳು, ಹೆರಿಗೆ ಮಾಡಿಸುತ್ತಿದ್ದಳು. ಅವಳಿಂದ ನಾನು ಇದನ್ನು ನೋಡಿ ಕಲಿತೆ. ಎಂದೂ ಹಣಕ್ಕಾಗಿ ಈ ಕೆಲಸ ಮಾಡಿದವಳಲ್ಲ. ಸೇವೆ ಎನ್ನುವ ರೀತಿಯಲ್ಲಿ 500ಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದೇನೆ. ಸಾವಿರಾರು ಮಂದಿ ಮಕ್ಕಳಿಗೆ, ಜಾನುವಾರುಗಳಿಗೆ ಔಷಧ ನೀಡಿ ಕಾಯಿಲೆ ಗುಣಪಡಿಸಿದ್ದೇನೆ. ಇದೀಗ ಸರಕಾರ ನನ್ನ‌ನ್ನು ಗುರುತಿಸಿ ಪ್ರಶಸ್ತಿ ನೀಡಿದ್ದ‌ಕ್ಕೆ  ತುಂಬಾ ಸಂತೋಷವಾಗಿದೆ.
– ಬೆಳ್ಳಿ ಬಾೖ, ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾಟಿ ವೈದ್ಯೆ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.