ಭಿಕ್ಷೆ ಬೇಡುತ್ತಿದ್ದ ಹುಡುಗಿಯ ವಿಶೇಷ ಶ್ರೇಣಿ
Team Udayavani, May 2, 2018, 12:29 PM IST
ತೆಕ್ಕಟ್ಟೆ (ಬೇಳೂರು): ಸುಮಾರು ಒಂಬತ್ತು ವರ್ಷಗಳ ಹಿಂದೆ ಕುಂದಾಪುರ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದ ಕಾವೇರಿ ಎನ್ನುವ ಬಾಲಕಿಯನ್ನು ಕುಂದಾಪುರದ ಕೆಲವು ಯುವಕರ ಸಹಕಾರದಿಂದ ಬೇಳೂರು ಸ್ಫೂರ್ತಿಧಾಮಕ್ಕೆ ದಾಖಲಿಸಿದ್ದರು. ಅಲ್ಲಿ ಹೊಸ ಜೀವನ ಪಡೆದುಕೊಂಡ ಕಾವೇರಿ ಪ್ರಸಕ್ತ ಸಾಲಿನ ಪಿಯುಸಿ ಕಲಾ ವಿಭಾಗದ ಪರೀಕ್ಷೆಯಲ್ಲಿ 533 ಅಂಕ ಗಳಿಸಿ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಎಲ್ಲರಿಗೂ ಮಾದರಿಯಾಗಿದ್ದಾಳೆ.
ಒಂಬತ್ತು ವರ್ಷಗಳ ಹಿಂದೆ ಸಂಚಾಲಕ ಡಾ| ಕೇಶವ ಕೋಟೇಶ್ವರ ಅವರು ಬಾಲಕಿಯನ್ನು ಸಂಸ್ಥೆಗೆ ದಾಖಲಿಸಿಕೊಂಡಿದ್ದರು. ಕಲಿಕೆಗೆ ಪೂರಕವಾಗುವ ನಿಟ್ಟಿನಿಂದ ಕೆದೂರು ಸರಕಾರಿ ಪ್ರೌಢಶಾಲೆಗೆ ದಾಖಲಿಸಿದ್ದರು. ಕಾವೇರಿ ಎಸೆಸೆಲ್ಸಿಯಲ್ಲಿಯೂ ಉತ್ತಮ ಅಂಕವನ್ನು ಗಳಿಸಿದ್ದಳು. ಮುಂದೆ ಈಕೆ ತೆಕ್ಕಟ್ಟೆಯ ಪ. ಪೂ. ಕಾಲೇಜಿನಲ್ಲಿ ದಾಖಲಾಗಿ ಕಲಾ ವಿಭಾಗದಲ್ಲಿ ವ್ಯಾಸಂಗ ನಡೆಸಿದ್ದಳು. ಕಲಿಕೆಯ ಜತೆಗೆ ಇನ್ನಿತರ ಪಾಠೇತರ ಚಟುವಟಿಕೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಉಪನ್ಯಾಸಕರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದಳು.
ಮುಂದಿನ ದಿನಗಳಲ್ಲಿ ಎಲ್ಎಲ್ಬಿ ಕಲಿಯಬೇಕು ಎನ್ನುವ ಹಂಬಲವಿದೆ. ಸಮಾಜದ ಕಟ್ಟಕಡೆಯ ಜನರ ಬದುಕುವ ಹಕ್ಕು,ಸಮಾನತೆ ಹಾಗೂ ನ್ಯಾಯವನ್ನು ಒದಗಿಸುವ ಕಾರ್ಯದಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಬೇಕು ಎನ್ನುವ ಬಯಕೆ ನನ್ನದು.
– ಕಾವೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್