ವಡೇರಹೋಬಳಿಯ ತ್ಯಾಜ್ಯ ಸಂಸ್ಕರಣ ಘಟಕ ವಿಸ್ತರಣೆ: ನಿರ್ಣಯ


Team Udayavani, Dec 29, 2017, 6:55 AM IST

2812kde11.jpg

ಕುಂದಾಪುರ: ವಡೇರಹೋಬಳಿಯ ಮಠದಬೆಟ್ಟು ಪ್ರದೇಶದಲ್ಲಿ ತ್ಯಾಜ್ಯ ಸಂಸ್ಕರಣ ಘಟಕವನ್ನು 400 ಮೀ. ವಿಸ್ತರಿಸಲು ಸರಕಾರದಿಂದ ವಿಶೇಷ ಅನುದಾನಕ್ಕೆ ಒತ್ತಾಯಿಸಿ ಕುಂದಾಪುರ ಪುರಸಭೆಯ ಅಧ್ಯಕ್ಷೆ ವಸಂತಿ ಮೋಹನ್‌ ಸಾರಂಗ್‌ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.  

ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯೆ ಗುಣರತ್ನಾ, ಯುಜಿಡಿ ಕಾಮಗಾರಿ ಸಂಬಂಧ ಕರೆದಿದ್ದ ಪುರಸಭೆಯ ವಿಶೇಷ ಸಭೆಯಲ್ಲಿ ನಾನು ಆಕ್ಷೇಪ ವ್ಯಕ್ತಪಡಿಸಿದ್ದರೂ, ಸಹ ಅಜೆಂಡಾದಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ ಎಂದು ನಮೂದಿಸಿರುವುದು ಸರಿಯಲ್ಲ. ಅದೇ ಜಾಗದಲ್ಲಿ ಸಂಸ್ಕರಣ ಘಟಕ ನಿರ್ಮಾಣ ಆಗುವುದರಿಂದ ವಾರ್ಡ್‌ನ ಎಲ್ಲರಿಗೂ ಸಮಸ್ಯೆಗಳಾಗುತ್ತದೆ. ಅಲ್ಲಿಂದ 400 ಮೀ. ದೂರದಲ್ಲಿ ನಿರ್ಮಿಸಿ, ಜಿಲ್ಲಾಧಿಕಾರಿ ಬಳಿಯೂ ಈ ಬಗ್ಗೆ ಪ್ರಸ್ತಾವಿಸಲಾಗುವುದು ಎಂದವರು ಹೇಳಿದರು.

ಇದಕ್ಕೆ ಹೆಚ್ಚಿನ ಸದಸ್ಯರು ಧ್ವನಿಗೂಡಿಸಿ, ಜನರಿಗೆ ಕಡಿಮೆ ಸಮಸ್ಯೆಯಾಗುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಿ ಎಂದು ಸಲಹೆ ನೀಡಿದರು.

ಇದಕ್ಕುತ್ತರಿಸಿದ ಪುರಸಭೆ ಮುಖ್ಯಾಧಿಕಾರಿ ಕೆ. ಗೋಪಾಲಕೃಷ್ಣ ಶೆಟ್ಟಿ ಘಟಕ ಸ್ಥಳಾಂತರಕ್ಕೆ ಇನ್ನೂ ಹೆಚ್ಚಿನ 5 ಕೋ.ರೂ. ಹೆಚ್ಚಿನ ಅನುದಾನ ಅಗತ್ಯವಿದ್ದು, ಈ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಂಡರೆ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಒತ್ತಾಯಿಸಲಾಗುವುದು ಎಂದರು. ಬಳಿಕ ಸಂಸ್ಕರಣ ಘಟಕ ವಿಸ್ತರಣೆಗಾಗಿ ಹೆಚ್ಚುವರಿ ಅನುದಾನಕ್ಕೆ ಒತ್ತಾಯಿಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಈ ವೇಳೆ ಮಾತನಾಡಿದ ಸದಸ್ಯರಾದ ಉದಯ ಮೆಂಡನ್‌, ರವಿಕಲಾ ಅವರು ನಮ್ಮ ವಾರ್ಡಿನಲ್ಲೂ ಸಂಸ್ಕರಣ ಘಟಕದಿಂದ ಸಮಸ್ಯೆಯಿದ್ದು, ಅದನ್ನು ಬದಲಾಯಿಸಿ ಎಂದು ಮನವಿ ಮಾಡಿದರು.

ಶೇ. 70 ರಷ್ಟು ಪೂರ್ಣ
ಪುರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಪ್ರಸ್ತಾವಿಸಿದ ಮುಖ್ಯಾಧಿಕಾರಿ, 7-8 ಕಾಮಾಗರಿ ಹೊರತು ಪಡಿಸಿ, ಶಾಸನಬದ್ಧ ಅನುದಾನ ಸಿಗುವ ಎಲ್ಲ ಕಾಮಗಾರಿಗಳು ಪ್ರಗತಿಯಲ್ಲಿದೆ. ಶೇ. 70 ರಷ್ಟು ಪೂರ್ಣಗೊಂಡಿವೆ ಎಂದವರು ಸಭೆಗೆ ತಿಳಿಸಿದರು.  ಸದಸ್ಯರಾದ ಚಂದ್ರಶೇಖರ್‌ ಖಾರ್ವಿ, ಪ್ರಭಾಕರ ಕೋಡಿ, ರವಿರಾಜ್‌ ಖಾರ್ವಿ ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡರು. 
ಉಪಾಧ್ಯಕ್ಷ ರಾಜೇಶ್‌ ಕಾವೇರಿ, ಸ್ಥಾಯೀ ಸಮಿತಿ ಅಧ್ಯಕ್ಷ ಸಿಸಿಲಿ ಕೋಟ್ಯಾನ್‌ ಉಪಸ್ಥಿತರಿದ್ದರು.

ಮರ್ಯಾದೆ 
ಕೊಡಿ ಮಾರ್ರೆ…

ಯುಜಿಡಿ ಬಗ್ಗೆ ಕರೆದ ವಿಶೇಷ ಸಭೆಯ ಅಜೆಂಡಾದಲ್ಲಿ ತಪ್ಪಾಗಿದೆ ಎನ್ನುವುದನ್ನು ಪ್ರಸ್ತಾವಿಸಿದ ವಿಪಕ್ಷ ಸದಸ್ಯ ಶ್ರೀಧರ ಶೇರಿಗಾರ್‌ ಅವರು ಅಜೆಂಡಾವನ್ನು ಓದಲು ಮುಂದಾದಾಗ ಆಡಳಿತ ಪಕ್ಷದ ಸದಸ್ಯ ಉದಯ ಮೆಂಡನ್‌ ಬೇಗ- ಬೇಗ ಓದಾ ಎಂದು ಏಕವಚನದಲ್ಲಿ ಸೂಚಿಸಿದರು.  ಈ ಬಗ್ಗೆ ಬೇಸರ ಗೊಂಡ ಶ್ರೀಧರ್‌ ಅವರು ಸ್ವಲ್ಪ ಮರ್ಯಾದೆ ಕೊಡಿ ಮಾರ್ರೆ ಎಂದರು. 

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.