ಹೊಸಾಡು ನದಿ ತೀರದ ಕಾಂಡ್ಲಾ ಸರ್ವನಾಶ
Team Udayavani, Mar 18, 2018, 6:50 AM IST
ಮರವಂತೆ: ಹೊಸಾಡು- ಬಂಟ್ವಾಡಿ ಸಂಪರ್ಕ ಸೇತುವೆ ಸಮೀಪ ಸೌಪರ್ಣಿಕಾ ನದಿ ತೀರದಲ್ಲಿ ಸಮೃದ್ಧವಾಗಿದ್ದ ಕಾಂಡ್ಲಾ ಗಿಡಗಳು ರಸ್ತೆ ನಿರ್ಮಾಣದಲ್ಲಿ ಸರ್ವನಾಶವಾಗಿದೆ. ಹೊಳೆ ಪರಂಬೋಕು ಜಾಗ ಅತಿಕ್ರಮಿಸಿ ಖಾಸಗಿಯವರು ಈ ರಸ್ತೆ ನಿರ್ಮಿಸುತ್ತಿದ್ದು, ಈ ವೇಳೆ ಹೊಳೆ ಬದಿಯಲ್ಲಿದ್ದ ಕಾಂಡ್ಲಾಗಳನ್ನು ನಾಶಪಡಿಸಿದ್ದಾಗಿ ಸಾರ್ವಜನಿಕರು ದೂರು ನೀಡಿದ್ದಾರೆ.
ಅಧಿಕಾರಿಗಳ ಭೇಟಿ
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಮತ್ತು ಕಂದಾಯ ಇಲಾಖಾಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ನಾಶ ಪಡಿಸಿದ ಕಾಂಡ್ಲಾ ವೃಕ್ಷಗಳ ಬಾಬ್ತು ದಂಡ ಶುಲ್ಕ ವಿಧಿಸಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಶರತ್ ಶೆಟ್ಟಿ ತಿಳಿಸಿದ್ದಾರೆ.
ಅತಿಕ್ರಮಣ ಅಬಾಧಿತ
ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖಾಧಿಕಾರಿಗಳ ತಾತ್ಕಾಲಿಕ ಕ್ರಮಕ್ಕೆ ಕ್ಯಾರೇ ಎನ್ನದೇ ಮಾ. 17ರಂದು ಬೆಳಗ್ಗೆ ಇಲ್ಲಿನ ನದಿತೀರದಲ್ಲಿ ರಸ್ತೆ ನಿರ್ಮಾಣ ಕಾರ್ಯ ಮತ್ತೆ ಮುಂದುವರಿದಿದೆ. ಜೆಸಿಬಿ ಮೂಲಕ ಕಾಂಡ್ಲಾ ಗಿಡಗಳನ್ನು ಮಣ್ಣಿನಡಿ ಹೂತು ರಸ್ತೆ ನಿರ್ಮಿಸುತ್ತಿರುವುದು ಕಂಡುಬಂದಿದೆ. ಇದರಿಂದಾಗಿ ಸ್ಥಳೀಯರು ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಸಂಪೂರ್ಣ ಅಸಮಾ ಧಾನಗೊಂಡಿದ್ದು, ಅಧಿಕಾರಿಗಳೂ ಇದರಲ್ಲಿ ಶಾಮೀಲಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಧಿಕಾರಿಗೆ ದೂರು
ಸ್ಥಳೀಯಾಧಿಕಾರಿಗಳು ಕಾಂಡ್ಲಾ ರಕ್ಷಣೆಗೆ ಸಂಪೂರ್ಣ ವಿಫಲರಾಗಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಆಗ್ರಹಿಸಿ ಸ್ಥಳೀಯ ನಿವಾಸಿ ಸುರೇಂದ್ರ ಅವರು ಉಡುಪಿ ಡಿಸಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ