ಮೂಡುಬಗೆ-ಮಾರ್ಡಿ ರಸ್ತೆ: 2 ವರ್ಷಗಳಿಂದ ಆಗಿಲ್ಲ ದುರಸ್ತಿ


Team Udayavani, Jun 24, 2018, 6:00 AM IST

2306kdpp1.jpg

ಅಂಪಾರು: ಮಾರ್ಡಿಯಿಂದ ಮೂಡುಬಗೆಗೆ ಸಂಚರಿಸುವ ಸುಮಾರು 1.5 ಕಿ.ಮೀ. ದೂರದ ಜಿ.ಪಂ. ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಸಂಚರಿಸುವುದೇ ದುಸ್ತರ ವಾಗಿದೆ. ದುರಸ್ತಿ ಕಾಣದೇ 2 ವರುಷಗಳು ಕಳೆದಿದ್ದು, 2010ರ ಅನಂತರ ಡಾಮರೀಕರಣವೇ ಆಗಿಲ್ಲ. 

ಮಾರ್ಡಿಯಿಂದ ಮೂಡುಬಗೆಯಾಗಿ ಅಂಪಾರು, ಸಿದ್ದಾಪುರಕ್ಕೆ ಸಂಚರಿಸಲು ಇದೇ ಸಂಪರ್ಕ ರಸ್ತೆಯಾಗಿದ್ದು, ಮೂಡುಬಗೆ-ಮಾರ್ಡಿ ರಸ್ತೆಯ ಶೇಡಿನಕೊಡ್ಲುವಿನಲ್ಲಿ ಸಂಪೂರ್ಣ ಹದಗೆಟ್ಟು ಹೋಗಿದೆ. 

ದೂರು ನೀಡಿದರೂ ಸ್ಪಂದಿಸಿಲ್ಲ
ಈ ಮಾರ್ಗವಾಗಿ ದಿನನಿತ್ಯ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಮಂದಿ ಸಂಚರಿಸುತ್ತಾರೆ. ಅದರಲ್ಲೂ ಶಾಲಾ ಮಕ್ಕಳ ವಾಹನಗಳೇ ಹೆಚ್ಚಾಗಿ ಸಂಚರಿಸುತ್ತಿವೆ. ರಸ್ತೆಯ ದುರವಸ್ಥೆಯ ಬಗ್ಗೆ ಎಷ್ಟು ಬಾರಿ ದೂರು ನೀಡಿದರೂ ಪ್ರಯೋಜನ ಮಾತ್ರ ಶೂನ್ಯ. ಕೊಡ್ಲಾಡಿ- ಮಾರ್ಡಿ ಸೇತುವೆಯ ಆಚೆ ಬದಿ ರಸ್ತೆ ಆಜ್ರಿ ಗ್ರಾ.ಪಂ. ವ್ಯಾಪ್ತಿಗೆ ಒಳಪಟ್ಟಿದ್ದು, ಆ ರಸ್ತೆ ದುರಸ್ತಿಯಾಗಿ ಚೆನ್ನಾಗಿದೆ. ಆದರೆ ಸೇತುವೆಯ ಈ ಬದಿ ರಸ್ತೆ ಅಂಪಾರು ಗ್ರಾ.ಪಂ. ವ್ಯಾಪ್ತಿಗೆ ಒಳಪಟ್ಟಿದೆ. 

9 ವರ್ಷಗಳ ಹಿಂದೆ ಡಾಮರು
ಮಾರ್ಡಿ- ಮೂಡುಬಗೆ ರಸ್ತೆಗೆ 2010 ರಲ್ಲಿ ಅಂದರೆ ಸುಮಾರು 9 ವರ್ಷಗಳ ಹಿಂದೆ ಡಾಮರೀಕರಣವಾಗಿತ್ತು. ಅದರ ಅನಂತರ 2012 ರಲ್ಲಿ  ಅಲ್ಲಲ್ಲಿ  ಹೊಂಡ- ಗುಂಡಿ ಬಿದ್ದ ಕಡೆಗೆ ಪ್ಯಾಚ್‌ವರ್ಕ್‌ ಮಾಡಲಾಗಿತ್ತು. ಆ ಬಳಿಕ ಇತ್ತ ಯಾರೂ ಗಮನವೇ ಹರಿಸಿಲ್ಲ.  

ಚರಂಡಿಯೇ ಇಲ್ಲ
ಈ ರಸ್ತೆ ಇಷ್ಟೊಂದು ಹದಗೆಟ್ಟು ಹೋಗಲು ಮುಖ್ಯ ಕಾರಣ ರಸ್ತೆಯ ಎರಡೂ ಬದಿಗಳಲ್ಲಿಯೂ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆಯೇ ಇಲ್ಲ. ಇದರಿಂದ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಪ್ರತಿವರ್ಷ ಹೊಂಡ – ಗುಂಡಿಗಳ ಸಂಖ್ಯೆ ಹೆಚ್ಚಾಗುತ್ತಿದೆ. 

ಬಾಡಿಗೆ ಹಣವೆಲ್ಲ ರಿಕ್ಷಾ ದುರಸ್ತಿಗೆ 
7 ವರ್ಷಗಳಿಂದ ಹೊಂಡ- ಗುಂಡಿಗಳ ರಸ್ತೆಯಲ್ಲಿ ಸಂಚರಿಸಲು ಸಾಧ್ಯವಿಲ್ಲದಂತಾಗಿದೆ. ಬಾಡಿಗೆಯಿಂದ ಸಿಗುವ ಹಣವೆಲ್ಲ ರಿಕ್ಷಾ ದುರಸ್ತಿಗೆ ಹಾಕುವ ಸ್ಥಿತಿ ನಮ್ಮದಾಗಿದೆ. ಜಿ.ಪಂ.ನವರಿಗೆ ಹೇಳಿದರೆ ಅನುದಾನವಿಲ್ಲ  ಅಂತಾರೆ. ನಾವೇ ರಿಕ್ಷಾದವರೆಲ್ಲ  ಸೇರಿ 2-3 ಸಲ ಹೊಂಡ- ಗುಂಡಿಗಳಿಗೆ ಜಲ್ಲಿ- ಕಲ್ಲು ಹಾಕಿ ತುಂಬಿಸುವ ಕಾರ್ಯ ಮಾಡಿದ್ದೇವು. 
– ಆನಂದ ರಿಕ್ಷಾ ಚಾಲಕರು, ಮಾರ್ಡಿ

ರಸ್ತೆ ದುರಸ್ತಿಗೆ ಕ್ರಮ
ಹಿಂದಿನ ಬಾರಿ ಅನುದಾನ ಕೊರತೆಯಿಂದ ರಸ್ತೆ ದುರಸ್ತಿ ಮಾಡಲು ಸಾಧ್ಯವಾಗಿಲ್ಲ. ಈ ಬಾರಿಯ ಜಿ.ಪಂ. ಬಜೆಟ್‌ನಲ್ಲಿ ಹೆಚ್ಚಿನ ಹಣ ಬಿಡುಗಡೆಯಾಗಲಿದ್ದು, ಈ ಸಲ ಮೂಡುಬಗೆ- ಮಾರ್ಡಿ ರಸ್ತೆಯ ದುರಸ್ತಿಗೆ ಮೊದಲ ಆದ್ಯತೆ ನೀಡಲಾಗುವುದು. ಕೆಲ ದಿನಗಳ ಹಿಂದಷ್ಟೇ ಅಲ್ಲಿಗೆ ಸ್ವತ‌ಃ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಚರಂಡಿ ನಿರ್ಮಾಣಕ್ಕೂ ಗಮನ ಕೊಡಲಾಗುವುದು. 
– ಜ್ಯೋತಿ ಎಂ., ಕಾವ್ರಾಡಿ ಜಿ.ಪಂ. ಸದಸ್ಯರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.