ಬುರುಡೆ ರಾಮಯ್ಯನ ಸರಕಾರವನ್ನು ತೊಲಗಿಸಿ 


Team Udayavani, Nov 14, 2017, 9:23 AM IST

14-7.jpg

ಉಪ್ಪುಂದ: ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 3,102 ಅತ್ಯಾಚಾರ ಪ್ರಕರಣ; 2,534 ಮಹಿಳೆಯರ ಹತ್ಯೆ, 426 ಮಹಿಳೆಯರ ಅಪಹರಣ ವಾಗಿದೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪರಿಸ್ಥಿತಿ ಹೀಗಿದ್ದರೂ ಸುಳ್ಳು ಹೇಳುತ್ತ ಕಾಲ ಹರಣ ಮಾಡುತ್ತಿರುವ ಬುರುಡೆ ರಾಮಯ್ಯನ ಸರಕಾರವನ್ನು ತೊಲಗಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಬಿಜೆಪಿ ಹಮ್ಮಿಕೊಂಡಿರುವ ಪರಿವರ್ತನಾ ಯಾತ್ರೆಯ  ಅಂಗವಾಗಿ ಸೋಮವಾರ ನಾಗೂರಿನ ಸಂದೀಪನ್‌ ಆಂಗ್ಲ ಮಾಧ್ಯಮ ಶಾಲೆಯ ಎದುರಿನ ಮೈದಾನದಲ್ಲಿ  ಜರಗಿದ ಬಿಜೆಪಿ ಕಾರ್ಯ ಕರ್ತರ ಬೃಹತ್‌ ಸಮಾವೇಶದಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಜನರಿಕ್‌ ಔಷಧ ಯೋಜನೆಯಲ್ಲಿ 100 ರೂ. ಬೆಲೆಯ ಮಾತ್ರೆಯನ್ನು 10 ರೂ.ಗೆ ನೀಡುತ್ತಿದ್ದಾರೆ. ರೈತರಿಗೆ ಕಡಿಮೆ ಬೆಲೆಯಲ್ಲಿ ರಸಗೊಬ್ಬರ ನೀಡುತ್ತಿದ್ದಾರೆ. ದೇಶದ ಜನತೆಗೆ ದಿನದ 24 ಗಂಟೆ ವಿದ್ಯುತ್‌ ಕೊಡಲು ಪ್ರಧಾನಮಂತ್ರಿ ಶ್ರಮಿಸುತ್ತಿದ್ದಾರೆ. ಮಹಿಳೆಯರಿಗೆ ಬ್ಯಾಂಕಿನಲ್ಲಿ ಯಾವುದೇ ಜಾಮೀನು ಇಲ್ಲದೆ 1 ಲಕ್ಷದಿಂದ 30 ಲಕ್ಷ ರೂ. ಸಾಲ ನೀಡುವ ಮುದ್ರಾ ಯೋಜನೆ ಜಾರಿಗೊಳಿಸಿದ್ದಾರೆ. ಜನತೆ ಇದರ ಸದುಪ ಯೋಗ ಪಡೆದುಕೊಳ್ಳಬೇಕು ಎಂದರು.

ರಾಜ್ಯದ ಜನತೆ ಇನ್ನು ಮೂರ್‍ನಾಲ್ಕು ತಿಂಗಳು ತಾಳ್ಮೆ ವಹಿಸಬೇಕು. ಬಳಿಕ ಈಗಿರುವ ಭ್ರಷ್ಟ ಸರಕಾರ ತೊಲಗು ತ್ತದೆ. ರಾಜ್ಯದ ಬಗ್ಗೆ ನನ್ನದೇ ಆದ ಕನಸುಗಳಿವೆ. ಅದನ್ನು ಇವತ್ತು ಹೇಳಿದರೆ ಬುರುಡೆ ದಾಸಯ್ಯ ಸಿದ್ದರಾಮಯ್ಯ ನಾನೇ ಮಾಡುತ್ತೇನೆ ಎಂದು ಹೇಳು ತ್ತಾರೆ. ಬಿಜೆಪಿ ಸರಕಾರದಲ್ಲಿ ನಿಮ್ಮ ಎಲ್ಲ ಸಮಸ್ಯೆಗಳಿಗೆ ಉತ್ತರ ಮತ್ತು ಪರಿಹಾರ ಕೊಡುತ್ತೇನೆ ಎಂದರು.

ತುಳಸಿ ನೀರು ಬಿಡಿ
ರಾವಣನ ಸರಕಾರವನ್ನು ಕೊನೆ ಗಾಣಿಸಿ ರಾಮರಾಜ್ಯವನ್ನಾಗಿಸಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬರಬೇಕು. ಯುದ್ಧ ಆರಂಭವಾಗಿದೆ ರಾಜ್ಯ ಸರಕಾರಕ್ಕೆ ತುಳಸಿ ನೀರು ಬಿಡುವ ಸಂದರ್ಭ ಬಂದಿದೆ ಓಟಿಗಾಗಿ ನಾಟಕ ಮಾಡುವ ಸಿದ್ದರಾಮಯ್ಯ ಸರಕಾರವನ್ನು ಮನೆಗೆ ಕಳುಹಿಸಲು ಕಾರ್ಯಕರ್ತರು ಸಿದ್ಧರಾಗಬೇಕು ಎಂದು ಕೇಂದ್ರ ಸಚಿವ ಅನಂತ ಕುಮಾರ್‌ ಹೆಗಡೆ ಹೇಳಿದರು.

ಸಂಸದರಾದ ಶೋಭಾ ಕರಂದ್ಲಾಜೆ, ಶ್ರೀರಾಮುಲು, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ.ಎಂ. ಸುಕುಮಾರ್‌ ಶೆಟ್ಟಿ, ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಭಾರತಿ ಶೆಟ್ಟಿ, ತೇಜಸ್ವಿನಿ ಗೌಡ, ಪ್ರಧಾನ ಕಾರ್ಯದರ್ಶಿ ದೀಪಕ್‌ ಕುಮಾರ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬೈಂದೂರು ಕ್ಷೇತ್ರಾಧ್ಯಕ್ಷ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು. ಬಾಲಚಂದ್ರ ಭಟ್‌ ನಿರ್ವಹಿಸಿದರು. ವಲಯ ಮಹಿಳಾ ಯುವ ಮೋರ್ಚಾ ಅಧ್ಯಕ್ಷೆ ಪ್ರಿಯದರ್ಶಿನಿ ದೇವಾಡಿಗ ವಂದಿಸಿದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.