ಕಳಪೆ ಕಾಮಗಾರಿ: ಹದಗೆಟ್ಟ ಅಂಪಾರು – ಕ್ರೋಢಬೈಲೂರು ರಸ್ತೆ


Team Udayavani, Jul 4, 2018, 2:05 AM IST

amparu-road-3-7.jpg

ಕ್ರೋಢಬೈಲೂರು: ಕ್ರೋಢ ಬೈಲೂರಿಗೆ ಸಂಪರ್ಕ ಕಲ್ಪಿಸುವ ಅಂಪಾರು – ಹೊಸೂರು – ಕ್ರೋಢ ಬೈಲೂರು ರಸ್ತೆ ಹಾಗೂ ಶಾನ್ಕಟ್ಟು – ಕೊಂಡಳ್ಳಿ – ಕ್ರೋಢಬೈಲೂರು ರಸ್ತೆ ಕಳಪೆ ಕಾಮಗಾರಿಯಿಂದಾಗಿ ಸಂಪೂರ್ಣ ಹದಗೆಟ್ಟು ಹೋಗಿದ್ದು, ಇದರಿಂದ ಈ ಭಾಗದಲ್ಲಿ ನಿತ್ಯ ಸಂಚರಿಸುವ ನೂರಾರು ಮಂದಿ ತೊಂದರೆ ಅನುಭವಿಸುತ್ತಿದ್ದಾರೆ. ಶಾನ್ಕಟ್ಟು ಮಾರ್ಗವಾಗಿ ಕೊಂಡಳ್ಳಿ ಮೂಲಕ ಕ್ರೋಢಬೈಲೂರಿಗೆ 6 ಕಿ.ಮೀ. ಅಂತರವಿದ್ದರೆ, ಅಂಪಾರು ಮಾರ್ಗವಾಗಿ ಹೊಸೂರು ಮೂಲಕ ಕ್ರೋಢಬೈಲೂರಿಗೆ ಕೇವಲ 2 ಕಿ.ಮೀ. ದೂರವಿದೆ. ಆದರೆ ವಿಪರ್ಯಾಸವೆಂದರೆ ಈ ಎರಡೂ ರಸ್ತೆಗಳಲ್ಲಿ ಈಗ ಹೊಂಡ – ಗುಂಡಿಗಳದ್ದೇ ಕಾರುಬಾರು.

ಕಳಪೆ ಕಾಮಗಾರಿ
ಅಂಪಾರು – ಕ್ರೋಢ ಬೈಲೂರು ರಸ್ತೆಯು ಕಳಪೆ ಕಾಮಗಾರಿಯಿಂದಾಗಿ ಡಾಮರೀಕರಣಗೊಂಡ ಅತ್ಯಲ್ಪ ಸಮಯದಲ್ಲೇ ತೀವ್ರ ಹದಗೆಟ್ಟು ಹೋಗಿದೆ. ಈ ರಸ್ತೆಯ 500 ಮೀಟರ್‌ನಷ್ಟು ದೂರ ಇನ್ನೂ ಕೂಡ ಡಾಮರೀಕರಣ ಆಗಿಲ್ಲ. ಬಾಕಿ ಉಳಿದ ಭಾಗ ಡಾಮರೀಕರಣಗೊಂಡ 2 ವರ್ಷಗಳಷ್ಟೇ ಆಗಿದೆ. ಇನ್ನೂ ಶಾನ್ಕಟ್ಟು ಕೊಂಡಳ್ಳಿ – ಕ್ರೋಢಬೈಲೂರು ರಸ್ತೆ ದುರಸ್ತಿಯಾಗದೇ 4-5 ವರ್ಷಗಳೇ ಆಗಿವೆ. ಈ ಭಾಗದಿಂದ ಅನೇಕ ಮಂದಿ ವಿದ್ಯಾರ್ಥಿಗಳು ಸೇರಿದಂತೆ ಕೆಲಸಕ್ಕಾಗಿ ಶಂಕರನಾರಾಯಣ ಕಡೆಗೆ ಸಂಚರಿಸುತ್ತಾರೆ. ಪ್ರತಿ ದಿನ ಕ್ರೋಢಬೈಲೂರಿಗೆ 1 ಸರಕಾರಿ ಹಾಗೂ 2 ಖಾಸಗಿ ಬಸ್‌ಗಳು ಈ ಹೊಂಡ – ಗುಂಡಿಗಳ ರಸ್ತೆಯಲ್ಲಿಯೇ ನಿತ್ಯ 5 ಟ್ರಿಪ್‌ ನಲ್ಲಿ ಸಂಚರಿಸುತ್ತವೆ.


ಬಂದ ಅನುದಾನ ಬೇರೆ ರಸ್ತೆಗೆ?

ಅಂಪಾರು- ಕ್ರೋಢಬೈಲೂರು ರಸ್ತೆ ಅಭಿವೃದ್ಧಿಗೆ 2 ಕೋಟಿ ರೂಪಾಯಿ ಅನುದಾನ ಬಂದಿದ್ದರೂ, ಅದನ್ನು ಈ ರಸ್ತೆಗೆ ಬಳಸದೇ ಬೇರೆ ರಸ್ತೆಗೆ ನೀಡಿ, ಈ ಭಾಗಕ್ಕೆ ವಂಚಿಸಿದ್ದಾರೆ ಎನ್ನುವ ಆರೋಪ ಕ್ರೋಢಬೈಲೂರು ನಾಗರಿಕರದು.

ಸಂಚಾರವೇ ದುಸ್ತರ
ಈ ರಸ್ತೆಯಲ್ಲಿ ದಿನಂಪ್ರತಿ ನೂರಾರು ವಾಹನಗಳು ಸಂಚರಿಸುತ್ತವೆ. ಈಗ ಹೊಂಡ – ಗುಂಡಿಗಳಿಂದಾಗಿ ಸಂಚರಿಸಲು ಸಾಧ್ಯವೇ ಇಲ್ಲದಂತಾಗಿದೆ. ಶೀಘ್ರ ಸಂಬಂಧಪಟ್ಟವರು ದುರಸ್ತಿಪಡಿಸಲು ಮುಂದಾಗಲಿ. 
– ಭುಜಂಗ ಶೆಟ್ಟಿ, ಕ್ರೋಢಬೈಲೂರು

ದೂರಿತ್ತರೂ ಪ್ರಯೋಜನವಿಲ್ಲ
ಶಾನ್ಕಟ್ಟು – ಕೊಂಡಳ್ಳಿ- ಕ್ರೋಢಬೈಲೂರು ರಸ್ತೆಯು ಕಳಪೆ ಕಾಮಗಾರಿಯಿಂದಾಗಿ ತೀರಾ ಹದಗೆಟ್ಟು ಹೋಗಿದೆ. ಈ ಕುರಿತು ಜನಪ್ರತಿನಿಧಿಗಳಿಗೆ ದೂರು ನೀಡಿದರೂ, ಅವರದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಈ ರಸ್ತೆ ದುರಸ್ತಿಯಾಗದೇ 4-5 ವರ್ಷಗಳೇ ಕಳೆದಿವೆ. 
– ಚಂದ್ರಶೇಖರ ಶೆಟ್ಟಿ, ಕೊಂಡಳ್ಳಿ 

ರಸ್ತೆ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಕೆ
ಅಂಪಾರು- ಕ್ರೋಢಬೈಲೂರು ರಸ್ತೆ ಡಾಮರಾಗಿದ್ದರೂ, ಇಲ್ಲಿ ರಸ್ತೆ ಬದಿ ಮರಗಳೆಲ್ಲ ಹೆಚ್ಚಾಗಿರುವುದಿರಿಂದ ನೀರು ರಸ್ತೆಗೆ ಬಿದ್ದು ಹಾಳಾಗುತ್ತಿದೆ. ಇನ್ನೂ ಶಂಕರನಾರಾಯಣ ಗ್ರಾ.ಪಂ. ವ್ಯಾಪ್ತಿಯಲ್ಲಿ ಡಾಮರಾಗಿದೆ.ಆದರೆ ಅಂಪಾರು ಗ್ರಾ.ಪಂ. ವಾಪ್ತಿಯಲ್ಲಿ ಡಾಮರೇ ಆಗಿಲ್ಲ. ಈ ರಸ್ತೆಯ ಕಾಂಕ್ರಿಟೀಕರಣಕ್ಕೆ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಬೇರೆ ಯಾವ ಅನುದಾನವೂ ಬಂದಿಲ್ಲ. 
– ಸದಾಶಿವ ಶೆಟ್ಟಿ, ಶಂಕರನಾರಾಯಣ ಗ್ರಾ.ಪಂ. ಅಧ್ಯಕ್ಷರು

— ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.