ಹಿರಿಯ ಜೀವದ ಕನಸು ಕೊನೆಗೂ ನನಸಾಯಿತು
Team Udayavani, Jun 10, 2018, 7:00 AM IST
ಕೋಟ: ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಕಾರ್ಕಡ ತೆಂಕ ಹೋಳಿ ನಿವಾಸಿ ಕಾಳಿಂಗ ಹೊಳ್ಳ ಎನ್ನುವ 75 ವರ್ಷದ ಹಿರಿಯ ನಾಗರಿಕರು ತನ್ನ ಮನೆ ಸಮೀಪದ ರಸ್ತೆ ಅಭಿವೃದ್ಧಿಗಾಗಿ ಸಾಕಷ್ಟು ಹೋರಾಟ ನಡೆಸಿ ಪ್ರಯೋಜನವಾಗದಿದ್ದಾಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದೀಗ ಪ್ರಧಾನಿ ಕಾರ್ಯಾಲಯದಿಂದ ಬಂದ ಸೂಚನೆಯಂತೆ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರ ಅನುದಾನದಿಂದ ರಸ್ತೆ ಅಭಿವೃದ್ಧಿಗೊಂಡಿದೆ.
ಈ ರಸ್ತೆ ಅಭಿವೃದ್ಧಿಗೆ 2011ರಲ್ಲಿ ಸಾಲಿಗ್ರಾಮ ಪ.ಪಂ. ಅನುದಾನ ಬಿಡುಗಡೆ ಮಾಡಿತ್ತು. ಆಗ ಹೊಳ್ಳರು ತನ್ನ ಪಟ್ಟಾ ಸ್ಥಳವನ್ನು ರಸ್ತೆ ನಿರ್ಮಾಣಕ್ಕಾಗಿ ಬಿಟ್ಟುಕೊಟ್ಟಿದ್ದರು. ಆದರೆ ಶೇ.75 ಮಾತ್ರ ಕಾಮಗಾರಿ ನಡೆಸ ಲಾಯಿತು. ಇದರಿಂದಾಗಿ ಕಾಳಿಂಗ ಹೊಳ್ಳರ ಮನೆ ಹಾಗೂ ಹತ್ತಿರದ ಹಲವು ಮನೆ ಗಳಿಗೆ ಸಂಪರ್ಕ ಸಾಧ್ಯವಾಗಲಿಲ್ಲ. ಹೀಗಾಗಿ ಮಳೆಗಾಲದಲ್ಲಿ ಸಾಕಷ್ಟು ಸಮಸ್ಯೆ ಯಾಗುತಿತ್ತು. ದ್ವಿಚಕ್ರ ವಾಹನ ಕೂಡ ಸಂಚರಿಸಲು ಸಾಧ್ಯವಾಗುತ್ತಿರಲಿಲ್ಲ.
ಈ ಕುರಿತು ಕಾಳಿಂಗ ಹೊಳ್ಳರು 2011ರಿಂದ ಜಿಲ್ಲಾಧಿಕಾರಿ, ಎ.ಸಿ.ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರು. ಪ್ರಯೋಜನವಾಗದಿದ್ದಾಗ ತಹಶೀಲ್ದಾರ್, ಲೋಕಾಯುಕ್ತ, ಎ.ಸಿ.ಬಿ.ಗೂ ದೂರು ನೀಡಿದ್ದರು. ಅನಂತರ ಕೊನೆಗೆ ಪ್ರಧಾನಿ ಅವರಿಗೆ ಪತ್ರ ಬರೆದರು. ಹೊಳ್ಳರ ಈ ಹೋರಾಟ ಕುರಿತು ಉದಯವಾಣಿ ಹಲವು ಬಾರಿ ವರದಿ ಮಾಡಿತ್ತು.
ಎರಡು ಬಾರಿ ಮನವಿ
ಪ್ರಧಾನಿಯವರಿಗೆ ಮೊದಲ ಬಾರಿ ಮನವಿ ಸಲ್ಲಿಸಿದಾಗ ಪರಿಶೀಲಿಸುವಂತೆ ಜಿಲ್ಲಾಡಳಿತ ಹಾಗೂ ಸ್ಥಳೀಯಾಡಳಿತಕ್ಕೆ ಸೂಚನೆ ಬಂದಿತ್ತು. ಅದರಂತೆ ಸ್ಥಳೀಯಾಡಳಿತ ಪರಿಶೀಲಿಸಿತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಇದರಿಂದ ಬೇಸರಗೊಂಡ ಹೊಳ್ಳರು ಮತ್ತೆ ಪ್ರಧಾನಿಗೆ ಪತ್ರ ಬರೆದರು. ಆಗ ಸಮಸ್ಯೆಯನ್ನು ಗಂಭೀರವಾಗಿ ಪರಿಶೀಲಿಸುವಂತೆ ಮತ್ತೂಮ್ಮೆ ಆದೇಶ ಬಂತು.
ಅನಂತರ ಹೊಳ್ಳರು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಭೇಟಿ ಮಾಡಿ ಪ್ರಧಾನಿ ಕಾರ್ಯಾಲಯದಿಂದ ಬಂದ ಪತ್ರವನ್ನು ತೋರಿಸಿದರು. ತತ್ಕ್ಷಣ ಕಾರ್ಯಪ್ರವೃತ್ತರಾದ ವಿ.ಪ. ಸದಸ್ಯರು 1.50ಲಕ್ಷ ರೂ. ಅನುದಾನ ನೀಡಿ ರಸ್ತೆ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಇದೀಗ ಹೊಳ್ಳರ ಮನೆಯ ತನಕ ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ ಸ್ವಲ್ಪ ಕಾಮಗಾರಿ ಬಾಕಿ ಇದ್ದು ಹೆಚ್ಚುವರಿ ಅನುದಾನ ನೀಡುವ ಭರವಸೆ ಕೂಡ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
Jadkal: ಬೈಕ್ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ