ಕುಂದಾಪುರ : ಬೀದಿ ಬದಿ ಹಣ್ಣು ವ್ಯಾಪಾರಸ್ಥರ ಅಂಗಡಿ ತೆರವು


Team Udayavani, Apr 10, 2018, 7:30 AM IST

0904kde5.jpg

ಕುಂದಾಪುರ: ಪುರಸಭೆ ವ್ಯಾಪ್ತಿಯ ಮೀನು ಮಾರುಕಟ್ಟೆ ಬಳಿಯ ಬೀದಿಬದಿ ಹಣ್ಣುಗಳ ವ್ಯಾಪರಸ್ಥರ ಗೂಡಂಗಡಿಗಳ ತೆರವು ಕಾರ್ಯ ಸೋಮವಾರ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ ನಡೆಯಿತು. 

ರಸ್ತೆ ಅಗಲೀಕರಣ ಹಾಗೂ ಸರಿಯಾದ ಚರಂಡಿ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಮೀನು ಮಾರುಕಟ್ಟೆ ಬಳಿ ಇರುವ ಬೀದಿ ಬದಿ ಹಣ್ಣುಗಳ ವ್ಯಾಪಾರಸ್ಥರ ಗೂಡಂಗಡಿಗಳನ್ನು ತೆರವು ಮಾಡಿ, ಮೀನು ಮಾರುಕಟ್ಟೆಯ ಕಟ್ಟಡದಲ್ಲೇ ಬದಲಿ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಲಾಗಿದೆ. 

ಒಟ್ಟು 13 ಮಂದಿ ಹಣ್ಣುಗಳ ವ್ಯಾಪಾರಸ್ಥರಿದ್ದು, ಅವರು ಕಳೆದ ಹಲವು ವರ್ಷಗಳಿಂದಲೂ ಅಲ್ಲಿ ವ್ಯಾಪಾರವನ್ನು ನಡೆಸುತ್ತಿದ್ದರು. 6 ವರ್ಷದ ಹಿಂದೆ ಅಲ್ಲಿ ಶೀಟು ಹಾಕಿ ವ್ಯವಸ್ಥೆ ಮಾಡಿಕೊಡಲಾಗಿತ್ತು. ಆದರೆ ಅದು ರಸ್ತೆಗೆ ತಾಗಿಕೊಂಡೇ ಇರುವ ಕಾರಣ ಅಲ್ಲಿ ರಸ್ತೆ ಅಗಲೀಕರಣ ಮಾಡಬೇಕು ಎನ್ನುವ ಆಗ್ರಹ ಕೇಳಿ ಬಂತು. 

ಚರಂಡಿ ಸಮಸ್ಯೆಗೂ ಮುಕ್ತಿ..!
ಮೀನು ಮಾರುಕಟ್ಟೆ ಬಳಿ ಚರಂಡಿ ವ್ಯವಸ್ಥೆ ಸರಿ ಇಲ್ಲದ ಕಾರಣ ಇಲ್ಲಿ ದುರ್ನಾತ ಬೀರುತ್ತಿದೆ. ಮೀನು ಮಾರುಕಟ್ಟೆಯ ಕೊಳಚೆ ನೀರು ಹೋಗಲು ಪರ್ಯಾಯ ವ್ಯವಸ್ಥೆಯೇ ಇಲ್ಲ. ಈಗ ಗೂಡಂಗಡಿಗಳನ್ನು ತೆರವುಗೊಳಿಸಿದ್ದರಿಂದ ಚರಂಡಿ ಕಾರ್ಯವನ್ನು ಕೂಡ ಪೂರ್ಣಗೊಳಿಸಿದರೆ ಎಲ್ಲರಿಗೂ ಅನುಕೂಲವಾಗಲಿದೆ ಎನ್ನುವುದು ಸ್ಥಳೀಯರ ಅಭಿಪ್ರಾಯ.

ಮೀನು ವ್ಯಾಪಾರಸ್ಥರ ತಕರಾರು
ಈ ಗೂಡಂಗಡಿಗಳನ್ನು ತೆರವು ಮಾಡಿದ್ದು, ಪಕ್ಕದಲ್ಲೇ ಇರುವ ಮೀನು ಮಾರುಕಟ್ಟೆಯ ಒಂದು ಬದಿಯಲ್ಲಿ ಹಣ್ಣಿನ ವ್ಯಾಪಾರಸ್ಥರಿಗೆ ವ್ಯವಸ್ಥೆ ಮಾಡಲಾಗಿದೆ. ಆದರೆ ಇದಕ್ಕೆ ಮೀನು ವ್ಯಾಪಾರಸ್ಥರು ತಕಾರರು ತೆಗೆದಿದ್ದು, ನಮಗೆ ಹೋಗಲು 3 ಕಡೆಗಳಲ್ಲಿ ದಾರಿ ಬೇಕು. ಅದಕ್ಕೆ ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ತೊಂದರೆ ಆಗದಂತೆ ವ್ಯವಸ್ಥೆ ಮಾಡಿ
ಇನ್ನು ಪುರಸಭೆಯ ಬೀದಿ ಬದಿ ವ್ಯಾಪರಸ್ಥರ ಸಂಘದ ಮುಖ್ಯಸ್ಥೆ ಚಿಕ್ಕು ಅವರು “ಉದಯವಾಣಿ’ಯೊಂದಿಗೆ ಮಾತನಾಡಿ, ನಾವು ಹಲವು ವರ್ಷಗಳಿಂದ ಇಲ್ಲೇ ಇದ್ದೇವು. ಈಗ ರಸ್ತೆಗಾಗಿ ನಮ್ಮನ್ನು ಹಿಂದಿನ ಮಾರುಕಟ್ಟೆಯ ಕಟ್ಟಡಕ್ಕೆ ಕಳುಹಿಸಿದ್ದಾರೆ. ಅದಕ್ಕೆ ಮೀನು ಮಾರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎರಡೂ ಕಡೆಯವರಿಗೂ ತೊಂದರೆಯಾಗದ ರೀತಿಯಲ್ಲಿ ಪುರಸಭೆ ಕ್ರಮಕೈಗೊಳ್ಳಲಿ ಎಂದು ಅವರು ವಿನಂತಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.