ಕುಂದಾಪುರ : 5 ಕಡೆಗಳಲ್ಲಿ ಚೆಕ್ಪೋಸ್ಟ್ ಆರಂಭ
Team Udayavani, Mar 31, 2018, 7:20 AM IST
ಕುಂದಾಪುರ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯ ಸಂಬಂಧ ಚುನಾವಣಾ ಆಯೋಗದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತ್ತು ಚುನಾವಣೆಯನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಸಲು ಸಹಕಾರಿಯಾಗುವಂತೆ ಕುಂದಾಪುರ ಉಪವಿಭಾಗದ 5 ಕಡೆಗಳಲ್ಲಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ.
ಬೈಂದೂರು ತಾಲೂಕಿನ ಶಿರೂರು, ಕೊಲ್ಲೂರು, ಕುಂದಾಪುರ ತಾಲೂಕಿನ ಕಂಡ್ಲೂರು, ಹಾಲಾಡಿ, ಹೊಸಂಗಡಿಯಲ್ಲಿ ಅಕ್ರಮ ಮದ್ಯ / ಬಿಯರ್ ತಯಾರಿಕೆ / ದಾಸ್ತಾನು/ ಸಾಗಾಣಿಕೆಯನ್ನು ನಿಯಂತ್ರಿಸುವ ಸಲುವಾಗಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ.
ಇನ್ನು ರಾಷ್ಟ್ರೀಯ ಹೆದ್ದಾರಿ 66 ರ ತೆಕ್ಕಟ್ಟೆ ಪೇಟೆಯಲ್ಲಿ ಕೋಟ ಪೊಲೀಸ್ ಠಾಣೆಯ ವತಿಯಿಂದ ಚೆಕ್ ಪೋಸ್ಟ್ ಆರಂಭಿಸಲಾಗಿದೆ.
ಈ ಚೆಕ್ ಪೋಸ್ಟ್ಗಳು ನಿರಂತರ 24 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಿದ್ದು, ಹೊರಬರುವ ಹಾಗೂ ಹೊರ ಹೋಗುವ ಎಲ್ಲ ವಾಹನಗಳನ್ನು ತಪಾಸಣೆ ನಡೆಸಿಯೇ ಕಳುಹಿಸಲಾಗುತ್ತಿದೆ ಎಂದು ಕುಂದಾಪುರ ಉಪ ವಿಭಾಗದ ಡಿವೈಎಸ್ಪಿ ಬಿ.ಪಿ. ದಿನೇಶ್ ಕುಮಾರ್ “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ