“ಮಾಧ್ಯಮಗಳು ಒಳ್ಳೆಯದನ್ನು ವೈಭವೀಕರಿಸಲಿ’ 


Team Udayavani, Jan 16, 2018, 11:08 AM IST

19-12.jpg

ಕೋಟ: ಇಂದಿನ ಮಾಧ್ಯಮ ವ್ಯವಸ್ಥೆ ಸಮಾಜ ದಲ್ಲಾಗುವ ಕೆಟ್ಟ ಕೆಲಸಗಳನ್ನು ವೈಭವೀಕರಿಸುತ್ತದೆ. ಇದು ಸಮಾಜದ ಮೇಲೆ ದುಷ್ಪರಿಣಾಮ  ಬೀರುತ್ತದೆ. ಉತ್ತಮ ಕೆಲಸಗಳ ಕುರಿತು ಹೆಚ್ಚು ಪ್ರಚಾರ ನೀಡಿದರೆ ಸಾಮಾಜಿಕ ವ್ಯವಸ್ಥೆ ಸರಿಯಾದ ದಾರಿಯಲ್ಲಿ ಸಾಗುತ್ತದೆ ಎಂದು ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌. ಶಂಕರ‌ಮೂರ್ತಿ ಹೇಳಿದರು.

ಅವರು ಸೋಮವಾರ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದಲ್ಲಿ  ಜಾತ್ರೆಯ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಾಧಕರಿಗೆ ಸಮ್ಮಾನ ನೆರವೇರಿಸಿ ಮಾತನಾಡಿದರು. ದೇಗುಲಗಳು ಈ ರಾಷ್ಟ್ರದ ಸಾಂಸ್ಕೃತಿಕ ವೈಭವದ ಪ್ರತೀಕ. ಸಾಲಿಗ್ರಾಮ ಕ್ಷೇತ್ರ ದೇಶಕ್ಕೆ ಮಾದರಿಯಾಗುವಂತ ಧಾರ್ಮಿಕ ಕ್ಷೇತ್ರ ಎಂದು ಹೇಳಿದ ಅವರು ಕಾರ್ಯಕ್ರಮದಲ್ಲಿ ಸಮ್ಮಾನಿತರಾದ ಸಮಾಜ ಸೇವಕ ವಿಶು ಶೆಟ್ಟಿ ಸೇರಿದಂತೆ ಎಲ್ಲರ ಕೊಡುಗೆಯನ್ನು ಶ್ಲಾಘಿಸಿದರು. ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಕೆ. ಅನಂತಪದ್ಮನಾಭ ಐತಾಳ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದರು. 

ಈ ಸಂದರ್ಭ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ, ವಿಶ್ರಾಂತ ಅಡ್ವೊಕೇಟ್‌ ಜನರಲ್‌ ಉದಯ ಹೊಳ್ಳ, ಮಂಗಳೂರು ಕರಾವಳಿ ಸಮೂಹ ಸಂಸ್ಥೆಯ ಅಧ್ಯಕ್ಷ ಗಣೇಶ ರಾವ್‌, ಕಾರ್ಪೊರೇಶನ್‌ ಬ್ಯಾಂಕ್‌ ಮಹಾ ಪ್ರಬಂಧಕ ಬಾಲಕೃಷ್ಣ ಅಲ್ಸೆ, ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯೆ ಸುಮಂಗಲಾ ಕೇಶವ ಐತಾಳ, ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಸಮ್ಮಾನಿಸಲಾಯಿತು.  ಕ್ರೀಡಾ ಸಾಧಕ ಕೃಷ್ಣ ದೇವಾಡಿಗ ಹಾಗೂ ಶೈಕ್ಷಣಿಕ ಸಾಧಕ ಡಾ| ಸ್ವಸ್ತಿಕ್‌ ಉಪಾಧ್ಯ ಅವರನ್ನು ಗೌರವಿಸಲಾಯಿತು.

ಆನೆಗುಡ್ಡೆ  ಶ್ರೀ ವಿನಾಯಕ ದೇಗುಲದ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆಯ ಅಧ್ಯಕ್ಷ ಪಿ. ವೆಂಕಟ್ರಾವ್‌ ಮುಂತಾದವರು ಶುಭ ಹಾರೈಸಿದರು. ದೇಗುಲದ ಆಡಳಿತ ಮಂಡಳಿ ಉಪಾಧ್ಯಕ್ಷ ಬಿ. ರಘುನಾಥ ಸೋಮಯಾಜಿ, ಖಜಾಂಚಿ ಪ್ರಸನ್ನ ತುಂಗ, ಸದಸ್ಯರಾದ ವೈ| ಸದಾರಮ ಹೇಳೆì, ಜಿ. ಚಂದ್ರಶೇಖರ ಉಪಾಧ್ಯ, ಎಂ.ಕೆ. ಅಶೋಕ್‌ ಕುಮಾರ್‌ ಹೊಳ್ಳ, ಬಿಜೂರು ಬಲರಾಮ ಮಯ್ಯ, ಪಿ. ಸುಬ್ರಹ್ಮಣ್ಯ ಹೇಳೆì ಉಪಸ್ಥಿತರಿದ್ದರು. ಆಡಳಿತ ಮಂಡಳಿಯ ಕಾರ್ಯದರ್ಶಿ ಜಿ. ಮಂಜುನಾಥ ಮಯ್ಯ ಸ್ವಾಗತಿಸಿ, ಶಿಕ್ಷಕ ಶ್ರೀಧರ್‌ ಶಾಸ್ತ್ರಿ, ಸತೀಶ್‌ ಐತಾಳ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.