ಒಳಚರಂಡಿಯೇ ಇಲ್ಲ,ಇರುವಲ್ಲಿ ನಿರ್ವಹಣೆ ಕೊರತೆ
Team Udayavani, May 25, 2018, 6:00 AM IST
ಕೋಟ: ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಹೆಚ್ಚಿನ ಕಡೆಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆಯೇ ಇಲ್ಲ. ಇನ್ನು ಇರುವಲ್ಲಿ ನಿರ್ವಹಣೆಗೆ ಆಸಕ್ತಿ ತೋರುತ್ತಿಲ್ಲ!
ಯೋಜಿತ ಕಾಮಗಾರಿ ಇಲ್ಲ
ಇಲ್ಲಿನ ಕಾರಂತ ಬೀದಿ, ಕಾರ್ಕಡ, ಪಾರಂಪಳ್ಳಿ, ಗುಂಡ್ಮಿ, ಚಿತ್ರಪಾಡಿ ಮುಂತಾದ ಕಡೆಗಳಲ್ಲಿ ಹಲವಾರು ಮೀಟರ್ಗಳಷ್ಟು ಒಳಚರಂಡಿ ವ್ಯವಸ್ಥೆ ಇದೆ. ಇದನ್ನು ಮೂರು-ನಾಲ್ಕು ವರ್ಷಗಳಿಗೊಮ್ಮೆ ಸಮಸ್ಯೆ ಎದುರಾದಗ ಹೂಳೆತ್ತಲಾಗುತ್ತದೆ. ಪ್ರತಿ ವರ್ಷ ಪೌರಕಾರ್ಮಿಕರ ಮೂಲಕ ಎಲ್ಲಾ ಕಡೆಯ ಪೊದೆಗಳನ್ನು ಸ್ವಚ್ಚಗೊಳಿಸಲಾಗುತ್ತದೆ. ಇದನ್ನು ಹೊರತು ಪಡಿಸಿ ದೊಡ್ಡ ಮಟ್ಟದ ಅನುದಾನ ಬಳಸಿಕೊಂಡು ಯಾವುದೇ ಕಾಮಗಾರಿಗಳನ್ನು ನಡೆಸಲಾಗುವುದಿಲ್ಲ.
ಚರಂಡಿ ನಿರ್ಮಿಸಲು ಜಾಗವಿಲ್ಲ
ಇಲ್ಲಿನ ಹೆಚ್ಚಿನ ಕಡೆಗಳಲ್ಲಿ ರಸ್ತೆಯಿಂದ ಕೆಳಗೆ ಒಂದು ಫೀಟ್ ಜಾಗವಿಲ್ಲದಂತೆ ಆಕ್ರಮಿಸಿಕೊಂಡು ಮನೆಯ ಕಾಂಪೌಂಡ್ಗಳು ನಿರ್ಮಾಣಗೊಂಡಿದೆ. ಹೀಗಾಗಿ ಒಳಚರಂಡಿ ನಿರ್ಮಾಣಕ್ಕೆ ಅವಕಾಶ ವಿಲ್ಲವಾಗಿದೆ. ಎಲ್ಲರೂ ತಮ್ಮ-ತಮ್ಮ ಮನೆಗಳಿಗೆ ನೀರು ನುಗ್ಗದಂತೆ ಜಾಗೃತೆ ಮಾಡಿಕೊಳ್ಳುತ್ತಿದ್ದು ಕೊನೆಗೆ ನೀರು ರಸ್ತೆಯ ಮೇಲೆ ನಿಲ್ಲುವ ಪರಿಸ್ಥಿತಿ ಇದೆ.
ಹೆದ್ದಾರಿಯಲ್ಲಿ ದೊಡ್ಡ ಸಮಸ್ಯೆ
ರಾಷ್ಟ್ರೀಯ ಹೆದ್ದಾರಿಯಲ್ಲೂ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸಾಲಿಗ್ರಾಮ ಪೇಟೆ, ಸಾಸ್ತಾನ, ಗುಂಡ್ಮಿ, ಕೋಟ ಮುಂತಾದ ಕಡೆಗಳಲ್ಲಿ ಮುಖ್ಯ ರಸ್ತೆಯಿಂದ ಕೆಳಗಿಳಿದರೆ ಕೊಳಚೆ ನೀರಿನ ಅಭಿಷೇಕವಾಗುತ್ತದೆ. ಕಳೆದ ಬಾರಿ ಕೃಷಿ ಭೂಮಿ, ವಾಣಿಜ್ಯ ಕಟ್ಟಡ, ಮನೆಗಳಿಗೆ ನೀರು ನುಗ್ಗಿದ ಪ್ರಕರಣಗಳು ನಡೆದಿವೆ.
ಸೂಕ್ತ ಚರಂಡಿ ವ್ಯವಸ್ಥೆ ಬೇಕು
ಪ.ಪಂ. ವ್ಯಾಪ್ತಿಯ ಕಾರ್ಕಡ ಮುಂತಾದ ಕಡೆಗಳಲ್ಲಿ ಹಾಗೂ ರಾ.ಹೆ.ಯಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಮೇಲೆ ನೀರು ನಿಲ್ಲುವ ಪರಿಸ್ಥಿತಿ ಇದೆ. ಇದರಿಂದ ಪಾದಚಾರಿಗಳು, ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಅಗತ್ಯ ಕಡೆಗಳಲ್ಲಿ ಒಳಚರಂಡಿ ನಿರ್ಮಾಣ ಹಾಗೂ ನಿರ್ವಹಣೆ ಕುರಿತು ಸಂಬಂಧಪಟ್ಟವರು ಗಮನಹರಿಸಬೇಕಿದೆ.
– ಮಂಜುನಾಥ ನಾೖರಿ ಕಾರ್ಕಡ, ಸ್ಥಳೀಯ ನಿವಾಸಿ
ದೊಡ್ಡ ಸಮಸ್ಯೆ ಇಲ್ಲ
ಸಾಲಿಗ್ರಾಮದಲ್ಲಿ ಹೆಚ್ಚೇನು ಒಳಚರಂಡಿ ವ್ಯವಸ್ಥೆ ಇಲ್ಲ. ಇದುವರೆಗೆ ಮಳೆಗಾಲದಲ್ಲಿ ದೊಡ್ಡ ಸಮಸ್ಯೆ ಕೂಡ ಕಾಣಿಸಿಕೊಂಡಿಲ್ಲ. ಅಗತ್ಯವಿದ್ದಾಗ ಚರಂಡಿ ಹೂಳೆತ್ತುವ ಕುರಿತು ಕ್ರಮಕೈಗೊಳ್ಳಲಾಗುತ್ತದೆ. ಪ್ರತಿ ವರ್ಷ ಪೌರಕಾರ್ಮಿಕರನ್ನು ಬಳಸಿಕೊಂಡು ಪೊದೆಗಳನ್ನು ಸ್ವಚ್ಚಗೊಳಿಸಲಾಗುತ್ತದೆ. ಈ ಬಾರಿ ಕೂಡ ಚಾಲನೆ ನೀಡಲಾಗಿದೆ.
– ಶ್ರೀಪಾದ್ ಪುರೋಹಿತ್,ಮುಖ್ಯಾಧಿಕಾರಿಗಳು ಪ.ಪಂ.
– ಆರ್ಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್