ಬಿಸಿಲ ತಾಪದಿ ಬೆಂಡಾಗುವ ಪ್ರಾಣಿ-ಪಕ್ಷಿಗಳಿಗೆ ಬೇಕಿದೆ ನೀರಿನಾಸರೆ


Team Udayavani, Mar 13, 2018, 6:25 AM IST

1203kota2e.jpg

ಕೋಟ: ಇದೀಗ ಬೇಸಿಗೆಯ ಬಿಸಿಲ ತಾಪಕ್ಕೆ ಭೂಮಿ ಕೆಂಡದಂತೆ ಸುಡುತ್ತಿದೆ. ಎಲ್ಲಾ ಜೀವಿಗಳಿಗೂ ನೀರಿನ ಕೊರತೆ ಎದುರಾಗುತ್ತಿದೆ. ಇಂತಹ ಸಂದರ್ಭ ಮನುಷ್ಯ ಎಷ್ಟೇ ಕಷ್ಟವಾದರು ನೀರು ದಕ್ಕಿಸಿಕೊಳ್ಳುತ್ತಾನೆ. ಆದರೆ ಪ್ರಾಣಿ-ಪಕ್ಷಿಗಳ ಪಾಡು ಹೇಳತೀರದು.ಅವುಗಳು ನೀರು ಸಿಗದೆ ಕೆಲವೊಮ್ಮೆ ಸಾವನ್ನಪ್ಪುತ್ತವೆ. ಆದ್ದರಿಂದ ಇವುಗಳ ದಾಹ ನೀಗುವ ಕುರಿತು ಮನುಷ್ಯ ಯೋಚಿಸಬೇಕಿದೆ.

ಸಾಸ್ತಾನ ಮಿತ್ರರು ಎನ್ನುವ ಸಾಮಾಜಿಕ ಸಂಘಟನೆ ಕಳೆದ ವರ್ಷದಿಂದ ಈ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದು, ಈ ಬಾರಿ ಮೂಕ-ಸ್ಪಂದನೆ-2018 ಎನ್ನುವ ಅಭಿಯಾನ ಕೈಗೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿರಂತರ ಪ್ರಚಾರ ನೀಡುತ್ತಿದೆ.

ಹೇಗೆ ನೆರವಾಗಬಹುದು?
ಮನೆಯ ಸಮೀಪ ಜಮೀನು ಅಥವಾ ಇತರ ಸ್ಥಳಗಳಲ್ಲಿ  ತೊಟ್ಟಿ ನಿರ್ಮಿಸಿ, ಪಾತ್ರೆಗಳಲ್ಲಿ ನೀರು ಸಂಗ್ರಹಿಸಿಟ್ಟರೆ ಪ್ರಾಣಿ-ಪಕ್ಷಿಗಳು ತಮ್ಮ ಜಲದಾಹ ತೀರಿಸಿಕೊಳ್ಳುತ್ತವೆ ಹಾಗೂ ಪಕ್ಷಿಗಳಿಗೆ ಮನೆಯ ಛಾವಣಿಯ ಮೇಲೆ, ಇತರ ತೆರೆದ ಸ್ಥಳಗಳಲ್ಲಿ ಬಾಟಲಿ, ಕುಂಡಗಳಲ್ಲಿ ನೀರು ಹಾಕಿದಬಹುದು.  ನೀರಿನ  ಜತೆಗೆ ಸ್ವಲ್ಪ ಅಕ್ಕಿ ಮುಂತಾದ ಆಹಾರ ಧಾನ್ಯಗಳನ್ನು ಇಟ್ಟರೆ ಪಕ್ಷಿಗಳಿಗೆ  ಅನುಕೂಲವಾಗುತ್ತದೆ.

ಒಟ್ಟಾರೆ ಪ್ರಾಣಿ-ಪಕ್ಷಿಗಳಿಗೆ ಪ್ರತಿದಿನ ನೀರಿಡುವ ಮೂಲಕ ಅವುಗಳ ದಾಹತಣಿಸಬಹುದು, ಜೀವ ಉಳಿಸಬಹುದು.
ಎಲ್ಲರೂ ಕೂಡ ಈ ಕುರಿತು ಕಾರ್ಯಪ್ರವೃತ್ತ ರಾದರೆ ಸಾವಿರಾರು ಜೀವಗಳನ್ನು ಉಳಿಸಬಹುದು ಎನ್ನುವುದು ಪ್ರಕೃತಿ ಪ್ರೇಮಿಗಳ ಅನಿಸಿಕೆಯಾಗಿದೆ.

ಪುಣ್ಯ ಲಭಿಸುತ್ತದೆ
ಬೇಸಗೆಯಲ್ಲಿ  ಕೆಲವೊಮ್ಮೆ ನೀರು ಸಿಗದೆ  ಪ್ರಾಣಿ-ಪಕ್ಷಿಗಳು ಮನೆಯೊಳಗೆ ಲಗ್ಗೆ ಇಡುತ್ತವೆ. ಇನ್ನೂ ಕೆಲವೊಮ್ಮೆ ಜಲದಾಹ ಅತಿಯಾದರೆ ಸಾವನ್ನಪ್ಪುತ್ತವೆ.ಇವುಗಳಿಗೆ ಆಹಾರ-ನೀರು ನೀಡುತ್ತ ಬಂದರೆ ಕ್ರಮೇಣ ನಮ್ಮ ಜತೆ ಸ್ನೇಹ ಸಂಪಾದಿಸುತ್ತವೆ. ಪ್ರತಿ  ನಿತ್ಯ ಮನೆಗೆ ಭೇಟಿ ನೀಡಿ ಸಲುಗೆ ಬೆಳೆಸಿಕೊಳ್ಳುತ್ತವೆ. ಒಂದು  ವೇಳೆ ನೀರು ಖಾಲಿಯಾದರೆ ತಮ್ಮದೇ ಭಾಷೆಯಲ್ಲಿ ಕರೆ ನೀಡುತ್ತವೆ. ಮಾಡಿದ ಉಪಕಾರಕ್ಕೆ  ಪ್ರತಿಯಾಗಿ ನಾವು ಹೇಳಿದಂತೆ ನಡೆದುಕೊಳ್ಳುತ್ತವೆ. ಹಸಿದವನಿಗೆ ಊಟ, ಬಾಯಾರಿದವನಿಗೆ ನೀರು ನೀಡಿದರೆ ಪುಣ್ಯ ಲಭಿಸುತ್ತದೆ ಎನ್ನುವ ಮಾತೊಂದಿದೆ. ಅದೇ ರೀತಿ ಪ್ರಾಣಿ-ಪಕ್ಷಿಗಳ ನೀರು-ಆಹಾರ ನೀಡಿದರೆ  ಪುಣ್ಯ ಲಭಿಸುತ್ತದೆ ಎನ್ನುವುದು ಈ ಕುರಿತು ಕಾರ್ಯಪೃವತರಾದವರ ಅನಿಸಿಕೆ.

ಆಯ್ದ ಫೋಟೋಗಳಿಗೆ ಬಹುಮಾನ
ಬೇಸಗೆಯಲ್ಲಿ  ನೀರು ಸಿಗದೆ ಪ್ರಾಣಿ-ಪಕ್ಷಿಗಳು ಸಾವನ್ನಪ್ಪುತ್ತವೆ. ಪ್ರತಿ ಮನೆಗಳಲ್ಲೂ ಇವುಗಳಿಗೆ  ಕುಡಿಯುವ ನೀರಿನ ವ್ಯವಸ್ಥೆ ಮಾಡಿದರೆ ಹಲವು ಜೀವಗಳನ್ನು ಕಾಪಾಡಬಹುದು. ಈ ಕುರಿತು ಸಾಸ್ತಾನ ಮಿತ್ರರು ಎನ್ನುವ ನಮ್ಮ ಸಂಘಟನೆ ಮೂಕಸ್ಪಂದನೆ ಎನ್ನುವ ಅಭಿಯಾನ ನಡೆಸುತ್ತಿದ್ದು, ಪ್ರಾಣಿ-ಪಕ್ಷಿಗಳಿಗೆ ನೀರನ್ನು ನೀಡಿ ಅದನ್ನು ಕುಡಿಯುವಾಗ ಪೋಟೋ ತೆಗೆದು ಹೆಸರು ವಿಳಾಸ ಬರೆದು 9620417570, 8197407570 ಸಂಖ್ಯೆಗೆ ವಾಟ್ಸಾಪ್‌ ಮಾಡಿದರೆ ಆಯ್ದ ಪೋಟೋಗಳಿಗೆ ಬಹುಮಾನ ನೀಡಲಾಗುವುದು ಹಾಗೂ ಫೇಸ್‌ಬುಕ್‌ನಲ್ಲಿ ಅದನ್ನು ಪ್ರಕಟಿಸಲಾಗುವುದು.

– ವಿನಯ ಚಂದ್ರ ಸಾಸ್ತಾನ, ಮುಖ್ಯಸ್ಥರು ಸಾಸ್ತಾನ ಮಿತ್ರರು ಸಂಘಟನೆ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.