ಕಾಮಗಾರಿ ನಿರ್ವಹಿಸದ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಿ


Team Udayavani, Jul 2, 2017, 3:45 AM IST

0107kota1e.jpg

ಕೋಟ: ಸಾಲಿಗ್ರಾಮ ಪ.ಪಂ. ಸಾಮಾನ್ಯ ಸಭೆ ಜೂ.30ರಂದು  ಪ.ಪಂ. ಅಧ್ಯಕ್ಷೆ ರತ್ನಾ ನಾಗರಾಜ್‌ ಗಾಣಿಗ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಾರಾಹಿ ನೀರನ್ನು  ಪ.ಪಂ.ವ್ಯಾಪ್ತಿಗೆ ಕುಡಿಯಲು ಬಳಸಿಕೊಳ್ಳುವ ಕುರಿತು, ಕಸ ವಿಲೇವಾರಿಯ ಬಗ್ಗೆ  ಚರ್ಚೆ ನಡೆಯಿತು ಮತ್ತು ಅಸಮರ್ಪಕ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರನೋರ್ವನನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಆಗ್ರಹ ಕೇಳಿ ಬಂತು. ಸಭೆಯಲ್ಲಿ ಯಾವುದೇ ಗೌಜಿ-ಗಲಾಟೆಗಳಿಲ್ಲದೆ ಅಭಿವೃದ್ಧಿ ಪರ ಚರ್ಚೆ ನಡೆದಿದ್ದು ವಿಶೇಷವಾಗಿತ್ತು.

ಕಸ ವಿಲೇವಾರಿ ಕುರಿತು ಚರ್ಚೆ
ಪ.ಪಂ. ವ್ಯಾಪ್ತಿಯ ಅತೀ ದೊಡ್ಡ ಸಮಸ್ಯೆಯಾದ ಕಸ ವಿಲೇವಾರಿಯ ಕುರಿತು ಒಂದಷ್ಟು ಚರ್ಚೆ ನಡೆಯತು. ಮನೆಯಿಂದ ಹಸಿಕಸ, ಒಣಕಸವನ್ನು ಒಟ್ಟಾಗಿ  ನೀಡಿದರೆ ಪೌರಕಾರ್ಮಿಕರು ಸ್ವೀಕರಿಸುತ್ತಿಲ್ಲ ಎನ್ನುವ ದೂರುಗಳು ಬಂದಿದೆ ಎಂದು ನಾಮ ನಿರ್ದೇಶಿತ ಸದಸ್ಯೆ ಅಚ್ಯುತ್‌ ಪೂಜಾರಿ, ಸದಸ್ಯೆ ಸಾಧು ಪಿ. ಸಭೆಯ ಗಮನಕ್ಕೆ ತಂದರು. ಈ ಕುರಿತು  ಮಾತನಾಡಿದ ಸದಸ್ಯ ರಾಜು ಪೂಜಾರಿ, ಕೆಲವು ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ದಿಢೀರ್‌ ಆಗಿ ಕಸವಿಲೇವಾರಿ ಮಾಡುವ ಹಳೆಕೋಟೆ ಮೈದಾನಕ್ಕೆ ಭೇಟಿ ನೀಡಿದ್ದು, ತೆರದ ಸ್ಥಳದಲ್ಲಿ ಕಸ ವಿಲೇವಾರಿ ಮಾಡದಂತೆ ಸೂಚಿಸಿದ್ದಾರೆ ಹಾಗೂ ಪ್ರಸ್ತುತ ಇರುವ ಕಸವನ್ನು ತೆರವುಗೊಳಿಸುವಂತೆ ಹೇಳಿದ್ದಾರೆ.ಒಣಕಸವನ್ನು ವಾರಕ್ಕೊಮ್ಮೆ ಹಾಗೂ ಹಸಿ ಕಸವನ್ನು ಪ್ರತಿದಿನ ಪಡೆದು ಅನಂತರ ಬೇರ್ಪಡಿಸಿ ಬೇರೆ ಕಡೆಯಲ್ಲಿ ವಿಲೇವಾರಿ ಮಾಡಬೇಕು ಎಂದು ತಿಳಿಸಿದ್ದಾರೆ. 

ಆದರೆ ಇದನ್ನು ತಪ್ಪಾಗಿ ಅರ್ಥೈಸಿದ    ಪೌರಕಾರ್ಮಿಕರು ಈ ರೀತಿ ಮಾಡಿದ್ದಾರೆ ಎಂದರು. ಕಸವಿಲೇವಾರಿಗೆ ಪ್ರತಿ ವಾರ್ಡ್‌ಗಳಲ್ಲಿ  ಕಾಂಪೋಸ್ಟ್‌  ಗುಂಡಿ ತಯಾರಿಯ ಕುರಿತು ಚರ್ಚೆ  ನಡೆಯಿತು. ಪ್ರಾಯೋಗಿಕವಾಗಿ ಕಾರ್ಕಡ ವಾರ್ಡ್‌ನಲ್ಲಿ ಇದನ್ನು ಅನುಷ್ಠಾನ್ಕಕೆ ತರುವ ಎಂದು ರಾಜು ಪೂಜಾರಿ, ಅಚ್ಯುತ್‌ ಪೂಜಾರಿ ಹಾಗೂ ಸಂಜೀವ ದೇವಾಡಿಗ ಸಹಮತ ಸೂಚಿಸಿದರು.

ಇದೀಗ ಸರಕಾರದ ವಶದಲ್ಲಿರುವ ಹಳೇ ಗ್ಯಾಸ್‌ ಗೋದಾಮುವನ್ನು ಕಸ ಬೇರ್ಪಡಿಸಲು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ನೀಡಿದ ಸಲಹೆಗೆ ಆ ವಾರ್ಡ್‌ ಸದಸ್ಯೆ ವಸುಮತಿ ನಾೖರಿ ಆಕ್ಷೇಪ ವ್ಯಕ್ತಪಡಿಸಿದರು ಮತ್ತು ಜಿಲ್ಲಾಧಿಕಾರಿಗಳ ಭೇಟಿ ಸಂದರ್ಭ ಸದಸ್ಯರ ಗಮನಕ್ಕೆ ತಾರದಿರುವ ಕುರಿತು ಆಕ್ಷೇಪ  ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ದಿಢೀರ್‌ ಭೇಟಿ ನೀಡಿದ್ದು,ಯಾರ ಗಮನಕ್ಕೂ ಬಂದಿಲ್ಲ ಎಂದು ಮುಖ್ಯಾಧಿಕಾರಿಗಳು ಸ್ಪಷ್ಟನೆ ನೀಡಿದರು.

ವಾರಾಹಿ ನೀರನ್ನು 
ಕುಡಿಯಲು ಬಳಸಿಕೊಳ್ಳಲು ಸಲಹೆ

ವಾರಾಹಿ ಕಾಲುವೆಯ ನೀರನ್ನು ಉಡುಪಿ ನಗರಸಭೆಯವರು ಕುಡಿಯಲು  ಬಳಸಿಕೊಳ್ಳುವ ಚಿಂತನೆ ನಡೆಸುತ್ತಿದ್ದು, ಸಾಲಿಗ್ರಾಮ ಪ.ಪಂ. ಕೂಡ ಇದೇ ಮಾದರಿಯಲ್ಲಿ ಬಳಸಿಕೊಳ್ಳಲು ಸಾಧ್ಯವಿದೆಯೇ ಎನ್ನುವುದನ್ನು  ಸಂಬಂಧಪಟ್ಟ ಅಧಿಕಾರಿಗಳ ಜತೆಗೆ ಚರ್ಚಿಸಿ ಕ್ರಮಕೈಗೊಳ್ಳಬೇಕಿದೆ ಎಂದು ಸದಸ್ಯ ರಾಜು ಪೂಜಾರಿ ಸಲಹೆ ನೀಡಿದರು. ಈ  ಕುರಿತು ಸಾಧ್ಯಾಸಾಧ್ಯತೆಯನ್ನು  ಪರಿಶೀಲಿಸುವಂತೆ ಸಲಹೆ ಕೇಳಿ ಬಂತು.

ಉಪಾಧ್ಯಕ್ಷ ಉದಯ ಪೂಜಾರಿ, ಮುಖ್ಯಾಧಿಕಾರಿ ಶ್ರೀಪಾದ್‌ ಪುರೋಹಿತ್‌ ಮುಂತಾದವರು ಉಪಸ್ಥಿತರಿದ್ದರು.

ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಲು ಆಗ್ರಹ
 ಪ.ಪಂ. ವ್ಯಾಪ್ತಿಯಲ್ಲಿ ಹಲವು ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಸುರೇಶ ಶೆಟ್ಟಿ ಎನ್ನುವ ಗುತ್ತಿಗೆದಾರ ಕೆಲವೊಂದು ಕಾಮಗಾರಿಗಳನ್ನು ಅಸಮರ್ಪಕವಾಗಿ ನಿರ್ವಹಿಸಿದ್ದು,  ಇದರಿಂದ ಸರಕಾರದ ಅನುದಾನ ದುರ್ಬಳಕೆಯಾಗಿದೆ ಹಾಗೂ ಇದನ್ನು ಪ್ರಶ್ನಿಸಿದ ಸದಸ್ಯರಿಗೂ ಈತ ಅಗೌರವ ತೋರಿದ್ದಾನೆ. ಆದ್ದರಿಂದ ಈತನನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಸದಸ್ಯರಾದ ಸಂಜೀವ ದೇವಾಡಿಗ ಆಗ್ರಹಿಸಿದರು. ಈ ಕುರಿತು ಉಪಾಧ್ಯಕ್ಷ  ಉದಯ ಪೂಜಾರಿ ಸೇರಿದಂತೆ ಹಲವು ಸದಸ್ಯರು ಒಮ್ಮತ ಸೂಚಿಸಿದರು. ಈ ವಿಚಾರದಲ್ಲಿ ಕಾನೂನಿನ ಪ್ರಕಾರ ಪರಿಶೀಲಿಸಿ, ಕ್ರಮಕೈಗೊಳ್ಳುವ ಭರವಸೆಯನ್ನು ಮುಖ್ಯಾಧಿಕಾರಿ ಶ್ರೀಪಾದ್‌ ಪುರೋಹಿತ್‌ ನೀಡಿದರು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.