ಹಡಿಲು ಬಿದ್ದ ಭೂಮಿಗೆ ಹಸಿರು ಸ್ಪರ್ಶ: ಕೃಷಿಗೆ ಪ್ರೋತ್ಸಾಹಕ ಯೋಜನೆ


Team Udayavani, Jun 24, 2018, 6:30 AM IST

2306kdlm1.jpg

ಕುಂದಾಪುರ: ಇತ್ತೀಚಿನ ದಿನಗಳಲ್ಲಿ ಕೂಲಿಯಾಳುಗಳ  ಕೊರತೆಯಿಂದ ಅದೆಷ್ಟೋ ಎಕರೆಗಟ್ಟಲೆ ಕೃಷಿ ಭೂಮಿ ಹಡಿಲು ಬಿದ್ದಿವೆ . ಇದನ್ನು ಮನಗಂಡ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಡಿಲು ಬಿದ್ದ ಭೂಮಿಯಲ್ಲಿ  ಕೃಷಿ ಮಾಡಲು ವಿಶೇಷ ಪ್ರೋತ್ಸಾಹಕ ಯೋಜನೆ ಮಾಡಿದೆ. ಇದರನ್ವಯ ಕಳೆದ ವರ್ಷ 50 ಜನರಿಗೆ ತಲಾ 1 ಸಾವಿರ ರೂ.ಗಳಂತೆ ಪ್ರೋತ್ಸಾಹ ಧನ ನೀಡಲಾಗಿದ್ದು ಈ ವರ್ಷ 100 ಜನರಿಗೆ ತಲಾ 1 ಸಾವಿರ ರೂ.ಗಳಂತೆ ಒಟ್ಟು 1 ಲಕ್ಷ ರೂ. ನೀಡಲು ನಿರ್ಧರಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಯೋಜನೆಯ ಕೃಷಿ ಅಧಿಕಾರಿ ಚೇತನ್‌ ಕುಮಾರ್‌, ಪ್ರಗತಿ ಬಂಧು ತಂಡಗಳ ಮೂಲಕ ಗ್ರಾಮಾಭಿವೃದ್ಧಿ ಯೋಜನೆಯ ಅನುದಾನದ ಜತೆಗೆ ಹಡಿಲು ಭೂಮಿ, ಕೃಷಿಗೆ ಉತ್ತೇಜನ ನೀಡಲಾಗುತ್ತಿದೆ. ಇದಕ್ಕಾಗಿ ತಂಡದ ಸದಸ್ಯರೇ ಕೃಷಿ ಮಾಡುವುದರೊಂದಿಗೆ ಸರಕಾರಿ ಇಲಾಖೆಗಳ ಮೂಲಕವೂ ಮಾಹಿತಿ ನೀಡಿ ಉಪಯೋಗವಾಗುವಂತೆ ಮಾಡಲಾಗುತ್ತದೆ. ಇದರಿಂದ ಹಲವಾರು ಕುಟುಂಬಗಳು ಅಭಿವೃದ್ಧಿ ಕಂಡಿವೆ ಎಂದು ಹೇಳಿದ್ದಾರೆ.  

ಶ್ರಮ ವಿನಿಮಯ
ಸಂಘಗಳನ್ನು ಕಟ್ಟಿಕೊಂಡ ಪ್ರಗತಿ ಬಂಧು ತಂಡದ ಸದಸ್ಯರು ವಾರದ ಶ್ರಮ ವಿನಿಮಯದಲ್ಲಿ ಕೂಲಿಯಾಳುಗಳ ಸಮಸ್ಯೆ ಇರುವುದರಿಂದ ತಮ್ಮ ತಮ್ಮ ಮನೆಯ ಕೆಲಸದ ಜೊತೆಗೆ ಹಡಿಲು ಭೂಮಿ ಕೃಷಿ,  ವಾಣಿಜ್ಯ ಬೆಳೆ, ಜಾಗದ ಸಮತಟ್ಟು ಇನ್ನಿತ್ಯಾದಿ ಕೆಲಸ ಕಾರ್ಯಗಳನ್ನು ಮಾಡಲು ಸಹಕಾರಿಯಾಗಿದೆ.

ಕೃಷಿಗೆ ಉತ್ತೇಜನ 
ಯೋಜನೆಯಡಿ ಕೃಷಿಗೆ ಹೆಚ್ಚು ಒತ್ತು ನೀಡಲಾಗಿದ್ದು, ಆಸಕ್ತರಿಗೆ  ಕೃಷಿ ಇಲಾಖಾ ಧಿಕಾರಿಗಳು, ಸಂಪನ್ಮೂಲ ವ್ಯಕ್ತಿಗಳಿಂದ ವಿಚಾರಗೋಷ್ಠಿಯಲ್ಲಿ ಮಾಹಿತಿಯೊಂದಿಗೆ ಸಸಿ ವಿತರಣೆ, ಅಧ್ಯಯನ ಪ್ರವಾಸ, ಕೃಷಿ ಉತ್ತೇಜನಕ್ಕೆ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದರಿಂದಾಗಿ ಸ್ವಂತ ಭೂಮಿ ಇಲ್ಲದವರು ಕೂಡಾ ಹಡಿಲು ಬಿದ್ದ ಇತರರ ಭೂಮಿಯನ್ನು ಒಪ್ಪಂದದ ಮೇರೆಗೆ ಪಡೆದುಕೊಂಡು ಕೃಷಿ ನಡೆಸುತ್ತಿರುವುದು ಇದಕ್ಕೆ ಜ್ವಲಂತ ಉದಾಹರಣೆಯಾಗಿದೆ.

ಸಾಕಷ್ಟು ಯಶಸ್ವಿ
ಹಡಿಲು ಬಿದ್ದ ಭೂಮಿಯಲ್ಲಿ ಹಸಿರು ಬೆಳೆಸಲು ಯೋಜನೆ ಕೈಗೊಂಡ ಪ್ರೋತ್ಸಾಹಕ ಕಾರ್ಯಕ್ರಮ ಸಾಕಷ್ಟು ಯಶಸ್ವಿಯಾಗಿದೆ. ಹಡಿಲು ಭೂಮಿಯನ್ನು ಇತರರಿಗೆ ಒಪ್ಪಂದದ ಮೂಲಕ ನೀಡಿ ಅಲ್ಲಿ ತರಕಾರಿ, ಭತ್ತ ಬೆಳೆಯುತ್ತಿದ್ದಾರೆ. 
– ಮುರಳೀಧರ ಶೆಟ್ಟಿ, ಯೋಜನಾಧಿಕಾರಿ, ಧರ್ಮಸ್ಥಳ ಯೋಜನೆ 

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.