ಫ್ಲೈ ಓವರ್‌: ಸಮಗ್ರ ವರದಿಗೆ ಆದೇಶ


Team Udayavani, Jun 23, 2018, 9:53 AM IST

flyover.jpg

ಕುಂದಾಪುರ: ಇನ್ನೂ ಪೂರ್ಣಗೊಳ್ಳದ ಫ್ಲೈ ಓವರ್‌ ಕಾಮಗಾರಿಯ ಸ್ಥಿತಿಗತಿ ಅಧ್ಯಯನ ಮಾಡಿ 10 ದಿನಗಳಲ್ಲಿ ಸಮಗ್ರ ವರದಿ ಕೊಡುವಂತೆ ಎನ್‌ಐಟಿಕೆ ಕಾಲೇಜಿನ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗ ಮುಖ್ಯಸ್ಥರಿಗೆ ಕುಂದಾಪುರ ಸಹಾಯಕ ಕಮಿಷನರ್‌ ಟಿ. ಭೂಬಾಲನ್‌ ಅವರು ಶುಕ್ರವಾರ ಆದೇಶ ನೀಡಿದ್ದಾರೆ.

ಇಲ್ಲಿನ ಮಿನಿ ವಿಧಾನಸೌಧದ ಕೋರ್ಟ್‌ ಹಾಲ್‌ನಲ್ಲಿ ಸಹಾಯಕ ಕಮಿಷನರ್‌ ಅವರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. 

ವಿಚಾರಣೆ ನಡೆಸುವ ಅಧಿಕಾರವಿದೆ
ಉಡುಪಿಯ ಕರಾವಳಿ ಬೈಪಾಸ್‌, ಪಡುಬಿದ್ರಿ, ಕುಂದಾ ಪುರ ಫ್ಲೆ „ಓವರ್‌ ಕಾಮಗಾರಿಯ ಗುತ್ತಿಗೆ ನವಯುಗ ಕಂಪೆನಿ ವಹಿಸಿಕೊಂಡಿದ್ದು ಏಳೆಂಟು ವರ್ಷಗಳಿಂದ ಫ್ಲೈ ಓವರ್‌ ಕಾಮಗಾರಿ ಮುಗಿಯದೇ, ಸಮಸ್ಯೆಗಳ ಆಗರವಾಗಿದೆ, ಸಂಚಾರ ವ್ಯವಸ್ಥೆ ಹದಗೆಡುತ್ತಿದೆ ಎಂದು ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಎಸಿಯವರು ಕಂಪೆನಿಗೆ ನೋಟಿಸ್‌ ನೀಡಿದ್ದರು. ಜೂ. 6ರಂದು ವಿಚಾರಣೆ ನಡೆಸಿದಾಗ ಕಂಪೆನಿ ಪರ ವಕೀಲರು ಹಾಜರಾಗಿ ಉತ್ತರಕ್ಕೆ ಅವಕಾಶ ಕೇಳಿದ್ದರು. ಶುಕ್ರವಾರ ನಡೆದ ವಿಚಾರಣೆಯಲ್ಲಿ ಕಂಪೆನಿ ಪರ ವಕೀಲರು, ಕಾಮಗಾರಿ ಕುರಿತು ತಗಾದೆಯೊಂದು ರಾಜ್ಯ ಉಚ್ಚ ನ್ಯಾಯಾಲಯದಲ್ಲಿದೆ. ಆದ್ದರಿಂದ ಎಸಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಮಾಡುವಂತಿಲ್ಲ ಎಂದರು. ಆದರೆ ಸಾರ್ವಜನಿಕ ಹಿತಾಸಕ್ತಿ ಮೇರೆಗೆ ಸೆಕ್ಷನ್‌ 133 ಅಡಿಯಲ್ಲಿ ನೋಟಿಸ್‌ ನೀಡಿದ್ದು ವಿಚಾರಣೆ ನಡೆಸುವ ಅಧಿಕಾರ ಇದೆ ಎಂದು ಎಸಿಯವರು ಹೇಳಿದರು. 

ವರದಿಗೆ ಸೂಚನೆ: ಎನ್‌ಐಟಿಕೆಯಿಂದ ಆಗಮಿಸಿದ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥರಿಗೆ ಮೂರೂ ಸ್ಥಳಗಳಿಗೆ ಭೇಟಿ ನೀಡಿ ಸ್ಥಿತಿಗತಿ ಕುರಿತು 10 ದಿನಗಳಲ್ಲಿ ಸಮಗ್ರ ವರದಿ ನೀಡುವಂತೆ ಆದೇಶ ಮಾಡಿದರು. ಹಾಗೂ ಕಂಪೆನಿಯವರು ಸೂಚಿಸುವ ಕಾಮಗಾರಿ ಕುರಿತು ವಿವರಣೆಗೆ ತಾಂತ್ರಿಕ ಸಹಾಯ ನೀಡುವಂತೆ ಸೂಚಿಸಿದರು.

ಹೊಸ ಕಾಮಗಾರಿ
ಬಸೂÅರು ಮೂರುಕೈಯಲ್ಲಿ ಅಂಡರ್‌ಪಾಸ್‌ ಮಾಡುವ ಕಾಮಗಾರಿ ಹೆಚ್ಚುವರಿ ಕಾಮಗಾರಿ, ಅಂತೆಯೇ ಕುಂದಾಪುರದ ಕಾಮಗಾರಿಯ ವಿನ್ಯಾಸ ಬದಲಾಗಿ ಅನುಮೋದನೆ ದೊರೆಯುವಾಗ ವಿಳಂಬವಾಗಿದೆ, ಭೂಸ್ವಾಧೀನ ಮಾಡಿಕೊಡುವಾಗ ವಿಳಂಬವಾಗಿದೆ. ಈಗ ಮಳೆಗಾಲವಾಗಿದ್ದು, ಕಾಮಗಾರಿ ತುರ್ತಾಗಿ ಮುಗಿಸಲು ಸಾಧ್ಯವಿಲ್ಲ ಎಂದು ಕಂಪೆನಿಯವರು ತಿಳಿಸಿದರು. ವಿಸ್ತೃತ ವಿವರಣೆಗೆೆ ಕಾಲಾವಕಾಶ ಕೇಳಿದರು. ಇದರಂತೆ ಜು. 6ರಂದು ಎಸಿಯವರ ನ್ಯಾಯಾಲಯಕ್ಕೆ ಹಾಜರಾಗುವಂತೆ ದಿನಾಂಕ ನಿಗದಿ ಮಾಡಲಾಯಿತು. ಉಡುಪಿ ಕಾಮಗಾರಿಯನ್ನು ಅಕ್ಟೋಬರ್‌ನಲ್ಲಿ, ಕುಂದಾಪುರ ಕಾಮಗಾರಿ ಮಾರ್ಚ್‌ ಒಳಗೆ ಮುಗಿಸುವುದು ಅಸಾಧ್ಯ ಎಂದು ಕಂಪೆನಿ ಪ್ರತಿನಿಧಿಗಳು ಸೂಚಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.