ಕಂತಿಹೊಂಡ ಕಾಂಕ್ರೀಟ್, ಡಾಮರು ಘಟಕ ಪರಿಸರಕ್ಕೆ ಹಾನಿ: ಪ್ರತಿಭಟನೆ
Team Udayavani, Feb 23, 2017, 12:26 PM IST
ಕುಂದಾಪುರ: ಐಆರ್ಬಿ ಸಂಸ್ಥೆ ಕುಂದಾಪುರ – ಕಾರವಾರ ಚತುಷ್ಪಥ ಹೆದ್ದಾರಿ ಕಾಮಗಾರಿಗಾಗಿ ಅರೆಹೊಳೆಬಳಿಯ ಕಂತಿಹೊಂಡದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ಹಾಗೂ ಡಾಮರು ಘಟಕದಿಂದ ಬರುವ ಧೂಳಿನಿಂದಾಗಿ ಪರಿಸರ ಹಾಳಾಗಿದ್ದಲ್ಲದೇ ಪರಿಸರದ ಎರಡು ರಸ್ತೆಗಳಿಗೆ ಹಾನಿಯಾಗಿದ್ದು ಅದರ ಬಗ್ಗೆ ಕೂಡಲೇ ಪರಿಹಾರ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಆಗ್ರಹಿಸಿ ಅರೆಹೊಳೆ ಹಾಗೂ ಉಳ್ಳೂರು ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.
ಈ ಪ್ಲಾಂಟ್ ಹೊರಸೂಸುವ ಜಲ್ಲಿಕಲ್ಲುಗಳು ಹಾಗೂ ಇತರ ವಸ್ತುಗಳಿಂದ ಪರಿಸರದ ಅರೆಹೊಳೆ ಹಾಗೂ ಉಳ್ಳೂರಿಗೆ ಸಾಗುವ ರಸ್ತೆ ಸಂಪೂರ್ಣ ಹಾಳಾಗಿದ್ದು ಕೂಡಲೇ ಇಲ್ಲಿ ರಸ್ತೆ ಪುನರ್ ನಿರ್ಮಾಣ ಮಾಡಿಕೊಡಬೇಕು ಹಾಗೂ ಈ ಪ್ಲಾಂಟ್ ಸುತ್ತ ಮೆಸ್ ಅಳವಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಐಆರ್ಬಿ ಕಂಪನಿಯ ಕಾಮಗಾರಿ ಮೇಲುಸ್ತುವಾರಿ ಯೋಗೀಂದ್ರ ಅವರು ಈ ಬಗ್ಗೆ ಕಂಪನಿಯ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಹದಿನೈದು ದಿನದ ಒಳಗೆ ಪರಿಹಾರವನ್ನು ಕಂಡುಕೊಳ್ಳುವ ಬಗ್ಗೆ ಭರವಸೆ ನೀಡಿದರು.ಪ್ರತಿಭಟನೆಯಲ್ಲಿ ಹಕ್ಕಾಡಿ ಜಗದೀಶ ಪೂಜಾರಿ, ಪ್ರಕಾಶ್ ದೇವಾಡಿಗ, ಕಿಶೋರ್ ಶೆಟ್ಟಿ, ಸುಕೇಶ ದೇವಾಡಿಗ, ದಿನೇಶ್ ಆಚಾರ್, ರೋಶನ್ ಪೂಜಾರಿ ನೇತೃತ್ವ ವಹಿಸಿದ್ದು, ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ
“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ
Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ
Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ
Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ