ಪುರಸಭೆ: ಕಸದ ಲಾರಿಯಲ್ಲೂ ಮತದಾನ ಜಾಗೃತಿ!


Team Udayavani, Apr 26, 2018, 7:05 AM IST

2504kdlm2ph1.jpg

ಕುಂದಾಪುರ: ಇಲ್ಲಿನ ಪುರಸಭೆಯ ಕಸದ ಲಾರಿಗಳಲ್ಲೂ ಮತದಾನ ಜಾಗೃತಿಯ ಫ್ಲೆಕ್ಸ್‌ ನೇತಾಡುತ್ತಿದೆ. ಚುನಾವಣೆ ಎಂಬ ಹಬ್ಬ ಬಂತು ಎಂದು ಯಕ್ಷಗಾನದ ಹಾಡು ಕೇಳುತ್ತಿದೆ. ಮತದಾನ ಜಾಗೃತಿಗೆ ಎಲ್ಲೆಡೆ ವಿವಿಧ ಪ್ರಯತ್ನ ನಡೆಯುತ್ತಿದೆ. ಚುನಾವಣಾ ಆಯೋಗವಂತೂ ಮತದಾನ ಪ್ರಮಾಣ ಹೆಚ್ಚವಾಗಲು ಇನ್ನಿಲ್ಲದ ಜಾಗೃತಿ ಅಭಿಯಾನ ನಡೆಸುತ್ತಿದೆ. ಇದಕ್ಕೆ  ಪೂರಕವಾಗಿ ಜಿಲ್ಲಾಡಳಿತ ವಿವಿಧ ರೀತಿಯಲ್ಲಿ ಮತದಾನ ಮಾಡಿ ಎಂದು ಅರಿವು ಮೂಡಿಸುತ್ತಿದೆ. ನಗರದ ವಿವಿಧ ಭಾಗಗಳಲ್ಲಿ ಕನ್ನಡ ಹಾಗೂ ಕುಂದಗನ್ನಡದಲ್ಲಿ ಮತದಾನ ಮಾಡುತ್ತೇನೆ, ಏನೇ ಕೆಲಸ ಇದ್ದರೂ ಮತದಾನ ಮಾಡಿ ಎಂಬಿತ್ಯಾದಿ ಹೋರ್ಡಿಂಗ್‌ಗಳಿವೆ. 

ಮತಯಂತ್ರ ಹಾಗೂ ವಿವಿ ಪ್ಯಾಟ್‌ ಕುರಿತು ಜಾಗೃತಿ ಅಭಿಯಾನ ನಡೆಯುತ್ತಿದೆ. ಪುರಸಭಾ ವ್ಯಾಪ್ತಿಯ ವಿವಿಧೆಡೆ ಮತಯಂತ್ರಗಳ ಪ್ರಾತ್ಯಕ್ಷಿಕೆ, ಅಣಕು ಮತದಾನ ಮೂಲಕ ಮತಯಂತ್ರ ಮೇಲೆ ಸಂಶಯ ಇದ್ದರೆ ಹೋಗಲಾಡಿಸುವ ಯತ್ನ ನಡೆಯುತ್ತಿದೆ. ಯಂತ್ರದ ಮೂಲಕ ಈ ಹಿಂದೆ ಮತದಾನ ನಡೆದಿದ್ದರೂ ಹೊಸಬರಿಗೆ ಮತಯಂತ್ರದ ಮೂಲಕ ಮತದಾನ ಮಾಡುವುದು ಹೇಗೆ ಎಂಬ ಮಾಹಿತಿ ಬೇಕಿದ್ದರೆ, ಹಳಬರಿಗೆ ಮತಯಂತ್ರದ ಮೂಲಕ ಮತದಾನ ಮಾಡುವುದು ಹೇಗೆ ಎಂದು ನೆನಪಿಲ್ಲದಿದ್ದರೆ ಎಂದು ಜನರಿದ್ದಲ್ಲಿಗೆ ತೆರಳಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. 

ಇಷ್ಟೇ ಅಲ್ಲ ಸಂಘ ಸಂಸ್ಥೆಗಳು ಅವಶ್ಯವಿದೆ ಎಂದು ತಿಳಿಸಿದರೆ ಅವರು ತಿಳಿಸಿದ ಸ್ಥಳಕ್ಕೆ ಅಧಿಕಾರಿಗಳು ತೆರಳಿ ಮತಯಂತ್ರದ ಪ್ರಾತ್ಯಕ್ಷಿಕೆ ನೀಡಲು ಸಿದ್ಧರಾಗಿದ್ದಾರೆ. ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ಹೇಳಲು 24 ತಾಸು ಕಾರ್ಯನಿರ್ವಹಿಸುವ ಕಂಟ್ರೋಲ್‌ ರೂಂನ್ನು ಸಹಾಯಕ ಆಯುಕ್ತರ ಕಚೇರಿಯಲ್ಲಿ ತೆರೆಯಲಾಗಿದೆ. ಪುರಸಭೆಯಲ್ಲೂ ಪ್ರತ್ಯೇಕ ಕಂಟ್ರೋಲ್‌ ರೂಂ ತೆರೆಯಲಾಗಿದೆ.

ಇದಿಷ್ಟೂ ಸಾಲದು ಎಂಬಂತೆ ಇಲ್ಲಿನ ಪುರಸಭೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ಕಸದ ವಾಹನಗಳು ನಗರದ ಎಲ್ಲೆಡೆ ಸಂಚರಿಸುತ್ತವೆ. ಮನೆ ಮನೆಗೆ ತೆರಳುತ್ತವೆ. ಆಗಲೂ ಜನರಿಗೆ ಕಸ ಹಾಕುವಾಗ ಮತದಾನದ ಜಾಗೃತಿ ಮೂಡಬೇಕೆಂದು ಅದರಲ್ಲೂ ಮತದಾನ ಜಾಗೃತಿ ಫ‌ಲಕ ಅಳವಡಿಸಲಾಗಿದೆ. ಮೈಕ್‌ ವ್ಯವಸ್ಥೆ ಇರುವ ವಾಹನಗಳಲ್ಲಿ ತೆಂಕುತಿಟ್ಟು ಯಕ್ಷಗಾನ ಭಾಗವತ ಪಟ್ಲ ಸತೀಶ್‌ ಶೆಟ್ಟಿ ಅವರು ಯಕ್ಷಗಾನೀಯವಾಗಿ ಹಾಡಿರುವ ಮಂಗಳೂರು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಂ. ಆರ್‌. ರವಿ ರಚಿಸಿದ ಹಬ್ಬ ಬಂತು ಹಬ್ಬ ಚುನಾವಣಾ ಹಬ್ಬ ಎಂಬ ಹಾಡನ್ನು ಕೇಳಿಸಲಾಗುತ್ತಿದೆ. 

ಇದು ಸದ್ಯದ ಮಟ್ಟಿಗೆ ಹೊಸ ಪ್ರಯೋಗವೂ ಹೌದು. ಜಿಲ್ಲೆಯ ಯಾವುದೇ ಪುರಸಭೆಗಳು ಇಂತಹ ಪ್ರಯತ್ನ ಮಾಡಿಲ್ಲ. ಈ ಮೊದಲು ಕಸದ , ಸ್ವತ್ಛತೆಯ ಕುರಿತು ಜಾಗೃತಿ ಮೂಡಿಸಲಾಗುತ್ತಿತ್ತು. ಈಗ ಸಾಮೂಹಿಕವಾಗಿ ಮತದಾನ ಜಾಗೃತಿ ಉಂಟು ಮಾಡಲಾಗುತ್ತಿದೆ.

ಹಾಡು ಕೇಳುವ ವ್ಯವಸ್ಥೆ
ಜನರಿಗೆ ಮತದಾನದ ಕುರಿತು ಜಾಗೃತಿ ಉಂಟಾಗಬೇಕು.  ಮತದಾನ ಪ್ರಮಾಣದಲ್ಲಿ ಹೆಚ್ಚಳವಾಗಬೇಕು ಎಂದು ನಾವು ಈ ಪ್ರಯೋಗ ಮಾಡಿದ್ದೇವೆ. 3 ಟ್ರಾಕ್ಟರ್‌, 3 ಏಸ್‌ ವಾಹನ ಸೇರಿದಂತೆ ಒಟ್ಟು 8 ವಾಹನಗಳಲ್ಲಿ ಫ‌ಲಕ ಅಳವಡಿಸಿ ಹಾಡು ಕೇಳಿಸುವ ವ್ಯವಸ್ಥೆ ಮಾಡಿದ್ದೇವೆ. 
– ವಾಣಿ ಬಿ. ಆಳ್ವ,ಮುಖ್ಯಾಧಿಕಾರಿ

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.