ಬಾವಿಗೆ ಬಿದ್ದು ಚಿರತೆ ಸಾವು; ರಕ್ಷಣೆಗೆ ಅರಣ್ಯಾಧಿಕಾರಿಗಳು ವಿಫಲ?


Team Udayavani, Feb 11, 2018, 10:07 PM IST

Cheeta-Dead-11-2.jpg

ಕೋಟ: ಚಿರತೆಯೊಂದು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬಿಲ್ಲಾಡಿ ಗ್ರಾ.ಪಂ. ವ್ಯಾಪ್ತಿಯ ಶಿರೂರುಮೂಕೈ ಭಂಡಾರ್ಥಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ನಾಯಿ ಅಥವಾ ಯಾವುದೋ ಕಾಡು ಪ್ರಾಣಿಯನ್ನು ಅಟ್ಟಿಸಿಕೊಂಡು ಬಂದು ಬಾವಿಗೆ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾತ್ರಿ ಈ ಘಟನೆ ನಡೆದಿದ್ದು ಸ್ಥಳೀಯರೋರ್ವರು ಬೆಳಗ್ಗೆ ಚಿರತೆ ನೀರಿನಲ್ಲಿ ಈಜಾಡುತ್ತಿರುವುದನ್ನು ಗಮನಿಸಿ ಅರಣ್ಯಾಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ.

ರಕ್ಷಣೆಗೆ ಅರಣ್ಯಾಧಿಕಾರಿಗಳು ವಿಫಲ
ಸ್ಥಳೀಯ ಅರಣ್ಯ ವೀಕ್ಷಕರು ಮೊದಲಿಗೆ ಸ್ಥಳಕ್ಕಾಗಮಿಸುವಾಗ ಚಿರತೆ ನೀರಿನಲ್ಲಿ ಈಜಾಡುತ್ತಿತ್ತು ಆದರೆ ಅಧಿಕಾರಿಗಳಲ್ಲಿ ಯಾವುದೇ ರಕ್ಷಣಾ ಸಾಮಗ್ರಿಗಳು ಇರಲಿಲ್ಲ, ಅನಂತರ ಅವರು ಮೇಲಧಿಕಾರಿಗಳಿಗೆ ವಿಚಾರ ತಿಳಿಸಿದ್ದು ಅವರ ತಂಡ ಸ್ಥಳಕ್ಕಾಗಮಿಸುವಾಗ ಚಿರತೆ ನೀರಲ್ಲಿ ಮುಳುಗಿ ಮೃತಪಟ್ಟಿದೆ. ಅಧಿಕಾರಿಗಳ ಎದುರಲ್ಲೇ ಚಿರತೆ ಸಾವನ್ನಪ್ಪಿದ ಕುರಿತು ಸ್ಥಳದಲ್ಲಿ ಉಪಸ್ಥಿತರಿದ್ದ ನೂರಾರು ಮಂದಿ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ ಹಾಗೂ ಕೊನೆಯ ಪಕ್ಷ ಅಧಿಕಾರಿಗಳು, ಸ್ಥಳೀಯರು ಯಾರಾದರೂ ಒಂದು  ಮರದ ತುಂಡನ್ನು ಬಾವಿಗೆ ಇಳಿಬಿಟ್ಟಿದ್ದರೂ ಚಿರತೆ ಬದುಕುವ ಸಾಧ್ಯತೆ ಇತ್ತು ಎಂದು ತಿಳಿಸಿದ್ದಾರೆ. ಚಿರತೆ ಸಾವನ್ನಪ್ಪುವ ಕೊನೆಯ ಕ್ಷಣದ ವೀಡಿಯೊವೊಂದನ್ನು ಸ್ಥಳೀಯರೋರ್ವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಅದು ಮನಕಲಕುವಂತಿದೆ. ಮುಳುಗು ತಜ್ಞ ಮಂಜುನಾಥ ನಾಯ್ಕ ಚಿರತೆಯ ಕಳೇಬರವನ್ನು ನೀರಿನಿಂದ ಮೇಲೆತ್ತಿದರು. ಅನಂತರ ಅರಣ್ಯಾಧಿಕಾರಿಗಳು ಶವಪರೀಕ್ಷೆ ಮುಂತಾದ ಕಾನೂನು ಪ್ರಕಿಯೆಯನ್ನು ನೆರವೇರಿಸಿದರು.

ಅಧಿಕಾರಿಗಳ ಸ್ಪಷ್ಟನೆ
ಕಿರಿಯ ಅಧಿಕಾರಿಗಳು ಮೊದಲಿಗೆ ಸ್ಥಳಕ್ಕೆ ಭೇಟಿ ನೀಡಿದ್ದು ಅವರಲ್ಲಿ ಯಾವುದೇ ರಕ್ಷಣಾ ಪರಿಕರ ಇರಲಿಲ್ಲ. ಅನಂತರ ನಮಗೆ ವಿಚಾರ ತಿಳಿಸಿದ್ದಾರೆ. ನಾವು ರಕ್ಷಣಾ ಪರಿಕರದೊಂದಿಗೆ ತೆರಳಲು ಸಿದ್ಧರಾದಾಗ ಚಿರತೆ ಸಾವನ್ನಪ್ಪಿದ ವಿಚಾರ ತಿಳಿಸಿದರು. ಮುಳುಗುತಜ್ಞರ ಸಹಾಯದಿಂದ ಕಳೇಬರವನ್ನು ಮೇಲಕ್ಕೆತ್ತಿದ್ದೇವೆ. ಮೃತ ಚಿರತೆಗೆ ಸುಮಾರು 3ವರ್ಷ ಪ್ರಾಯದಾಗಿದ್ದು  ಮುಂದಿನ ಕಾನೂನು ಕ್ರಮ ಕೈಗೊಂಡಿದ್ದೇವೆ ಎಂದು ಅರಣ್ಯಾಧಿಕಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ.

ಶಂಕರನಾರಾಯಣ ಅರಣ್ಯಾಧಿಕಾರಿಗಳಾದ ಸಂತೋಷ, ಹರೀಶ್‌, ವೀರಣ್ಣ, ರಾಕೇಶ ಮತ್ತು ಸಿಬಂದಿ ಹಾಗೂ ಬಿಲ್ಲಾಡಿ ಗ್ರಾ.ಪಂ. ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ  ಮೊದಲಾದವರು ಉಪಸ್ಥಿತರಿದ್ದರು. ಶವ ಪರೀಕ್ಷೆಯ ಸಂದರ್ಭ ವಲಯ ಅರಣ್ಯಾಧಿಕಾರಿ ಗೋಪಾಲ ಉಪಸ್ಥಿತರಿದ್ದರು.

ಬಿಲ್ಲಾಡಿ – ವಂಡಾರು ಭಾಗದಲ್ಲಿ ವ್ಯಾಪಕ ಚಿರತೆ ಹಾವಳಿ
ಬಿಲ್ಲಾಡಿ ಹಾಗೂ ವಂಡಾರು ಗ್ರಾಮಗಳಿಗೆ ಹಲವು ವರ್ಷಗಳಿಂದ ‌ಚಿರತೆ ಹಾಗೂ ಇನ್ನಿತರ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗಿದೆ. ಇತ್ತೀಚೆಗೆ ಇಲ್ಲಿನ ನಿವಾಸಿಗಳಿಗೆ ಪ್ರತಿದಿನವೆಂಬಂತೆ ಚಿರತೆಯ ದರ್ಶನವಾಗುತ್ತಿದ್ದು ಈ ಭಾಗದ ಹಲವು ಜಾನುವಾರುಗಳು, ನಾಯಿ ಮುಂತಾದ ಸಾಕುಪ್ರಾಣಿಗಳು ಕಾಡುಪ್ರಾಣಿಗಳಿಗೆ ಆಹಾರವಾಗುತ್ತಿವೆ. ಆದ್ದರಿಂದ ಕಾಡುಪ್ರಾಣಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ  ಸಮರ್ಪಕ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Kollur ಮೇಲ್‌ ಹೊಸೂರು: 1.50 ಲಕ್ಷ ರೂ.ಮೌಲ್ಯದ ಅಡಿಕೆ ನಾಪತ್ತೆ; ದೂರು

Kollur ಮೇಲ್‌ ಹೊಸೂರು: 1.50 ಲಕ್ಷ ರೂ.ಮೌಲ್ಯದ ಅಡಿಕೆ ನಾಪತ್ತೆ; ದೂರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.