ಬೈಂದೂರು: ಸಾರ್ವಜನಿಕರ ಪ್ರತಿಭಟನೆ
Team Udayavani, Jun 8, 2018, 7:55 AM IST
ಬೈಂದೂರು: ಗ್ರಾಮಾಂತರ ಭಾಗಗಳಿಗೆ ಸಂಚರಿಸುತ್ತಿದ್ದ ಸರಕಾರಿ ಬಸ್ಸುಗಳನ್ನು ಹಠಾತ್ ಸ್ಥಗಿತಗೊಳಿಸಿದ್ದಕ್ಕೆ ವಿರೋಧಿಸಿ ವಿದ್ಯಾರ್ಥಿಗಳು ಸಾರ್ವಜನಿಕರು ವಿವಿಧ ಸಂಘ ಸಂಸ್ಥೆಗಳ ಮುಖಂಡರು ಬೈಂದೂರು ವಿಶೇಷ ತಹಶೀಲ್ದಾರರ ಕಛೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಯಡ್ತರೆ ಗ್ರಾ.ಪಂ ಮಾಜಿ ಅಧ್ಯಕ್ಷ ನಾಗರಾಜ ಶೆಟ್ಟಿ ಮಾತನಾಡಿ, ಮೇಲಾಧಿಕಾರಿಗಳು ಖಾಸಗಿ ಒತ್ತಡಕ್ಕೆ ಮಣಿದು ಬಸ್ ಸಂಚಾರ ಸ್ಥಗಿತಗೊಳಿಸಿರುವುದು ಸಮಂಜಸವಲ್ಲ.ಬಸ್ ಸಂಪರ್ಕ ಪುನರಾರಂಭಿಸದಿದ್ದರೆ ಮಳೆಯಲ್ಲಿ ನೆನೆದು ಪ್ರತಿಭಟನೆ ನಡೆಸುತ್ತೇವೆ ಎಂದರು.ತಹಶೀಲ್ದಾರಿಗೆ ಮನವಿ ನೀಡಿದ ಬಳಿಕ ಶಾಸಕರ ಕಚೇರಿಗೆ ಜಾಥಾ ಮೂಲಕ ತೆರಳಿ ಮನವಿ ನೀಡಲಾಗಿದೆ.
ಅಧಿಕಾರಿಗಳಿಗೆ ಸೂಚನೆ
ಹಠಾತ್ ಬಸ್ ನಿಲುಗಡೆಗೊಳಿಸುವುದರ ಕುರಿತು ಕೆ.ಎಸ್.ಆರ್.ಟಿ.ಸಿ ಡಿಸಿಯೊಂದಿಗೆ ಮಾತನಾಡಿದ್ದೇನೆ. ನಾಳೆಯ ಒಳಗೆ ವ್ಯವಸ್ಥೆ ಸರಿಯಾಗದಿದ್ದರೆ ಬೈಂದೂರಿನ ಜನರೊಂದಿಗೆ ಬೀದಿಗೆ ಇಳಿದು ಹೋರಾಡುತ್ತೇನೆ ಎಂದು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.
ನಮ್ಮ ಕೈಯಲ್ಲಿ ಏನೂ ಇಲ್ಲ
ಕೆ.ಎಸ್.ಆರ್.ಟಿ.ಸಿ, ಡಿಸಿ ಮಾತನಾಡಿ, ಖಾಸಗಿ ವ್ಯಕ್ತಿಗಳು ಲೋಕಾಯುಕ್ತರಿಗೆ ದೂರು ನೀಡಿರುವುದರಿಂದ 19ನೇ ತಾರೀಖೀನ ಒಳಗೆ ನ್ಯಾಯಾಲಯಕ್ಕೆ ಕೆ.ಎಸ್.ಆರ್.ಟಿ.ಸಿ.ಯಿಂದ ವರದಿ ನೀಡಬೇಕು. ಹೀಗಾಗಿ ಇಲಾಖೆಯಿಂದ ಏನು ಮಾಡಲು ಸಾಧ್ಯವಿಲ್ಲ.ಆರ್.ಟಿ.ಒ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರು ಸಹ ಕ್ರಮ ಕೈಗೊಂಡಿಲ್ಲ ಎನ್ನುತ್ತಾರೆ.
ಬಿಜೆಪಿ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಜಿ.ಪಂ. ಸದಸ್ಯ ಶಂಕರ ಪೂಜಾರಿ, ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷ, ಚಿತ್ತರಂಜನ ಹೆಗ್ಡೆ, ರವೀಂದ್ರ ಶೆಟ್ಟಿ ಹೊನೆRàರಿ ಮೊದಲಾದವರಿದ್ದರು.