ಎಲ್ಲವನ್ನೂ ಒಪ್ಪಿಕೊಳ್ಳುವುದೇ ಧರ್ಮ : ಚಕ್ರವರ್ತಿ ಸೂಲಿಬೆಲೆ
Team Udayavani, Jan 29, 2017, 3:45 AM IST
ಬೈಂದೂರು (ಉಪ್ಪುಂದ): ನಾನು ಮಾತ್ರ ಸರಿ ಎನ್ನುವುದು ಧರ್ಮವಾಗಲಾರದು. ಎಲ್ಲವನ್ನು ಒಳಗೊಂಡಿರುವುದೇ ಮಹಾಧರ್ಮ ಎನ್ನಿಸಿಕೊಳ್ಳುತ್ತದೆ. ಅದುವೇ ಹಿಂದೂ ಧರ್ಮ ಎಂದು ಖ್ಯಾತ ವಾಗ್ಮಿ ಮತ್ತು ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಅವರು ಹೇಳಿದರು.
ಅವರು ಬೈಂದೂರು ಗಾಂಧಿ ಮೈದಾನದಲ್ಲಿ ಜ. 28ರಂದು ನಡೆದ ಸ್ವಾಮಿ ವಿವೇಕಾನಂದರ 154ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಬೃಹತ್ ಸಾರ್ವ ಜನಿಕ ಸಮಾರಂಭ ವಿವೇಕ ಪರ್ವದಲ್ಲಿ ಮಾತನಾಡಿದರು.
ವಿದೇಶಿಗರ ಆಕ್ರಮಣದಿಂದ ಭಾರತದ ಸಂಪತ್ತು, ಸಂಸ್ಕೃತಿ ನಾಶವಾಯಿತು, ವೇಷಭೂಷಣ ಬದಲಾಯಿತು, ದೇವಸ್ಥಾನಗಳಿಗೆ ಕೋಟೆ ಕಟ್ಟಬೇಕಾದ ಅನಿವಾರ್ಯತೆ ಸೃಷ್ಟಿಯಾಯಿತು. ಆದರೂ ಭಾರತಕ್ಕಿರುವ ಅದ್ಬುತ ಶಕ್ತಿ
ಯಿಂದಾಗಿ ಜಗತ್ತೇ ಗುರುತಿಸುವಂತಾಗಿದೆ ಎಂದರು.
ಕರ್ನಾಟಕ ದಕ್ಷಿಣ ರಾಷ್ಟ್ರಿಯ ಸ್ವಯಂಸೇವಕ ಸಂಘದ ಪ್ರಾಂತ ಸಹ ಸಂಘಚಾಲಕ ಡಾ| ವಾಮನ ಶೆಣೈ ಪ್ರಸ್ತಾವನೆಗೈದರು.
ಈ ಸಂದರ್ಭ ವಿವೇಕ ಪರ್ವ ಕಾರ್ಯಕಾರಿ ಸಮಿತಿ ಗೌರವಾಧ್ಯಕ್ಷ ವಿಶ್ವೇಶ್ವರ ಅಡಿಗ, ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್ ಉಪ್ಪುಂದ, ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೆಳ್ಳಾಲ, ಸಹ ಕಾರ್ಯದರ್ಶಿ ವಿಜಯ ಕುಮಾರ್ ಕಂಚಿಕಾನ್, ಪ್ರಿಯದರ್ಶಿನಿ ದೇವಾಡಿಗ, ಸಂಚಾಲಕ ಶ್ರೀಧರ ಬಿಜೂರು, ಸಹಸಂಚಾಲಕ ಭೀಮೇಶ ಕುಮಾರ್ ಎಸ್.ಜಿ., ಖಜಾಂಚಿ ಬಾಲಕೃಷ್ಣ ಬೈಂದೂರು ಹಾಗೂ ಸ್ವಾಗತ ಸಮಿತಿಯ ಎಲ್ಲ ಉಪಾಧ್ಯಕ್ಷರು ಉಪಸ್ಥಿತರಿದ್ದರು. ಕಾರ್ಯಧ್ಯಕ್ಷ ಜಯಾನಂದ ಹೋಬಳಿದಾರ್ ಸ್ವಾಗತಿಸಿದರು, ಆರ್.ಜೆ. ನಯನಾ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ