ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕು ನೂತನ ಕಟ್ಟಡ


Team Udayavani, Jun 21, 2018, 6:00 AM IST

1306bas3.jpg

ಬಸ್ರೂರು : ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರಿನಲ್ಲಿ ಡಾ| ವಿದ್ಯಾ ಅವರು ಆರೋಗ್ಯಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದಂತೆ 12 ಮಂದಿ ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ಕೇಂದ್ರದಲ್ಲಿ ಉಳಿದೆಲ್ಲ ವ್ಯವಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ನರ್ಸ್‌ಗಳ ಕೊರತೆ ಕಂಡು ಬಂದಿದೆ. ಇದರಿಂದ ಚಿಕಿತ್ಸೆಗೆ ಸಮಸ್ಯೆಯಾಗುತ್ತಿದೆ. 

ಔಷಧ ದಾಸ್ತಾನಿದೆ
ಮಳೆಗಾಲದಲ್ಲಿ ಉಂಟಾಗುವ ಸಾಂಕ್ರಾ ಮಿಕ ಖಾಯಿಲೆಗಳಾದ ಮಲೇರಿಯಾ, ಅತಿಸಾರ ಮತ್ತಿತರ ರೋಗ ಗಳು ಹರಡದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಈಗಾಗಲೇ ಆರಂಭಗೊಂಡಿದೆ ಲಾರ್ವಾ ಸರ್ವೆ (ಸೊಳ್ಳೆಯ ಮರಿ) ಉತ್ಪಾದನೆಯಾಗದಂತೆ ಸೂಕ್ತ ಮುಂಜಾಗ್ರತೆ ವಹಿಸಲಾಗಿದೆ. ಮಳೆ ಗಾಲದಲ್ಲಿ ಹರಡಬಹುದಾದ ಕಾಯಿಲೆಗಳಿಗೆ ಆಸ್ಪತ್ರೆಯಲ್ಲಿ ಸಾಕಷ್ಟು ಔಷಧಿಗಳ ದಾಸ್ತಾನು ಇದೆ. ವೈದ್ಯರು ಸ್ಥಳೀಯರಾಗಿರುವುದರಿಂದ ಉತ್ತಮವಾಗಿ ಕಾರ್ಯನಿರ್ವಹಿಸಿತ್ತಿದ್ದು ತಿಂಗಳಿಗೆ 1,700 ರಿಂದ 1,800 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ಷಯ ರೋಗ, ಐದು ಮಾರಕ ರೋಗಗಳಿಗೆ ಪೆಂಟವಲೆಂಟ್‌ ಲಸಿಕೆ, ಪೋಲಿಯೋ ಲಸಿಕೆ, ದಡಾರ, ರುಬೆಲ್ಲಾ ರೋಗಗಳ ವಿರುದ್ಧ ಮತ್ತಿತರ ಲಸಿಕೆಗಳನ್ನು ಕ್ರಮ ಪ್ರಕಾರ ನೀಡಲಾಗುತ್ತಿದೆ.

ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೊಸ ಕಟ್ಟಡದ ಅವಶ್ಯಕತೆ ಕಂಡು ಬಂದಿದ್ದು ಈಗಾಗಲೇ ಈ ಬಗ್ಗೆ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.  ಈ ಹಿಂದೆ ಜನರಿಂದ ದೂರವಾಗುತ್ತಿರುವ ಬಸೂÅರು ಸರಕಾರಿ ಆಸ್ಪತ್ರೆ ಎನ್ನುವ ವರದಿಯನ್ನು ಪತ್ರಿಕೆ ಮಾಡಿತ್ತು ಎನ್ನುವುದು ಉಲ್ಲೇಖನೀಯ.

ಮನವಿ ನೀಡಲಾಗಿದೆ
ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಒಂದು ಉಪ ಕೇಂದ್ರ ಹಟ್ಟಿಕುದ್ರುವಿನಲ್ಲಿದ್ದು  ಅಲ್ಲಿ  ಸ್ಥಳಾವಕಾಶದ ಕೊರತೆ ಕಂಡು ಬಂದಾಗ  ಸ್ಥಳೀಯ ಶಾಲೆಯವರು ಸ್ಥಳದ ನೆರವನ್ನು ಕೊಟ್ಟಿದ್ದಾರೆ.ಇನ್ನು ಆರೋಗ್ಯ ಕೇಂದ್ರಕ್ಕೆ  ನೂತನ ಕಟ್ಟಡದ ಆವಶ್ಯಕತೆಯಿದ್ದು ಈ ಬಗ್ಗೆ ಈಗಾಗಲೇ ಹಿರಿಯ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಗಿದೆ.
– ಡಾ| ವಿದ್ಯಾ, ವೈದ್ಯಾಧಿಕಾರಿಗಳು 

ಉಪಕೇಂದ್ರಗಳು
ಒಳರೋಗಿಯಾಗಿ ಬೆಳಗ್ಗೆಯಿಂದ ಸಂಜೆಯವರೆಗೆ ದಾಖಲಾಗುವ ರೋಗಿಗಳಿಗೆ ಒಟ್ಟು ನಾಲ್ಕು ಹಾಸಿಗೆಗಳಿವೆ. ಈ ಆಸ್ಪತ್ರೆಗೆ ಆನಗಳ್ಳಿ, ಕೋಣಿ, ಕಂದಾವರ, ಹಟ್ಟಿಕುದ್ರುವಿನಲ್ಲಿ ಉಪಕೇಂದ್ರಗಳಿವೆ. ಅಲ್ಲಿಗೆ ಪಾಳಿಯ ಪ್ರಕಾರ ಬಸ್ರೂರು ಪ್ರಧಾನ ಕೇಂದ್ರದಿಂದ ವೈದ್ಯರು ಸಕಾಲದಲ್ಲಿ ತೆರಳಿ ರೋಗಿಗಳಿಗೆ ಶುಶ್ರೂಷೆ ನೀಡುತ್ತಿರುವುದು ಗಮನಾರ್ಹ.

ಆಸ್ಪತ್ರೆ ಸಂಪರ್ಕ: 8277505931

ಉತ್ತಮ  ಕಾರ್ಯ ನಿರ್ವಹಣೆ
ಪ್ರಸ್ತುತ ಈ ಆರೋಗ್ಯ ಕೇಂದ್ರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ಬಸೂÅರು ಆಸ್ಪತ್ರೆ ಮತ್ತೆ ಹತ್ತಿರವಾಗುತ್ತಿರುವುದು ಗಮನಾರ್ಹ.
– ರಾಮ ಪೂಜಾರಿ,ಬಸ್ರೂರು ನಿವಾಸಿ

– ದಯಾನಂದ ಬಳ್ಕೂರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.