ಕೊಲ್ಲೂರಿನಲ್ಲಿ ಲೋ ವೋಲ್ಟೇಜ್ ಸಮಸ್ಯೆ 


Team Udayavani, Apr 16, 2018, 6:20 AM IST

Low-Voltage-Bulb–(1)-new.jpg

ಕೊಲ್ಲೂರು: ಕೊಲ್ಲೂರು ಪರಿಸರದಲ್ಲಿ ಲೋವೋಲ್ಟೇಜ್ ಸಮಸ್ಯೆಯಿದ್ದು, ಪರಿಹಾರಕ್ಕಾಗಿ ಇಲಾಖೆ ಮೊರೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ.  

ವರ್ಷದ ಎಲ್ಲ ತಿಂಗಳಲ್ಲೂ ಇಲ್ಲಿ ಲೋವೋಲ್ಟೇಜ್ ಸಮಸ್ಯೆ ಇದ್ದು, ಕಳೆದ 6 ದಿನಗಳಿಂದಲೂ ಸಮಸ್ಯೆ ತೀವ್ರವಾಗಿದೆ. ವಾರದಲ್ಲಿ 2 ದಿನ ದುರಸ್ತಿಗೆಂದು ದಿನವಿಡೀ ವಿದ್ಯುತ್‌ ಕಡಿತಗೊಳಿಸಿದರೆ, ಬಾಕಿ ದಿನಗಳಲ್ಲಿ ಸಾಮಾನ್ಯ ಬಲ್ಬ್ಗಳೂ ಬೆಳಗದಷ್ಟು ವೋಲ್ಟೇಜ್ ಇಲ್ಲದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಇಲಾಖೆಗೆ ದೂರು ನೀಡಿದರೆ, ಕೇವಲ ಭರವಸೆ ಮಾತ್ರ ಸಿಕ್ಕಿದ್ದು, ಸಮಸ್ಯೆ ಬಗೆಹರಿಯದೇ ಇನ್ನೂ ಹಾಗೇ ಉಳಿದಿದೆ ಎನ್ನುವುದು ಜನರ ಅಳಲು. 

ಪಂಪ್‌, ಉಪಕರಣ ಚಾಲೂ ಇಲ್ಲ!
ಲೋವೋಲ್ಟೇಜ್ ಸಮಸ್ಯೆಯಿಂದ ಕೃಷಿಕರ ಪಂಪ್‌ಸೆಟ್‌ಗಳು, ಕೊಲ್ಲೂರಿನಲ್ಲಿ ಅಂಗಡಿ ಮುಂಗಟ್ಟುಗಳ ಮಾಲಕರಿಗೆ ಸಮಸ್ಯೆಯಾಗಿದೆ. ಆದ್ದರಿಂದ ಅವರು ಜನರೇಟರ್‌ ಮೊರೆ ಹೋಗಿದ್ದು, ಹೆಚ್ಚಿನ ಖರ್ಚಿನಿಂದಾಗಿ ಹೊಡೆತ ಬಿದ್ದಿದೆ.
 
ವಿಳಂಬವಾಗುವ ಸಾಧ್ಯತೆ 
ಹಾಲ್ಕಲ್‌ನಲ್ಲಿ ನಿರ್ಮಾಣಗೊಳ್ಳಲಿರುವ ಮೆಸ್ಕಾಂ ಸಬ್‌ಸ್ಟೇಷನ್‌ಗೆ ಗುದ್ದಲಿ ಪೂಜೆ ನಡೆದಿದ್ದರೂ, ಕಾಮಗಾರಿ ಆಮೆನಡಿಗೆಯಲ್ಲಿ ಸಾಗಿದೆ. 11 ಕೆ.ವಿ. ಲೈನ್‌ ಬೈಂದೂರು ಅಥವಾ ತಲ್ಲೂರಿನಿಂದ ಕೊಲ್ಲೂರಿಗೆ ಜೋಡಿಸಬೇಕಾಗಿದ್ದು 30 ಕಿ.ಮೀ. ದೂರ ವ್ಯಾಪ್ತಿಯ ಪ್ರದೇಶ ಪೂರ್ಣಗೊಳಿಸುವುದು ವಿಳಂಬವಾಗುವ ಸಾಧ್ಯತೆ ಇದೆ. ಇದಕ್ಕೆ 2 ವರ್ಷ ಬೇಕಾಗಬಹುದು ಎಂಬ ಅಂದಾಜಿದೆ. ಇದರ ಟೆಂಡರನ್ನು ಮಂಗಳೂರಿನ ಜ್ಯೋತಿ ಕನ್‌ಸ್ಟ್ರಕ್ಷನ್‌ ಅವರಿಗೆ ಟೆಂಡರ್‌ ನೀಡಲಾಗಿದೆ. ಕುಡಿಯುವ ನೀರಿಗೂ ಇದರಿಂದ ಸಮಸ್ಯೆಯಾಗಿದೆ ಎಂದು ಸ್ಥಳೀಯರಾದ ರಮೇಶ್‌ ಗಾಣಿಗ ಹೇಳುತ್ತಾರೆ. 

ಜನರೇಟರ್‌ಗೆ ಶರಣು
ಲೋ ವೋಲ್ಟೇಜ್ ಸಮಸ್ಯೆ ಎದುರಾಗಿರುವ ಕೊಲ್ಲೂರಿನ ಅಂಗಡಿ ಮುಂಗಟ್ಟುಗಳವರು ಇನ್‌ವರ್ಟರ್‌ ಹಾಗೂ ಜನರೇಟರ್‌ಗೆ ಶರಣು ಹೋಗಬೇಕಾಗಿದ್ದು ದುಬಾರಿ ವೆಚ್ಚ ತೆತ್ತು ವ್ಯವಹಾರ ನಡೆಸುವುದು ಕಷ್ಟಸಾಧ್ಯ. ಸಬ್‌ಸ್ಟೇಷನ್‌ ಕೂಡಲೇ ಆರಂಭಿಸಿ ಲೋವೋಲ್ಟೇಜ್  ಸಮಸ್ಯೆ ಬಗೆಹರಿಸಬೇಕು. 

 - ಗಿರೀಶ್‌ ಶೆಟ್ಟಿ, ಉದ್ಯಮಿ, ಕೊಲ್ಲೂರು

ಅಡುಗೆ ಮಾಡಲಾಗುತ್ತಿಲ್ಲ
ದೈನಂದಿನ ಅಗತ್ಯಕ್ಕೆ  ಬಳಕೆ ಆಗಬೇಕಾದ ವಿದ್ಯುತ್‌ ಉಪಕರಣಗಳು ಲೋವೋಲ್ಟೇಜ್ನಿಂದ ಸ್ತಬ್ಧವಾಗಿವೆ. ಅಡುಗೆ ಮಾಡಲೂ ಸಾಧ್ಯವಾಗುತ್ತಿಲ್ಲ. 

 - ಲಕ್ಷ್ಮೀದೇವಿ 
ಗೃಹಿಣಿ, ಕೊಲ್ಲೂರು

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.