ವಿಪಕ್ಷಗಳ ಅಪಪ್ರಚಾರದಿಂದ ಸೋಲು: ಸೊರಕೆ
Team Udayavani, Jul 2, 2018, 6:50 AM IST
ಕುಂದಾಪುರ: ನಮ್ಮ ಅವಧಿಯಲ್ಲಿ ಆದ ಅಭಿವೃದ್ಧಿ ಈವರೆಗೆ ಆಗಿಲ್ಲ.ಬಿಜೆಪಿ ಭಾವನಾತ್ಮಕವಾಗಿ ಜನರ ಮನಸ್ಸನ್ನು ಗೆದ್ದಿದೆ ವಿನಃ ಇತರ ವಿಚಾರದಲ್ಲಿ ಅಲ್ಲ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.
ಅವರು ರವಿವಾರ ಇಲ್ಲಿನ ಹರಿಪ್ರಸಾದ್ ಹೊಟೇಲ್ನ ಅಕ್ಷತಾ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಆತ್ಮಾವಲೋಕನ ಸಭೆ
ವಿಪಕ್ಷಗಳ ಅಪಪ್ರಚಾರದಿಂದಾಗಿ ಸೋಲನ್ನು ಅನುಭವಿಸ ಬೇಕಾಯಿತು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಒತ್ತು ನೀಡಲು ಆತ್ಮಾವ ಲೋಕನ ಸಭೆ ನಡೆಸಲಾಗುತ್ತಿದೆ. ಪ್ರತೀ ರವಿವಾರ ಎರಡು ಬ್ಲಾಕ್ಗಳಿಗೆ
ಭೇಟಿ ನೀಡಿ ಕಾರ್ಯಕರ್ತರ ಜತೆ ಸಭೆ ನಡೆಸಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ಚಂದ್ರ ಶೆಟ್ಟಿ ಮಾತನಾಡಿ, ಪೈಪ್ಲೈನ್ ಹಾದು ಹೋಗುವ ಗ್ರಾಮಗಳ ಜನತೆಗೆ ಕಚ್ಛಾ ನೀರು ಕೊಟ್ಟು ಉಡುಪಿಗೆ ಮಾತ್ರ ಶುದ್ಧ ಕುಡಿಯುವ ನೀರು ಕೊಡುತ್ತೇವೆ ಎನ್ನುವ ವಾರಾಹಿ ಅಮೃತ್ ಯೋಜನೆ ಅಮಾನವೀಯ. ಉಡುಪಿಗೆ ನೀರು ಕೊಡುವುದಕ್ಕೆ ವಿರೋಧವಿಲ್ಲ. ಆದರೆ ಪೈಪ್ಲೈನ್ಗಾಗಿ ಭೂಸ್ವಾಧೀನ ಮಾಡದೆ 38 ಕಿ.ಮೀ. ರಸ್ತೆಯನ್ನು ಅಗೆದು ಪೈಪ್ ಕೊಂಡೊಯ್ಯುತ್ತೇವೆ ಎನ್ನುವುದು ರಾಷ್ಟ್ರ ದ್ರೋಹಕ್ಕೆ ಸಮ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ್ ತೋನ್ಸೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಾರ್ಕಳ ಮಾಜಿ ಶಾಸಕ ಕೆ. ಗೋಪಾಲ್ ಭಂಡಾರಿ, ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಕೆಪಿಸಿಸಿ ಕಾರ್ಯದರ್ಶಿ ಮುರಳಿ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಅಶೋಕ್ ಕುಮಾರ್, ಹೆರಿಯಣ್ಣ, ಕಾಂಗ್ರೆಸ್ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಮಾಣಿ ಗೋಪಾಲ್ ಮೊದಲಾದವರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಸ್ವಾಗತಿಸಿ, ನಾರಾಯಣ ಆಚಾರ್ಯ ನಿರ್ವಹಿಸಿ, ವಂದಿಸಿದರು.
ಭ್ರಷ್ಟಾಚಾರದಿಂದ ಪಕ್ಷಕ್ಕೆ ಹಿನ್ನಡೆ
ಸೋಲಿನ ಸಂದರ್ಭದಲ್ಲೂ ಆತ್ಮಾವ ಲೋಕನ ಮಾಡಿಕೊಳ್ಳಬೇಕು. 94ಸಿ ಯಂತಹ ಉತ್ತಮ ಯೋಜನೆ ನಮ್ಮ ಸರಕಾರ ಕೊಟ್ಟರೂ ಹಣ ಕೊಟ್ಟರೆ ಮಾತ್ರ ಹಕ್ಕುಪತ್ರ ಮಂಜೂರು ಮಾಡುವ ಅಧಿಕಾರಿ ಗಳ ಭ್ರಷ್ಟತನದಿಂದ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಪ್ರತಾಪ್ಚಂದ್ರ ಶೆಟ್ಟಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ