ಚಂದದ ರಸ್ತೆಯಿದೆ, ಚರಂಡಿಯೇ ಇಲ್ಲ!


Team Udayavani, Jun 10, 2018, 6:15 AM IST

0906kdlm11ph1.jpg

ಕುಂದಾಪುರ: ಮುಖ್ಯ ರಸ್ತೆಯ ಸೂರ್ನಳ್ಳಿ ರಸ್ತೆ ಮೂಲಕ ಸಾಗಿದಂತೆ ಉತ್ತಮವಾದ ರಸ್ತೆಯೇನೋ ಸಿಗುತ್ತದೆ. ವಾಹನ ಸಂಚಾರವೂ ಇರುತ್ತದೆ. ಜನವಸತಿ ಇರುವ ಪ್ರದೇಶದಲ್ಲಿ ಮಳೆ ಬಂದರೆ ಕಷ್ಟ. 

ಉತ್ತಮ ರಸ್ತೆಯಿದ್ದರೂ, ವಾಹನಗಳು ಬಂದರೆ ಪಾದಚಾರಿಗಳು ಒದ್ದೆಯಾಗು ವುದು ಖಚಿತ. ಇಲ್ಲಿ ನೀರು ಕಾಂಕ್ರೀಟ್‌ ರಸ್ತೆಯಲ್ಲೇ ಹೋಗಬೇಕಿದೆ. 

ಹೇಗಿದೆ ವಾರ್ಡ್‌?
ವಾರ್ಡ್‌ನ ರಸ್ತೆಗಳಲ್ಲಿ ಹೋಗು ತ್ತಿದ್ದಂತೆ ಕಾಣುತ್ತಿದ್ದುದು ಮಾತ್ರ ಚರಂಡಿಯಿಲ್ಲದ ರಸ್ತೆ. ವಾರ್ಡ್‌ ಎಷ್ಟೇ ಅಭಿವೃದ್ಧಿ ಯಾಗಿದ್ದರೂ, ಜನರಿಗೆ ಎಷ್ಟೇ ಉತ್ತಮ ಸೌಲಭ್ಯಗಳು, ಸೌಕರ್ಯಗಳು ದೊರೆತಿದ್ದರೂ ನೀರೆಲ್ಲ ರಸ್ತೆಯಲ್ಲಿಯೇ ಹರಿಯುವುದು ಕಾಣುತ್ತದೆ. ಇದು ಇಡೀ ವಾರ್ಡಿನ ಹೆಸರಿಗೆ ಒಂದು ಕಪ್ಪುಚುಕ್ಕೆ. ಇಲ್ಲಿ ಚರಂಡಿ ಮಾಡಲು ಅವಕಾಶವೇ ಇಲ್ಲದಂತೆ ರಸ್ತೆ ಆವರಿಸಿದೆ. ರಸ್ತೆಯ ಇಕ್ಕೆಲದಲ್ಲಿ ಕಂಪೌಂಡ್‌ ಗೋಡೆಗಳಿವೆ. ಹಾಗಾಗಿ ಚರಂಡಿ ಕೆಲಸ ಬಾಕಿ 
ಆಗಿರಬಹುದು. ಕಾಂಕ್ರೀಟ್‌ ರಸ್ತೆ ಮಾಡಿದ ಕಾರಣ ಕಾಂಕ್ರಿಟ್‌ ರಸ್ತೆಯಡಿ ಭಾಗದಲ್ಲಿ ಚರಂಡಿ ಮಾಡಿ ಅದರ ಮೇಲೆ ಗಟ್ಟಿ ಸ್ಲಾéಬ್‌ ಹಾಕುವ ಮೂಲಕ ನೀರಿನ ಸರಾಗ ಹರಿವಿಗೆ ವ್ಯವಸ್ಥೆ ಮಾಡಬಹುದಿತ್ತು. 

ಮಳೆ ಬಂದರೆ ಸಮಸ್ಯೆ 
ಚರಂಡಿ ಇಲ್ಲದ್ದರಿಂದ ನೀರು ಆಸುಪಾಸಿನ ಮನೆಗಳಿಗೆ ಬಾರದಂತೆ ತಡೆ ಇಲ್ಲ. ಮಳೆ ನೀರು ತಡೆಯಲು ನಿವಾಸಿಗಳಿಗೆ ಪ್ರಾರ್ಥನೆಯೊಂದಷ್ಟೇ ಇದೆ. ಇಲ್ಲಿ ಘನ ವಾಹನ ಸಂಚರಿಸುವುದಿಲ್ಲ. ಆದ್ದರಿಂದ ಚರಂಡಿಗೆ ಪರ್ಯಾಯ ವ್ಯವಸ್ಥೆ ಮಾಡಬಹುದಿತ್ತು ಎನ್ನುತ್ತಾರೆ ಸ್ಥಳೀಯರು. ಇದೇ ರಸ್ತೆಯಲ್ಲಿ ಮುಂದೆ ಸಾಗಿದಂತೆ ಆದಿಶಕ್ತಿ ಕಾಳಿ ದೇವಸ್ಥಾನವಿದೆ. ಅಲ್ಲಿಗೂ ಭಕ್ತರು ಆಗಮಿಸುತ್ತಾರೆ. ಆದರೆ ಮಳೆ ಬಂದರೆ ಇದೇ ತೊಂದರೆಯಾಗಿದೆ. ಇಲ್ಲಿನ ಆಡಳಿತ ಚರಂಡಿ ವ್ಯವಸ್ಥೆಗೆ ಅನುದಾನ ಬಿಡುಗಡೆ ಮಾಡುವ ಮೂಲಕ ಈ ಪ್ರದೇಶದ ಜನರ ಗೋಳು ನಿವಾರಿಸಬೇಕಿದೆ. 

ಜಾಗದ ಸಮಸ್ಯೆ
ನಾನು ಸುಮಾರು 20 ಮನೆಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದು ಕೊಂಡಿದ್ದೇನೆ. ಚರಂಡಿ ರಚನೆಗೆ ಅತಿಕ್ರಮಣವಾದ ಜಾಗದ ಸಮಸ್ಯೆ ಇದ್ದು ಜನರ ಸಹಕಾರವಿದ್ದರೆ ಕಾಮಗಾರಿ ನಡೆಸಲಾಗುವುದು.
– ನಾಗರಾಜ್‌ ಕಾಮಧೇನು, ವಾರ್ಡ್‌ ಸದಸ್ಯರು

ಚರಂಡಿ ಇಲ್ಲ
ರಸ್ತೆಯ ಎರಡೂ ಬದಿ ಚರಂಡಿ ಇಲ್ಲ. ಹಾಗಾಗಿ ಮಳೆ ನೀರು ಮನೆಯಂಗಳಕ್ಕೆ ಬರುತ್ತದೆ ಅಥವಾ ರಸ್ತೆಯಲ್ಲಿಯೇ ಹರಿದು ನಡೆದಾಡಲೂ ತ್ರಾಸ ಪಡುವಂತಾಗುತ್ತದೆ. ಸ್ವಲ್ಪ ಗಮನ ನೀಡಿದರೆ ಒಳಿತು. 
– ಜಯಂತಿ, ಸ್ಥಳೀಯರು

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.